ಶನಿವಾರ, ಏಪ್ರಿಲ್ 4, 2026

ಭಟ್ಟರು ಕೆಟ್ಟರು ಈ ನಡೆತೆಯಿಂದ : ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ಟರ 'ಸಿಲ್ಲಿ' ಹೇಳಿಕೆ ಸುತ್ತಾ ಒಂದು ಸುತ್ತು !

ಹೇಳಿ-ಕೇಳಿ ನಾನು ಯಕ್ಷಗಾನ ಪ್ರೇಮಿ ಅದೂ ಅಲ್ಲದೇ ನನ್ನ ಪಕ್ಕದ ಊರಿನಲ್ಲಿ ಸರಿಸುಮಾರು ನಾಲ್ಕು ಕಿಲೋಮೀಟರ್ ದೂರದಲ್ಲಿ ನಡೆದ ಘಟನೆ ಇದೀಗ ರಾಜ್ಯದಾದ್ಯಂತ ಸುದ್ದಿ ಆಗುತ್ತಿದೆ.ಈ ಸುದ್ದಿ ಕಾಡುತ್ತಿರುವುದರಿಂದ ನನ್ನ ಒಡಲ ಧ್ವನಿಯಲ್ಲಿ ಹರಡಲೇಬೇಕಾಗಿದೆ ನಾನು ಊರಿನಲ್ಲಿದ್ದಿದ್ದರೆ ಖಂಡಿತವಾಗಿಯೂ 10-15 ಕಿ.ಮೀ ದೂರದಲ್ಲಿ ಎಲ್ಲೇ ಆಟ ಇದ್ದಾರೂ ಆಮಂತ್ರಣ ಇಲ್ಲದಿದ್ದರೂ,ರಾತ್ರಿ ಬೈಕ್ ಸ್ಟಾರ್ಟ್ ಆಗದೇ ಇರುತ್ತಿರಲಿಲ್ಲ ಇದು ಬಜಪನ್ ನಿಂದ ನೆಡೆದುಕೊಂಡು ಬಂದ ರೀತಿ. ಅದು ಮಾರ್ಚ್ 25ನೇ ತಾರೀಕು ನಾನು ಊರಿನಲ್ಲಿ ಇರಲಿಲ್ಲ ಆಟ ಮಿಸ್ ಮಾಡ್ಕೊಂಡಿದ್ದೆ.ಹೆನ್ನಾಬೈಲುವಿನ ಬಕ್ರ ಮನೆ ಎಂಬಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದವರಿಂದ ಹರಕೆ ಬಯಲಾಟ ಇದ್ದಿತ್ತು 'ಶ್ರೀ ಕೃಷ್ಣ ಪಾರಿಜಾತ' ಪ್ರಸಂಗ.ಅದರ ನೇರ ಪ್ರಸಾರ ಕ್ಷೇತ್ರದ ಮೇಳದವರ ಅಧೀಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರವಾಗುತ್ತಿತ್ತು.ಸಮಯ ರಾತ್ರಿ 11 ಗಂಟೆ ಆಗಿರಬಹುದೇನೋ,? ಧರ್ಮಸ್ಥಳ ಮೇಳದವರ ಆಟ ಆಗುವುದು ನಮ್ಮ ಆ ಪ್ರದೇಶದಲ್ಲಿ ಬಹಳ ಅಪರೂಪ!ತೆಂಕುತಿಟ್ಟು ಅಪರೂಪದಲ್ಲಿ ಅಪರೂಪವೇ ಎಂದರು ತಪ್ಪಲ್ಲ.ಇನ್ನು ಕ್ಷೇತ್ರದ ಮೇಳವೆಂದ ಮೇಲೆ ಹೇಳಬೇಕೇ ಅಕ್ಕಪಕ್ಕದ ಗ್ರಾಮದವರು ಅದೂ ಇತ್ತೀಚಿಗೆ ಹೆಚ್ಚಿನ ಎಲ್ಲಾ ಮೇಳಗಳು ಕಾಲಮಿತಿಗೆ ಒಗ್ಗಿಕೊಂಡಿರುವುದರಿಂದಲೋ ಏನೋ ಪ್ರೇಕ್ಷಕರು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು., ಸ್ವಾಭಾವಿಕ ಈಗಾಗಲೇ ಹೇಳಿದಂತೆ !! ಕೃಷ್ಣನ ವೇಷಧಾರಿಯಾಗಿ ಪ್ರಸಿದ್ಧ ಅರ್ಥ ಧಾರಿಯಾಗಿರುವ ಹಿರಿಯ ಕಲಾವಿದರಾದ ಉಜಿರೆ ಅಶೋಕ್ ಭಟ್ಟರು ರಂಗಸ್ಥಳದಲ್ಲಿದ್ದರು ಭಾಗವತರಾದ ಸಿರಿಮನೆ ರಾಮಕೃಷ್ಣ ಮಯ್ಯರ ಸೊಗಸಾದ ಆಲಾಪನೆಗೆ ಶಿಳ್ಳೆ,ಚಪ್ಪಾಳೆಗಳು ಧಾರಾಳವಾಗಿ ಬೀಳುತ್ತಿದ್ದವು.ಅದೇನಾಯ್ತೋ ಗೊತ್ತಿಲ್ಲ ಕೃಷ್ಣನ ವೇಷಧಾರಿಯಾಗಿದ್ದ ಅಶೋಕ್ ಭಟ್ಟರ ಮೇಲೆ ಭೂತದ ಆವೇಶವಾಯಿತೆನೋ ಎಂಬಂತೆ ಭಾಗವತರ ಪದ ಮುಗಿದು ಚಂಡೆ ಪೆಟ್ಟು ನಿಲ್ಲುವುದಕ್ಕಿಂತ ಮೊದಲೇ "ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗ್ತೇನೆ ಡೊಂಬರಾಟ ಅಲ್ಲ ಇದು ನಾನು ಆಗನಿಂದ ಗಮನಿಸುತ್ತಿದ್ದೇನೆ ಚೌಕಿಯಲ್ಲಿದ್ದೇನೆ ಸಭ್ಯ ಸಭೆಯನ್ನು ಬಯಸುತ್ತೇನೆ ನನಗೆ ದಾಕ್ಷಿಣ್ಯ ಯಾರದ್ದು ಇಲ್ಲ. ಇಲ್ಲಿ ಯಾಕೆ ಕುಣಿಯುತ್ತೇವೆ ಗೊತ್ತುಂಟ ನಿಮಗೆ? ಯಾರು ಆಟ ಆಡಿಸುವರು ಏನಂತ ಆಲೋಚನೆ ಮಾಡಿದ್ದೀರಿ ?ನಿಮಗೆ ಈ ಕ್ಷೇತ್ರದಲ್ಲಿ ನಮ್ಮ ತಿರುಗಾಟ ಎಷ್ಟು ಅಂತ ಗೊತ್ತುಂಟಾ? ಎಂತದ್ದು ಅದು ಶಿಳ್ಳೆ ಏನದು ಶಿಳ್ಳೆ ? ಕೋಳಿಕಟ್ಟವ? ಇಲ್ಲಿ ಕಂಬಳವಾ ? ಯಾರದು ಏನು ಆಲೋಚನೆ ಮಾಡಿದ್ದೀರಿ? ರೆಕಾರ್ಡ್ ಆಗಿದೆ ನನಗೆ ಯಾರ ದಾಕ್ಷಿಣ್ಯ ಇಲ್ಲ ಯಾರದು ಶಿಳ್ಳೆ ಹಾಕಿದವ ?ಆಗದಿದ್ದರೆ ಹೋಗು ಬನ್ಸ್ ತಿಂದು ಭಾಗವತರ ಕಂಠವನ್ನು ತೆಗಿತೀರಾ ? ಸಭ್ಯ ಸಭೆಯನ್ನು ಬಯಸ್ತೇನೆ ಅರ್ಥ ಮಾಡಿಕೊಳ್ಳಬೇಕು ಹುಚ್ಚರನ್ನು ಬೆಳೆಸಬೇಡಿ ಕಲಾಪ್ರೇಕ್ಷಕರನ್ನು ಬೆಳೆಸಿ., ಒಂದು ಕಲಾ ಸೇವೆ ನಡೆಯುತ್ತಿರುವುದು ಇಲ್ಲಿ ನಾವು ಕೆಲಸ ಇಲ್ಲದೇ ಇರೋದಕ್ಕೆ ಕುಣಿಯುವುದಲ್ಲ ಬೆವರು ಇಳಿಸುವುದಲ್ಲ ಆಯ್ತಾ ವಿಶಿಲ್ ಕೊಟ್ಟವ್ರ್ಯಾರು ದುಡ್ಡು ಕೊಟ್ಟವ್ರ್ಯಾರು ಧಾರ್ಮಿಕ ಭಾಷಣ ಮಾಡಬೇಕಾ ಒಂದು ಗಂಟೆ ಆಟ ಮಾಡಬೇಕಾ ?ಹೇಳಿ ಏನ್ ಹೇಳ್ತೀರಿ ಹಿರಿಯರೇ? ಎಂದು ಒಂದೇ ಸಮನೆ ಪ್ರೇಕ್ಷಕರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಅವಮಾನ ರೀತಿಯಲ್ಲಿ ರಂಗಸ್ಥಳದಲ್ಲಿ ಹೇಳಿದ್ದರು. ಆ ವಿಡಿಯೋ ಕ್ಷಣಮಾತ್ರದಲ್ಲಿ ಯಕ್ಷಗಾನ ಪ್ರೇಮಿಗಳಿಂದ ವೈರಲ್ ಆಗಿತ್ತು. ಪರ -ವಿರೋಧ ಚರ್ಚೆಗೆ ಗ್ರಾಸವಾಯಿತು. ಪರಕಿಂತಲೂ ಅಶೋಕ್ ಭಟ್ಟರ ಈ ಹೇಳಿಕೆ ಕಲಾರಂಗ, ಕಲಾ ಅಭಿಮಾನಿಗಳು, ಕಲಾವಿದರು, ಕಲಾಪ್ರೇಕ್ಷಕರ ಆಕ್ರೋಶಕ್ಕೆ ಕಾರಣವಾಯಿತು.ಪತ್ರಿಕೆ,ಟಿವಿ ಮಾಧ್ಯಮಗಳಲ್ಲಿ ಬಿಸಿ -ಬಿಸಿ ಪ್ರಚಾರ ಪಡೆಯಿತು. ಹಿರಿ-ಕಿರಿಯ ಕಲಾವಿದರುಗಳು ಇವರ ಈ ಹೇಳಿಕೆ ವಿರುದ್ಧ ಹರಿಹಾಯ್ದರು.ಟ್ರೊಲ್ ಪೇಜ್ ಗೆ ಕೂಡಾ ಆಹಾರವಾಯಿತು.
ಇನ್ನು ಹಿರಿಯ ಜನಪ್ರಿಯ ಯಕ್ಷಗಾನ ಕಲಾವಿದ ಸರಪಾಡಿ ವಿಶ್ವನಾಥ ಶೆಟ್ಟಿ ಅವರು ಮುಖ್ಯವಾಹಿನಿಗೆ ಬಂದು ಇದನ್ನು ಖಂಡಿಸಿದರು ಅಂತಹ ಕಲಾವಿದರಿಗೆ ಬುದ್ಧಿವಾದ ಹೇಳಿದರು ಹಾಗೂ ಕಲಾ ಪ್ರೇಮಿಗಳ ಪರವಾಗಿ ಕ್ಷಮೆಯನ್ನೂ ಯಾಚಿಸಿದರು. ಇನ್ನು ಸಾಕಷ್ಟು ಪ್ರಸಿದ್ಧ ಕಲಾವಿದರುಗಳು ರಂಗಸ್ಥಳದಲ್ಲಿ ಕಥೆ ಸಾಗುವ ಮಧ್ಯದಲ್ಲಿ ನೇರಾ -ನೇರ ಟಾಂಗ್ ನೀಡಿದರು.ಹಾಸ್ಯಾಸ್ಪದವಾದ ರಂಜಿಸಿದರು.ಕಂಬಳದ ಆಯೋಜಕರು ಕಂಬಳ ಪ್ರೇಮಿಗಳು ಸಹಾ ಭಟ್ಟರ ವಿರುದ್ಧ ಕಿಡಿ ಕಾರಿದರು.ತೀವ್ರವಾಗಿ ತರಾಟೆಗೆ ತೆಗೆದು ಕೊಂಡಿದ್ದಾರೆ. ಯಕ್ಷಗಾನ ಎಂಬುದು ಗಂಡು ಕಲೆ, ದೈವಿಕಲೆ, ರಾಜಕಲೆ ಎಂದು ಪ್ರಸಿದ್ಧಿ ಪಡೆದಿದೆ ನೂರಾರು ವರ್ಷಗಳ ಇತಿಹಾಸವಿದೆ. ಆಧುನಿಕ ವಿಜ್ಞಾನ ತಂತ್ರಜ್ಞಾನ ಟಿವಿ ಕಂಪ್ಯೂಟರ್ ಗಳ ನಡುವೆಯೂ ಸಹಾ ಈ ಕಲೆ ಇನ್ನೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಆಧುನಿಕ ದಿನಗಳಲ್ಲಿ ಪ್ರೇಕ್ಷಕರ ಸಂಖ್ಯೆ ಕುಂಠಿತಗೊಳ್ಳುತ್ತಿದ್ದರೂ ,ಕಾಲಕ್ಕೆ ತಕ್ಕಂತೆ ವಿವಿಧತೆಗಳನ್ನು ಅಳವಡಿಸಿಕೊಂಡು ಕಾಲಮಿತಿ ಆಟಗಳಿಂದ ಪ್ರೇಕ್ಷಕರನ್ನು ಇನ್ನು ಹಿಡಿದಿಟ್ಟುಕೊಂಡಿದೆ.ಆದರೆ ಇಂತಹ ಕಲಾವಿದರುಗಳಿಂದ ಈ ಅಸಹ್ಯತನದಿಂದ ಆಟಕ್ಕೆ ಬರುವವರ ಸಂಖ್ಯೆ ಕುಂಠಿತಗೊಂಡರೂ ಅಚ್ಚರಿ ಪಡಬೇಕಿಲ್ಲ.ಕಲಾವಿದರನ್ನು ಬೆಳೆಸಿರುವುದು, ಬೆಳೆಸಿದ್ದು ,ಬೆಳೆಸುವುದು ಪ್ರೇಕ್ಷಕರಲ್ಲವೇ ? ಪ್ರೇಕ್ಷಕರ ಚಪ್ಪಾಳೆ ಶಿಳ್ಳೆಗಳೇ ಕಲಾವಿದರಿಗೆ ಶ್ರೀ ರಕ್ಷೆ ಅದೇ ಅವರ ಹುಮ್ಮಸ್ಸು, ಉತ್ಸಾಹ, ಪ್ರೋತ್ಸಾಹಕ್ಕೆ ದಾರಿ ದೀಪ !ಅಂತಹ ಪ್ರೇಕ್ಷಕರನ್ನು ಆ ಭವ್ಯ, ದಿವ್ಯ ವೇದಿಕೆಯಲ್ಲಿ ಅವಮಾನಿಸಿರುವುದು ಸಹ್ಯವೇ ? ಉಜಿರೆ ಅಶೋಕ್ ಭಟ್ಟರಿಗೆ ಶಿಳ್ಳೆ ,ಚಪ್ಪಾಳೆಗಳ ಪ್ರೋತ್ಸಾಹ ಅಗತ್ಯವಿಲ್ಲದಿದ್ದರೆ ಅಥವಾ ಅದರಿಂದ ತೊಂದರೆಯಾಗುತ್ತಿದ್ದರೆ ಅದನ್ನು ಅಲ್ಲಗಳೆಯಲು ಹತ್ತು- ಹಲವು ಉಪಾಯಗಳಿದ್ದವು ,ಕಥಾ ಪ್ರಸಂಗದ ಸಂಭಾಷಣೆ ನಡುವೆ ಅದನ್ನು ಪ್ರಸ್ತಾವಿಸಿ ಶಿಳ್ಳೆ ಚಪ್ಪಾಳೆ ಗೆ ಕಡಿವಾಣ ಹಾಕಬಹುದು.ಆಟ ಆಡಿಸುವವರನ್ನು ,ಸಂಯೋಜಕರನ್ನು ಬರ ಹೇಳಿ ಅವರಿಗೆ ವಿಷಯ ಪ್ರಸ್ತಾಪಿಸಿ ಅಲ್ಲಿಂದ ಸಂದೇಶ ರವಾನಿಸುವ ಅವಕಾಶಗಳಿತ್ತು., ಭಾಗವತರ ಮೈಕಿನಲ್ಲಿ ವಿನಂತಿ ಪಡಿಸಬಹುದಿತ್ತು, ಇನ್ನು ಆಟದ ಮಧ್ಯ ಕೃತಜ್ಞತೆ ಕೋರಲು ಬರುವ ಕಲಾವಿದರಿಗೆ ಈ ವಿಷಯವನ್ನು ಕೊಟ್ಟು ಸೌಜನ್ಯವಾಗಿ ವಿವೇಚನಾ ರೀತಿಯಲ್ಲಿ ಸಾರಬಹುದಿತ್ತು. ಅದನ್ನು ಬಿಟ್ಟು ರಂಗಸ್ಥಳದಲ್ಲಿಯೇ ಏಕಾಏಕಿ ಪ್ರೇಕ್ಷಕರಿಗೆ,ಆಟ ಆಡಿಸುವವರಿಗೆ ಅವಮಾನ ಮಾಡುವುದರ ಜೊತೆಗೆ ಜನಪ್ರೀಯ ಜಾನಪದ ಕ್ರೀಡೆಗಳಲ್ಲಿ ಒಂದಾದ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳ ,ಕೋಳಿ ಅಂಕಕ್ಕೆ ಹೋಲಿಸಿದ್ದು ,ಹೀಯಾಳಿಸಿದ್ದು ಎಷ್ಟು ಸರಿ ?ಇನ್ನು ಡೊಂಬ ಸಮುದಾಯದವರು ಆಚರಿಸುವ ಡೊಂಬರಾಟ ಬಗ್ಗೆ ಲಘುವಾಗಿ ಉದಾಹರಿಸಿದ್ದು ನಿಜಕ್ಕೂ ಜೀರ್ಣಿಸಿಕೊಳ್ಳಲಾರದ ವಿಚಾರ. ಉಜಿರೆ ಆಶೋಕ ಭಟ್ಟರ ಬಗ್ಗೆ ಒಳ್ಳೆಯ ಅಭಿಮಾನವಿದೆ ಹಿರಿಯ ಕಲಾವಿದ ಯಾವುದೇ ಪಾತ್ರವಾದರೂ ಜೀವತುಂಬವ ಅದ್ಬುತ ವೇಷಧಾರಿ, ತಾಳಮದ್ಧಲೆಯ ಮಹಾರಥ ಅವರ ಅರ್ಥಗಾರಿಕೆಗೆ ಮಾರೋ ಹೋಗದೆ ಇರುವವರೇ ಇಲ್ಲ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದ ಇವರು ಒಂದೇ ಒಂದು ದಿನ ಎಲ್ಲವನ್ನೂ ಹಾಳು ಮಾಡಿಕೊಂಡರು . ಈ ಹೇಳಿಕೆಗೆ ಬೇರೆ ಯಾವುದೇ ಪ್ರದೇಶದಲ್ಲಾದರೂ ಅಲ್ಲಿನ ಚಿತ್ರಣ ಬದಲಾಗುತ್ತಿತ್ತು ಅದಕ್ಕೆ ತಕ್ಕ ಉತ್ತರ ಅದೇ ಸಮಯದಲ್ಲಿ ಅಲ್ಲಿನ ಕಲಾಪ್ರೇಮಿಗಳು ನೀಡುತ್ತಿದ್ದರು ಎನ್ನುವುದು ಹಲವರ ಅಭಿಪ್ರಾಯ .ಕುಂದಾಪುರ ಭಾಗದ ಜನರು ಮುಗ್ಧ ಜೀವಿಗಳು ಅದೇ ಹೇಳಿಕೆಯನ್ನು ಬೇರೆ ಡೆ ನೀಡುತ್ತಿದ್ದರೆ ಆ ಕ್ಷಣವೇ ಅಲ್ಲಿಂದ ಜಾಗ ಖಾಲಿ ಮಾಡಬೇಕಿತ್ತು ಯಾಕೆಂದರೆ ಈ ಹಿಂದಿಂದ ಘಟನೆಗಳನ್ನು ನೆನಪು ಮಾಡಿಕೊಂಡರೇ, ಈ ಹಿಂದಿನ ಶಿರಸಿಯ ಘಟನೆಯಾಗಿರಬಹುದು ಅಥವಾ ಬೆಳ್ತಂಗಡಿ ನಡೆದ ಅಹಂಕಾರಿತನಕ್ಕೆ ಬೆಲೆತೆತ್ತಿದ್ದರು ಆದರೂ ಅದರಿಂದ ಇನ್ನೂ ಬುದ್ಧಿ ಕಲಿತಿಲ್ಲ ಇದು ನಿಜಕ್ಕೂ ಒಳ್ಳೆ ಬೆಳವಣಿಗೆ ಅಲ್ಲವೇ ಅಲ್ಲ ಈಗಾಗಲೇ ವ್ರತಿ ಜೀವನದ ಕೊನೆ ಹಂತದಲ್ಲಿರುವ ಇವರು ಉಳಿದಿರುವ ದಿನಗಳಲ್ಲಿ ಕಲಾ ಪ್ರೌಢತ್ವವನ್ನು ಬೆಳೆಯಿಸಿಕೊಂಡು ಪ್ರೇಕ್ಷಕರ ವಲಯದಿಂದ ಕಲೆಗೆ ಬೆಲೆ ಸಿಗಲಿ ಎಂದೆಷ್ಟೇ ಹೇಳಬಹುದು.

ಬುಧವಾರ, ಮಾರ್ಚ್ 11, 2026

ಅವಮಾನಿಸಿದವರೇ ಮಾಡಿದರು ಸನ್ಮಾನ ! ಅಂಜದೇ ಸಾಧನೆಗೈದ ಸಂಜು !!

ಎಸ್ !ಅಂತೂ ಎಲ್ಲರ ನಿರಿಕ್ಷೆಯಂತೆ ಮ್ಯಾನ್ ಇನ್ ಬ್ಲೂ ಹುಡುಗರು ಪ್ರತಿಷ್ಠಿತ ಟಿ ಟ್ವೆಂಟಿ 2026ರ ಕ್ರಿಕೆಟ್ ವಿಶ್ವ ಕಪ್ ನ್ನು ಗೆದ್ದು ವಿಶ್ವ ಚಾಂಪಿಯನ್ ಆಗಿ ಮತ್ತೊಮ್ಮೆ ಹೊರಹೊಮ್ಮಿದ್ದಾರೆ . ಎರಡು ವರ್ಷಕ್ಕೊಮ್ಮೆ ನಡೆಯುವ ಟಿ20 ವಿಶ್ವಕಪ್ ಪಂದ್ಯಾಟವು ಪ್ರಾರಂಭಿಕ ಪಂದ್ಯ ಧೋನಿ ನೇತೃತ್ವದಲ್ಲಿ 2007ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಮೂಡಿಗೆರೆಸಿಕೊಂಡಿತು. ಸಾಕಷ್ಟು ವಿರಾಮದ ಬಳಿಕ ಇಂಡಿಯನ್ ಟೀಮ್ 2024ರಲ್ಲಿ ರೋಹಿತ್ ಶರ್ಮ ನಾಯಕತ್ವದಲ್ಲಿ ಮತ್ತೆ ಕಪ್ ಗೆ ಮುತ್ತಿಕ್ಕಿತ್ತು . ಇದೀಗ ಗೆದ್ದು ಬೀಗಿ ಸತತ ಎರಡು ಬಾರಿ ಒಟ್ಟು ಮೂರು ಬಾರಿ ವಿಶ್ವಕಪ್ ಗೆದ್ದ ತಂಡವಾಗಿ ವಿಶ್ವ ದಾಖಲೆಯನ್ನು ತನ್ನ ಹೆಸರಿಗೆ ಬರೆಯಿಸಿ ಕೊಂಡಿದೆ. ನಮ್ಮ ಭಾರತದ ಕ್ರಿಕೆಟ್ ತಂಡದಲ್ಲಿ ಇರುವಷ್ಟು ಅತ್ತ್ಯುತ್ತಮ ಆಟಗಾರರು ಬೇರೆಯಲ್ಲೂ ಸಿಗಲಿಕ್ಕೆ ಇಲ್ಲ ಒಬ್ಬರಿಗಿಂತ ಒಬ್ಬರು ಬಲಿಷ್ಠರು ಇಂತಹ ಪ್ಲೇಯರ್ಗಳನ್ನು ಅರಸಿ ಆರಿಸಿ ಆಯ್ಕೆ ಮಾಡೋದು ಸುಲಭದ ಮಾತು ಅಲ್ಲವೇ ಅಲ್ಲ ಅದೊಂದು ದೊಡ್ಡ ಸವಾಲು !. ಈ ಬಾರಿ ಹದಿನೈದು ಸದಸ್ಯರುಳ್ಳ ಒಳ್ಳೆಯ ಟೀಮನ್ನು ಆಡಳಿತ ಮಂಡಳಿ ಸೆಲೆಕ್ಟ್ ಮಾಡಿದಾಗಲೇ ಕ್ರಿಕೆಟ್ ಪಂಡಿತರು ಲೆಕ್ಕ ಹಾಕಿದ್ದರು ಈ ಬಾರಿ ಕಪ್ ಇಂಡಿಯಾದ ಮಡಿಲಿಗೆ ಎಂದು.ಅಂತೆಯೇ ಗ್ರೂಪ್ ಹಂತದಲ್ಲಿ ಒಂದು ಪಂದ್ಯ ಸೋತಿದ್ದು ಹೊರತು ಪಡಿಸಿದರೇ ಮತ್ತೆಲ್ಲವೂ ಗೆಲುವಿನ ಪತಾಕೆಯನ್ನು ಹಾರಿಸಿದ್ದೆವು .ಇದೆಲ್ಲವನ್ನೂ ಒತ್ತಿಟ್ಟಿಗಿಟ್ಟು ಬೊಟ್ಟು ಮಾಡಿ ಹೇಳಬಯಸಿದ್ದು ನಮ್ಮ ಸಂಜು ಸ್ಯಾಮ್ಸನ್ ಬಗ್ಗೆ ವಿಕೆಟ್ ಕೀಪರ್ ಕಮ್ ಓಪನಿಂಗ್ ಬ್ಯಾಟರ್ ಆಗಿರುವ ಕೇರಳದ ಮೂಲದ ಸಂಜು ICC ಟ್ರೊಫಿಯಲ್ಲಿ ಆತನ ಬ್ಯಾಟ್ ನಿಂದ ರನ್ ನಿರೀಕ್ಷಿಸಲು ಸಾಧ್ಯವಿಲ್ಲ ಈತ ಕೇವಲ ಐಪಿಎಲ್ ಪ್ಲೇಯರ್ ಎಂಬ ಕುಹಕದ ಮಾತುಗಳು ಕೇಳಿ ಬರುತ್ತಿತ್ತು. ದುರಾದೃಷ್ಟವೇಬಂತೆ ಆತನ ಬ್ಯಾಟ್ ನಿಂದ ರನ್ ಕೂಡಾ ಹರಿಯುತ್ತಿರಲಿಲ್ಲ. ಮೊದಲೇ ಮೇನೇಜ್ಮೆಂಟ್ ರಾಜಕೀಯ ,ಆಯ್ಕೆಯ ಒತ್ತಡ... ಈತನ ಭವಿಷ್ಯದ ಮೇಲೆ ತೂಗುಗತ್ತಿ ನೇತಾಡುತ್ತಿತ್ತು . ಫಲಶ್ರುತಿ ಎಂಬಂತೆ ಸಾಕಷ್ಟು ಸೀರೀಸ್ ನಿಂದ ಹೊರಗೆ ಉಳಿಯಬೇಕಾದ ಪರಿಸ್ಥಿತಿ ಬಂದೊದಗಿತ್ತು. ಸೋಶಿಯಲ್ ಮೀಡಿಯಾವು ಸಂಜು ಪರವಾಗಿ ಆಯ್ಕೆಯ ಪ್ರಕ್ರಿಯೆಗೆ ಮ್ಯಾನೇಜ್ಮೆಂಟ್ ಗೆ ಚಾಟಿ ಬೀಸುತ್ತಿದ್ದವು.ಅದೇನೋ 2024 ರ ಟಿ20 ವಿಶ್ವಕಪ್ 15ರ ಬಳಗದಲ್ಲಿ ಸ್ಥಾನ ಪಡೆದಿದ್ದರೂ ಲಾಸ್ಟ್ ವರೆಗೆ ಬೆಂಚ್ ಬಿಸಿ ಮಾಡುವ ಕಾಯಕ ಮಾತ್ರ ಈತನದಾಗಿತ್ತು. ಒಂದೇ ಒಂದು ಮ್ಯಾಚ್ ನಲ್ಲಿ ಚಾನ್ಸ್ ಸಿಗಲೇ ಇಲ್ಲ .
ತದನಂತರ ಕೆಲವೊಂದು ಸೀರಿಸ್ ನಲ್ಲಿ ಸ್ಥಾನ ಸಿಕ್ಕರೂ,ಕಳಪೆ ಪ್ರದರ್ಶನ ದಿಂದ ಹೊರಗೆ ಉಳಿಯಬೇಕಾಯಿತು.ಅಂತೂ 2026ರಲ್ಲಿ ಸೆಲೆಕ್ಟ್ ಆಗಿದ್ದೆ ರೋಚಕ ! ಹದಿನೈದು ಸದಸ್ಯರ ಟೀಮ್ ನಲ್ಲಿ ಇಬ್ಬರು ಕೀಪರ್ಸ್ ಗಳನ್ನ ಸೇರಿಸಿ ಕೊಳ್ಳುವ ಅವಕಾಶದಲ್ಲಿ ಮೊದಲಿಗೆ ಇಶಾನ್ ಕಿಶನ್ ಹೆಸರು ಕೇಳಿಬಂದಿತ್ತು ಯಾಕೆಂದರೆ ಇತ್ತೀಚಿಗೆ ನಡೆದ ಸೈಯದ್ ಮುಸ್ತಾಕ್ ಆಲಿ ಹಾಗೂ ರಣಜಿ ಟ್ರೋಫಿಯಲ್ಲಿ ಉತ್ತಮ ಫಾರ್ಮ್ ನಲ್ಲಿರುವುದರಿಂದ ಕಣ್ಣು ಮುಚ್ಚಿ ಸೆಲೆಕ್ಟ್ ಮಾಡಲಾಗಿತ್ತು . ಇನ್ನು ಹಿರಿಯ ಅನುಭವಿ ಆಟಗಾರ 31ರ ಹರೆಯದ ಸಂಜು ಸ್ಯಾಮ್ಸನ್ ಹಾಗೂ ಇತ್ತೀಚಿಗೆ ಉತ್ತಮ ಲಯ ಕಂಡು ಕೊಳ್ಳುತ್ತಿರುವ ಜಿತೇಶ್ ಶರ್ಮ ನಡುವೆ ಪೈಪೋಟಿ ಯಲ್ಲಿ ಕೊನೆಗೆ ಸಂಜು ಸ್ಥಾನ ಗಿಟ್ಟಿಸಿ ಕೊಳ್ಳುವಲ್ಲಿ ಸಫಲತೆಯನ್ನು ಸಾಧಿಸಿದ್ದರು . ಸಂಜುವಿನ ಅದೃಷ್ಟ ಪುನಹ ಕೈ ಕೊಡುತ್ತಿತ್ತು ಗ್ರೂಪ್ ಹಂತದ ಎರಡೆರಡು ಪಂದ್ಯದಲ್ಲಿ ಒಂದಂಕಿ ಸುತ್ತಿ ಪೆವಿಲಿಯನ್ ಸೇರುತ್ತಿದ್ದು ಅಭಿಮಾನಿಗಳಿಗೆ ಬಾರಿ ನಿರಾಸೆ ಜೊತೆಗೆ ಕೋಚ್ ಗಳ ಕೆಂಗಣ್ಣಿಗೆ ಗುರಿಯಾಗುತ್ತಿದ್ದರು. ಟಿ20 ವಿಶ್ವ ರ್ಯಂಕಿಂಗ್ ನಲ್ಲಿ ಮೊದಲ ಸ್ಥಾನದಲ್ಲಿರುವ ಅಭಿಷೇಕ್ ಶರ್ಮ ನಿಂದ ಕಳಪೆ ಪ್ರದರ್ಶನ ಬರುತ್ತಿದ್ದರೂ, ಆತನಿಗೆ ಸಿಗುತ್ತಿದ್ದ ಅವಕಾಶ ಸಂಜುಗೆ ಸಿಕ್ಕಿರಿಲಿಲ್ಲ ಪುನಃ ಪುನಃ ಬೆಂಚ್ ಕಾಯುವ ಪರಿಸ್ಥಿತಿ ಬಂದೊದಗಿತು ಒಂದೆರಡು ಮ್ಯಾಚ್ ನಲ್ಲಿ ಇಶಾನ್ ಕಿಶನ್ ನ್ನು ಸಂಜು ಬದಲಿಗೆ ವಿಕೆಟ್ ಕೀಪರ್ ಆಗಿ ನೇಮಿಸಲಾಯಿತು . ಆತನ್ನು ಬೌಂಡರಿ ಲೈನ್ ನಲ್ಲಿ ಫೀಲ್ಡ್ ಗೆ ಕಳುಹಿಸುತ್ತಿದ್ದರು. ನತದೃಷ್ಟ ಸಂಜು ವಿನ ಬ್ಯಾಟ್ ನಿಂದ ರನ್ ಬಾರದೇ ಇದ್ದರೂ ವಿಕೆಟ್ ಕೀಪಿಂಗ್ ನಲ್ಲಿಏನೂ ಮೋಸ ಇರಲಿಲ್ಲ ಎತ್ತಿದ ಕೈ. ಇಶಾನ್ ಕಿಶನ್ ಗಿಂತ ಉತ್ತಮವಾಗಿಯೇ ಕೀಪಿಂಗ್ ಮಾಡ ಬಲ್ಲ ಸಾಮರ್ಥ್ಯದ ಸಂಜು ಬೌಂಡರಿ ಲೈನ್ ನಲ್ಲಿ ನಿಲ್ಲಬೇಕಾಯಿತು. ಪ್ರೆಸ್ ಮೀಟ್ ನಲ್ಲಿ ಹೊರಹೊಮ್ಮುತ್ತಿದ್ದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್ ವ್ಯಂಗ್ಯ ಮಾತುಗಳನ್ನು ಅದು ಹೇಗೋ ಅರಗಿಸಿ ಕೊಂಡರೂ ಗೊತ್ತಿಲ್ಲ.
ಒಂದೇ ಒಂದು ಚಾನ್ಸ್ ಗೆ ಕಾಯುತ್ತಿದ್ದ ಸಂಜುಗೆ ಆದಿನ ಅವಕಾಶ ಸಿಗುತ್ತದೆ.ಇದು ಮಾಡು ಇಲ್ಲವೇ ಮಡಿ ಎನ್ನುವಂತಿದ್ದ ಅವಕಾಶವನ್ನು ಅದ್ಭುತವಾಗಿ ಬಳಸಿಕೊಂಡರು. ಮ್ಯಾಚ್ ಸೂಪರ್ 8 ಗೆ ಸ್ಥಾನ ಪಡೆಯುವುದಕ್ಕೂ ಸಂಜುಗೆ ಕೂಡ ಮುಂದಿನ ಸ್ಥಾನ ಭದ್ರ ಪಡಿಸಲು ಈ ಮ್ಯಾಚ್ important ಆಗಿತ್ತು. ಮುಂದೆ ನಡೆದಿದ್ದೇ ಇತಿಹಾಸ !! ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ 50 ಬಾಲ್ ಗೆ ಬರೋಬ್ಬರಿ 97 ರನ್ ಚಚ್ಚಿದ ಸಂಜು ನಾಟ್ ಔಟ್ ! ಇಂಡಿಯಾವನ್ನು ಗೆಲ್ಲಿಸುವುದರ ಜೊತೆಗೆ ನಿರ್ಲಕ್ಷ್ಯೆ ಮಾಡಿದವರಿಗೆ ಬ್ಯಾಟ್ ನಿಂದ ಉತ್ತರ ಕೊಟ್ಟು ಮ್ಯಾನ್ ಆ ದಿ ಮ್ಯಾಚ್ ಪ್ರಶಸ್ತಿಯನ್ನು ಪಡೆದರು. ಜೊತೆಗೆ ಕೀಪರ್ ಸ್ಥಾನವೂ ಭದ್ರವಾಯಿತು.ಸಂಜುವಿನ ಬ್ಯಾಟ್ ಆರ್ಭಟ ಕಡಿಮೆ ಯಾಗಲಿಲ್ಲ ಸೆಮಿ ಫೈನಲ್ ನಲ್ಲೂ ಇಂಗ್ಲೆಂಡ್ ಬಾಲರ್ ಗಳನ್ನೂ ಇಲ್ಲಿಲ್ಲದಂತೆ ಕಾಡಿದರು ಬೌಂಡರಿಗಳ ಮೇಲೆ ಬೌಂಡರಿ! ಚೆಂಡು ಸೀಮಾ ಗೆರೆ ದಾಟುತ್ತಿತ್ತು.46 ಬಾಲ್ ಗೆ 89 ರನ್ ಗಳಿಸಿ ತಂಡ ಫೈನಲ್ ತಲುಪಲು ಮುಖ್ಯಪಾತ್ರ ಮಾತ್ರವಹಿಸಿದ ಸಂಜುವಿನ ಈ ಹೋರಾಟ ಕಡಿಮೆಯಾಗಲಿಲ್ಲ ನ್ಯೂಜಿಲ್ಯಾಂಡ್ ವಿರುದ್ಧ ಫೈನಲ್ ನಲ್ಲಿ 89ರನ್ 46 ಬಾಲಿಗೆ ಜಾಣ್ಮೆ,ತಾಳ್ಮೆಯ ಆಟಕ್ಕೆ ಇಡೀ ಕ್ರಿಕೇಟ್ ಜಗತ್ತು ಬೆಕ್ಕಸ ಬೆರಗಾಯಿತು. ಟೀಮ್ ಕೋಚ್ ಸೇರಿದಂತೆ ಕ್ಯಾಪ್ಟನ್ ಎಲ್ಲರೂ ತಲೆತಗ್ಗಿಸಿದರು, ತಲೆಬಾಗಿ ವಂದಿಸಿದರು. ಎಷ್ಟೆಲ್ಲಾ ಅವಮಾನವನ್ನು ಉಂಡ ಸಂಜು 2 ಬಾರಿ ಮಾನ್ ಒಫ್ ದಿ ಮ್ಯಾಚ್ ಕೊನೆಗೆ ಮ್ಯಾನ್ ಆಫ್ ದಿ ಸೀರೀಸ್ ನ್ನು ಪಡೆದರು ಇದು ನಿಜಕ್ಕೂ ಅದ್ಭುತ!! ಅವಮಾನಿಸಿದವರೇ ಮುಂದೆ ಸನ್ಮಾನ ಸ್ವೀಕರಿಸಿದ ಪರಿ ನಿಜಕ್ಕೂ ಗ್ರೇಟ್! ಪ್ರತಿಭೆ ಇದ್ದರೂ ವೇದಿಕೆ ಸಿಗದೇ ಹೋಗುವುದು ಬೇಸರ ಸರಿಸುವ ವಿಚಾರ ಒಂದೆರಡು ಮ್ಯಾಚ್ ನಲ್ಲಿ ಕಳಪೆ ಯಾದರೂ ಇನ್ನೊಂದೆರೆಡು ಚಾನ್ಸ್ ಕೊಟ್ಟರೇ ಖಂಡಿತ ಫಲ ಸಿಗುತ್ತದೆ ಪ್ರತಿಭೆ ಇದ್ದರೇ ಸಾಲದು ಅದೃಷ್ಟ ಕೂಡ ಬೇಕು ಅಲ್ಲವೇ?

ಸೋಮವಾರ, ನವೆಂಬರ್ 24, 2025

ಇದಕ್ಕೆ ಮಟ್ಟ ಹಾಕುವವರು ಯಾರು ??

ಇದೇ ನವೆಂಬರ್ ತಿಂಗಳಲ್ಲಿ ಎರಡು ಅತೀ ದೊಡ್ಡ ದೇಶ ದ್ರೋಹಿ ಘಟನೆ ನಮ್ಮ ದೇಶದಲ್ಲಿ ನಡೆಯಿತು. ಒಂದು ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದರೇ ಇನ್ನೊಂದು ದೇಶದ ರಾಜಧಾನಿ ದೆಹಲಿಯಲ್ಲಿ ನಡೆದು ಹೋಯಿತು. ಆಗಾಗ ಬೆಳಕಿಗೆ ಬಂದು ಸದ್ದು ಮಾಡಿ ಸುದ್ದಿಯಾಗಿ ಸೈಡ್ ಗೆ ಸರಿಯುವ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿನರುವ ಖೈದಿಗಳಿಗೆ ರಾಜಾತಿಥ್ಯ! ಈ ಬಾರಿ ಇನ್ನು ಹೊಸತಾಗಿಯೇ ನವನವೀನ ರೀತಿಯಲ್ಲಿ ಪ್ರಸಾರಕ್ಕೆ ಬಂತು.ಕೈದಿಗಳ ಎಣ್ಣೆ ಪಾರ್ಟಿ ಡಾನ್ಸ್ ,ಪಾತಕಿಗಳ ಕೈಯಲ್ಲಿ ಸ್ಮಾರ್ಟ್‌ ಫೋನ್‌,ಟಿವಿ ,ಉಗ್ರ ಗ್ರಾಮಿ ಜುಹಾದ್ ಹಮೀದ್ ಶಕೀಲ್ ಮನ್ನಾ ,ವಿಕ್ರತ ಕಾಮಿ ಉಮೇಶ್ ರೆಡ್ಡಿಗಳ ರಾಜ ಭೋಗ ವೈಭವಗಳ ಚಿತ್ರಣ ವೈರಲ್ ಆದವು. ಇದು ಕ್ಯಾಮರಾದ ಕಣ್ಣಿಗೆ ಸಿಕ್ಕ ಕೆಲವು ಸ್ಯಾಂಪಲ್ ಉದಾಹರಣೆಗಳಾದರೇ, ಇನ್ನು ತೆರೆ ಮರೆಯಲ್ಲಿ ಅದೆಷ್ಟೋ ಆ ದೇವರೇ ಬಲ್ಲ !ಇವರುಗಳು ಕೈದಿಗಳೋ ಎಂಬುದೇ ಅರ್ಥವಾಗದ ಪ್ರಶ್ನೆ! ಜೈಲಿಗೆ ಬಂದು ಶಿಕ್ಷೆ ಅನುಭವಿಸ ಬೇಕಾದ ಆರೋಪಿಗಳು ಇಲ್ಲಿ ರಾಜಾಥಿತ್ಯವನ್ನು ಪಡೆಯುತ್ತಿದ್ದಾರೆ.ನಿಜಕ್ಕೂ ಈ ಪರಿಯ ಎಂಜೋಯ್ಮೆಂಟ್ ಅವರ ಮನೆಯಲ್ಲಿ ಅಥವಾ ಇನ್ಯಾವುದೋ ಪಾರ್ಟಿಯಲ್ಲಿ ಸಿಗಲಿಕ್ಕೆ ಇಲ್ಲವೇನೋ ಅಂತ ಮಜಾ,ಮೋಜು ,ಮಸ್ತಿ ಮನೋರಂಜನೆ ಜೈಲಿನಲ್ಲಿ ಸಿಗುತ್ತಿದೆ! ಇದನ್ನೆಲ್ಲಾ ಕಂಡೇ ಪ್ರಸ್ತುತ ಅಪರಾಧ ಜಗತ್ತು ಬೆಳೆಯುತ್ತಿರುವುದು, ಆರೋಪಿಗಳಿಗೆ ಶಿಕ್ಷೆ ನೀಡುವ ಬದಲು ಮಜಾ ಉಡಾಯಿಸುವ ಅಡ್ಡಗಳಾಗುತ್ತಿರುವ ಇಂತಹ ಉಚ್ಚ ಸ್ಥಿತಿಯ ಜೈಲ್ ಗಳ ಸ್ಥಿತಿ ಇಂತಿದ್ದರೇ ಇನ್ನುಳಿದವೋ ?? ಹೀಗಾಗಿಯೇ ಅಪರಾಧಗಳು ಹೆಚ್ಚುತ್ತಿವೆ ಪಾತಕಿಗಳು ಸಲೀಸ್ ಆಗಿ ಎಂಟ್ರಿ ಕೊಡುತ್ತಾರೆ.
ಇದಕ್ಕೆ ಹೊಣೆ ಯಾರು ? ನಮ್ಮ ವ್ಯವಸ್ಥೆ ಅಲ್ಲದೆ ಮತ್ತಿನ್ನೇನು ? ಈ ವ್ಯವಸ್ಥೆಗಳು ಲೀಲಾಜಾಲವಾಗಿ ಜರುಗುತ್ತಿದೆ ಅಂದ್ರೆ ಜೈಲ್ ಅಧಿಕಾರಿಗಳ ಪಾತ್ರವಲ್ಲದೆ ಮತ್ತಿನ್ನೇನು ?ಕೇವಲ ಹಣದ ದಾಹಕ್ಕೆ ಬಲಿಯಾಗೆ ಇಂತ ಕ್ರಿಮಿನಲ್ ಗಳಿಗೆ ಸಪೋರ್ಟ್ ಮಾಡುವ ಅಧಿಕಾರಿಗಳೇ ದೊಡ್ಡ ಕ್ರಿಮಿನಲ್ ಗಳು ಈ ಕ್ರಿಮಿಗಳನ್ನು ಕಿತ್ತು ಹೊಸಕಿ ಹಾಕುವವರು ಯಾರು ? ಗೊತ್ತಿಲ್ಲ !!ಗ್ರಹ ಮಂತ್ರಿಗಳದ್ದು ಅದೇ ಡೈಲಾಗ್ ವಿಚಾರಣೆ ಮಾಡುತ್ತೇವೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ,ಜನಾಕ್ರೋಶ ಹೆಚ್ಚಾದ ಕೂಡಲೇ ತಪ್ಪಿತಸ್ಥರನ್ನು ಒಂದಷ್ಟು ದಿನ ಸಸ್ಪೆಂಡ್ ಮಾಡಿ ಮತ್ತೆ ಬೇರೆ ಕಡೆ ಟ್ರಾನ್ಸ್ಫರ್ ಮಾಡಿ ಕೊಳ್ಳುದು ಬಿಟ್ಟರೇ ಬೇರೇನೂ ಇಲ್ಲ , ಅವರನ್ನು ಡಿಸ್ಮಿಸ್ ಮಾಡುವ ಯೋಗ್ಯತೆ ಅಥವಾ ಪವರ್ ನಮ್ಮಲ್ಲಿ ಇಲ್ಲವೇ ? ಅದಕ್ಕಾಗಿ ಈ ಪರಿಯಲ್ಲಿ ಈ ಘಟನೆಗಳು ಆಗಾಗ ಮರುಕಳಿಸುತ್ತಿರವುದು. ಜನರು ದಂಗೆ ಏಳಬೇಕಾಗಿದೆ ಅಷ್ಟೇ ಇದಕ್ಕಿರುವ ಉಪಾಯ . ಇದಕ್ಕೆ ಹೊಂದಿಕೆ ಯಾಗುವ ಇನ್ನೊಂದು ಘಟನೆ ನಡೆಯಿತು. ಅದು 10ನೇ ತಾರೀಕು ,ನವೆಂಬರ್ 2025, ಸರಿಸುಮಾರು ಸಂಜೆ 6:52ರ ಸಮಯ. ಸ್ಥಳ ದೆಹಲಿಯ ರೆಡ್ ಫೋರ್ಟ್ ಸಮೀಪ, Metro Gate No.1 ಬಳಿ ಹೈಂಡೈ i20 ಕಾರಿನಲ್ಲಿ ಸ್ಫೋಟ. ಅದು ಕಾರಿನಲ್ಲಿ ಆಕಸ್ಮಿಕವಾಗಿ ತಾಂತ್ರಿಕ ದೋಷದಿಂದ ಉಂಟಾದ ಸ್ಪೋಟವಲ್ಲ ಅದರ ಒಳಗಡೆ ತುಂಬಿತ್ತು ಬಾಂಬ್ !ಆತ್ಮಹತ್ಯೆ ದಾಳಿ. ಅದರ ಒಳಗಿದ್ದ ಚಾಲಕನಾಗಿ ಉಗ್ರ, ಡಾಕ್ಟರ್ ಪದವಿ ಪಡೆದ ಉಮರ್ ನಬಿ ಎಂಬ ದೇಶ ದ್ರೋಹಿ.ಸ್ಪೋಟದ ತೀವೃತೆ ಎಷ್ಟು ಇತ್ತೆಂದರೆ 8 ಮಂದಿ ಸಾವಿಗೀಡಾಗಿದ್ದರು ೨೦ ಕ್ಕೂ ಅಧಿಕ ಬಂದಿ ಗಂಭೀರ ಸ್ಥಿತಿಗೆ ತಲುಪಿದ್ದರು. ಸ್ಥಳದಲ್ಲಿದ್ದ ಇತರ ವಾಹನಗಳೂ ಸೇರಿದಂತೆ ಅಕ್ಕ ಪಕ್ಕದ ಹಲವಾರು ಸಂಪತ್ತುಗಳು ನಷ್ಟವಾದವು.ನಾಶ ಗೊಂಡವು.
ಇದು ಭಯೋತ್ಪಾದಕ ದಾಳಿ ಎಂಬುದನ್ನು ಒತ್ತಿ ಹೇಳಬೇಕಿಗಿಲ್ಲ.ಇದನ್ನು ಉಗ್ರರಲ್ಲದೇ ಬೇರೆ ಯಾರೂ ಮಾಡಲು ಸಾಧ್ಯವಿಲ್ಲ.ಇದು ದೇಶದ ಅನ್ನ ತಿಂದ ರಕ್ತ ಪಿಪಾಸುಗಳ ಸಂಚಿನ ಕ್ರತ್ಯ.ದೇಶದ ಹೊರಗಿನ ಉಗ್ರರನ್ನು ಹೇಗೋ ಸದೆಬಡಿಯಬಹುದು ಆದ್ರೆ ಇಲ್ಲಿನ ಅನ್ನ ತಿಂದು ಜಲ ನೆಲದ ಋಣವನ್ನು ಮರೆತ ಪಾತಾಕಿಗಳನ್ನು ಪತ್ತೆಹಚ್ಚುವುದು ಹರ ಸಾಹಸ.ಇದೇನೂ ಹೊಸತಲ್ಲ ಆಗಾಗ ಶತ್ರು ರಾಷ್ಟ್ರಗಳಿಗಿಂತ ನಮ್ಮವರೇ ನಮಗೆ ದ್ರೋಹ ಬಗೆಯವ ಕೆಲಸವನ್ನು ಕಂಡಿರುತ್ತೇವೆ . ದೇಶದಲ್ಲಿನ ಒಂದೊಳ್ಳೆ ಆಡಳಿತ ಚುಕ್ಕಾಣಿ ಬಂದ ಪರಿಣಾಮ ಸುಮಾರು ಸಮಯವೇ ಕಳೆದಿದೆ ಈ ತರಹದ ಅಹಿತಕರ ಘಟನೆ ನಡೆಯದೇ.ಅಂತೂ ಮೊನ್ನೆ ಮೊನ್ನೇ ಬಾಂಬ್ ಸ್ಫೋಟ ಗೊಂಡೇ ಬಿಟ್ಟಿತು.ಇದನ್ನು ಮಟ್ಟ ಹಾಕುವುದು ಹೇಗೆ ಮಿಲಿಯನ್ ಡಾಲರ್ ಪ್ರಶ್ನೆ !

ಮಂಗಳವಾರ, ನವೆಂಬರ್ 4, 2025

ದರ್ಶನ್ ನ ಬೆಂಬಿಡದ ಕಾನೂನು ಕುಣಿಕೆ !

ರೇಣುಕಾ ಸ್ವಾಮಿಯ ಭೀಕರ ಕೊಲೆಗೆ ಸಂಬಂಧ ಪಟ್ಟಂತೆ ಸುಮಾರು ಒಂದೂವರೆ ವರ್ಷ ಕಳೆಯುತ್ತಾ ಬಂತು ಚಾಲೇಂಗಿಂಗ್ ಸ್ಟಾರ್ ಡಿ ಬಾಸ್ ಖ್ಯಾತಿಯ ದರ್ಶನ್ ತೂಗುದೀಪ್ ಸೆರೆ ಮನೆ ಸೇರಿ .ಇನ್ನೂ ಬಿಡುಗಡೆ ಭಾಗ್ಯ ಕೂಡಿ ಬಂದಿಲ್ಲ ಅಷ್ಟಕ್ಕೂ ಹಾಗೆ ಬಿಡುಗಡೆ ಹೊಂದಲಿಕ್ಕೆ ದರ್ಶನ್ ಅಂಡ್ ಗ್ಯಾಂಗ್ ಮಾಡಿದ ಕ್ರತ್ಯ ಸಣ್ಣದಲ್ಲ. ಕಾನೂನಿನ ಮೇಲೆ ಗೌರವ ಇಮ್ಮಡಿಯಾಗುತ್ತಿದೆ ! ಉಳ್ಳವರ ಕಪಿ ಮುಷ್ಠಿಯಲ್ಲಿ ಕಾನೂನು ಬಂಧಿಯಾಗಿರುತ್ತದೆ ಎನ್ನುವುದನ್ನು ತಳ್ಳಿ ಹಾಕಿದ್ದು ಈ ದರ್ಶನ್ ಕೇಸ್ ! ಕಾನೂನು ಎಲ್ಲರಿಗೂ ಒಂದೇ ಕಾನೂನು ಕಾಯ್ದೆಯನ್ನು ಕೈ ತೆಗೆದು ಕೊಳ್ಳುವ ,ಅದನ್ನು ತಮಗೆ ಇಷ್ಟ ಪಟ್ಟಂತೆ ಬಳಿಸಿ ಕೊಳ್ಳುವವರ ನೈಜ ಉದಾರಹಣೆಗಳ ಮಧ್ಯೆ ಇದೊಂದು ದಿಫ್ಫ್ರೆಂಟ್ ಆಗಿ ಕಾಣ ಸಿಕ್ಕಿದ್ದು ಸುಳ್ಳಲ್ಲ. ಅಪರೂಪದ ಘಟನೆ ! ಸಿನಿಮಾ ಹೀರೊ ಆಗಿ ಮೆಜೆಸ್ಟಕ್ ಸಿನಿಮಾದ ಮೂಲಕ ತೆರೆಯ ಮೇಲೆ ಪರಿಚಯಗೊಂಡ ದರ್ಶನ್ ತೂಗುದೀಪ್ ಸಾಕಷ್ಟು ಫಿಲಂಗಳು ಹಿಟ್ ಮೇಲೆ ಹಿಟ್ ಕೊಟ್ಟು ಸ್ಯಾಂಡಲ್ವೋಡ್ ಸಿನಿ ಅಂಗಳದ ಬೆಳ್ಳಿತೆರೆಯ ರೀಲ್ ನಲ್ಲಿ ಉತ್ತಮ ನಾಯಕ ನಟನಾಗಿ ಕಾಣಿಸಿಕೊಂಡು, ರಿಯಲ್ ನಲ್ಲಿ ಅಕ್ಷರಸಃ ಖಳ ನಾಯಕನೇ .! ಅದನ್ನು ಒತ್ತಿ ಹೇಳುವ ಅಗತ್ಯವಿಲ್ಲಾ ನಾಡಿನ ಪ್ರಜ್ಞಾವಂತ ಜನೆತೆಗೆ ಗೊತ್ತಿರುವಂತದ್ದೇ. ಸುಮಾರು ಘಟನೆಗಳು ಅಚ್ಚರಿಸಿ ಮೂಡಿಸಿವೆ . ಕೆಲವೊಂದು ಬೆಳಕಿಗೆ ಬಂದರೇ ಹಲವೊಂದು ಅಲ್ಲಿಯೇ ಮುದುಡಿ ಹೋಗಿದೆ. ಸ್ವತಃ ಕಟ್ಟಿಕೊಂಡವಳಿಗೆ ಈತ ಕೊಟ್ಟ ಕಾಟ ಅಂತಿಂತ್ತದ್ದಲ್ಲ ಆ ವಿಚಾರದಲ್ಲಿ ಕಂಬಿ ಎಣಿಸಿಯೂ ಬಂದಿದ್ದ. ತನ್ನ ದೀರ್ಘಕಾಲದ ಸಂಗಾತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆಂದು ಕಾರಣದಿಂದ ದರ್ಶನ್ ಜೊತೆ ಆತನ ಸ್ನೇಹಿತರೊಂದಿಗೆ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿಯನ್ನು ಅಪಹರಿಸಿ ಶೆಡ್ ನಲ್ಲಿ ಚಿತ್ರ ಹಿಂಸೆ ನೀಡಿ ಭಯಾನಕ, ಭೀಕರ, ಭೀಬತ್ಸವಾಗಿ ಕೊಲೆಗೈದು ಅದನ್ನು ತನ್ನ ಸ್ನೇಹಿತರಿಗೆ ತಾವೇ ಮಾಡಿದ್ದೂ ಎಂದು ಪೊಲೀಸರ ಮುಂದೆ ಶರಣಾಗುವಂತೆ ಮಾಡಿ ,ಒಳಸಂಚು, ಸಾಕ್ಷ್ಯನಾಶ ಎಂಬ ವಿಚಾರವನ್ನು ಇಟ್ಟುಕೊಂಡು 2024ರ ಜೂನ್ 11ರಂದು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಎಷ್ಟೋ ಹರ ಸಾಹಸ ಪಟ್ಟರೂ ಬೇಲ್ ಮರೀಚಿಕೆ ಯಾದಾಗ ಒಂದಷ್ಟು ದಿನ ನಾಟಕ ಅದೂ ಇದೂ ಮಾಡಿ ಆ ಜೈಲ್ ನಿಂದ ಇಲ್ಲಿಗೆ ಈ ಜೈಲ್ ನಿಂದ ಅಲ್ಲಿಗೆ ಶಿಫ್ಟ್ ಆಗಿ ಅಂತೂ ಒಂದಷ್ಟು ಸಮಯ, ಅನಾರೋಗ್ಯದ ಕಾರಣ ಒಡ್ಡಿ ಹೊರಗಡೆ ಬಂದಿದ್ದ ದರ್ಶನ್ ,ಮತ್ತೆ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇತ್ತ ಜಾಮೀನಿಗೆ ಅದೆಷ್ಟು ಅರ್ಜಿ ಗುಜರಾಯಿಸಿದರೂ ದರ್ಶನ್ ಗೆ ಬೆಲ್ ಸಿಗುತ್ತಿಲ್ಲ ಕಾನೂನು ನಿಜಕ್ಕೂ ಕಠಿಣವಾಗಿದ್ದು ಖಂಡಿತ ಸತ್ಯ. ಇದು ಎಲ್ಲರಿಗೂ ಮಾದರಿಯಬೇಕು. ಹಲವರ ಅಭಿಪ್ರಾಯದಂತೆ ರೇಣುಕಾ ಸ್ವಾಮಿಯ ಈ ಪ್ರಕರಣವೂ ಸಹಾ ಎಲ್ಲೊ ಹಳ್ಳ ತಪ್ಪಿ ಹೋಗುತ್ತಿತ್ತು ಒಂದೊಳ್ಳೆ ನಾಣ್ಣುಡಿಯಂತೆ ಹತ್ತು ಸರಿ ಕದ್ದ ಕಳ್ಳ ಒಂದು ಸಾರಿ ಸಿಕ್ಕಿ ಹಾಕಿಕೊಳ್ಳೆಲೇ ಬೇಕು ಎನ್ನುವ ಹಾಗೆ ! ಹಾಗಂತ ಆತ ತುಂಬಾನೇ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಅಂಶವನ್ನು ನಾನು ಪ್ರಸ್ತಾಪ ಮಾಡುತ್ತಿಲ್ಲ, ಯಾವುದಾರಲ್ಲೂ ಸಿಕ್ಕಿ ಹಾಕಿ ಕೊಳ್ಳುತ್ತಿರಲಿಲ್ಲ ಎಂದೂ ನಾನು ಹೇಳುತ್ತಿಲ್ಲ ಹಲವರ ಬಾಯಿಯಲ್ಲಿ ಉದುರಿದ ಮಾತು ಅಷ್ಟೇ . ಅದಕ್ಕೆ ಪುಷ್ಟಿ ನೀಡುವಂತ ಘಟನೆಗಳು ನಡೆದಿವೆ ಬಿಡಿ ಅದು ಇಲ್ಲಿ ಅಪ್ರಸ್ತುತ .
ಸೊ ಇದೂ ಕೂಡಾ ಹಾಗೆ ಆಗುತ್ತಿತ್ತೇನೋ ಹೇಗೋ ಪೊಲೀಸರು ಪತ್ತೆ ಹಚ್ಚವಲ್ಲಿ ಯಶಸ್ವಿಯಾದರು. ಒಂದೊಳ್ಳೆ ಕಾಪ್ ಆ ತಂಡದಲ್ಲಿ ಇದ್ದುದ್ದರಿಂದ ಇದೀಗ ದರ್ಶನ ಮುದ್ದೆ ಮುರಿಯ ಬೇಕಾಗಿ ಬಂತು . ರೇಣುಕಾ ಸ್ವಾಮೀ ಮಾಡಿದ್ದು ತಪ್ಪು ಅಲ್ವೇ ? ತಪ್ಪು ಮಹಾ ತಪ್ಪೇ! ಆದರೆ ಅದಕ್ಕೆ ಶಿಕ್ಷೆ ನೀಡುವ ವ್ಯವಸ್ಥೆ ನಮ್ಮಲ್ಲಿ ಇಲ್ಲವೇ? ಅದನ್ನು ಬಿಟ್ಟು ತಾವೇ ಕಾನೂನು ಕೈಗೆತ್ತಿ ಕೊಂಡರೇ ಪ್ರತಿಫಲ ಇಷ್ಟೇ. ! ಮಾಡಿದ್ದುಣ್ಣೋ ಮಹರಾಯ !! ಹಣ,ಜನ ಬಲ ರಾಜಕೀಯ ಬೆಂಬಲ ,ಇದೆ ಎಂಬ ಕಾರಣಕ್ಕೆ ಇಲ್ಲ ಸಲ್ಲದ ವಿಚಾರಕ್ಕೆ ಕೈ ಹಾಕುವ ಮುಂಚೆ ಆಲೋಚನೆ ಮುಖ್ಯ.ಸೆಲೆಬ್ರೆಟಿಯಾಗಿ ಸಮಾಜದಲ್ಲಿ ಮುನ್ನೋಟದಲ್ಲಿರುವವರು ಈ ತರಹದ ಕ್ರತ್ಯದಲ್ಲಿ ಭಾಗಿಯಾದರೇ ಯುವ ಪೀಳಿಗೆಗಳು ಯಾರನ್ನು ಮಾದರಿಯಾಗಿ ತೆಗದು ಕೊಳ್ಳಬೇಕು? ದರ್ಶನ್ ಉತ್ತಮ ವ್ಯಕ್ತಿ ಸಮಾಜದ ಹಿತಚಿಂತಕ ಸಾಕಷ್ಟು ಸಹಾಯ ಹಸ್ತವನ್ನು ಚಾಚಿದವರು ಎಂಬ ವಿಚಾರವಿದ್ದರೂ ಈ ಒಂದು ತಪ್ಪಿನಿಂದ ಅದ್ಯಾವುದು ಲೆಕ್ಕಕ್ಕೆ ಬರುವುದು ಇಲ್ಲ.ಮೊದಲಾಗಿ ಸಹವಾಸ ದಿಂದ ದೂರ ಇರುವುದೇ ಇದಕ್ಕಿರುವ ದೊಡ್ಡ ಮದ್ದು ಎನ್ನಬಹುದೇನೋ ? ಮಾಡಿದಕ್ಕೆ ಶಿಕ್ಷೆ ಅನುಭವಿಸಲಿ ಆದಷ್ಟು ಬೇಗ ಹೊರಬಂದು ತನ್ನ ತಪ್ಪಿನ ಅರಿವಾಗಿ ಮುಂದೆ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲಿ ಎಂಬ ಆಶಯದೊಂದಿಗೆ.

ಶನಿವಾರ, ಜೂನ್ 21, 2025

ಆನೆ ಬಂತೊಂದು ಆನೆ ..!!

ಸಿದ್ದಾಪುರ ವಾರದ ಸಂತೆ ಬಂದ್ ! ಶಾಲಾ ಕಾಲೇಜುಗಳಿಗೆ 3 ದಿನ ರಜೆ ! ಯಾರೂ ಮನೆಯಿಂದ ಹೊರಗೆ ಬರಬೇಡಿ ,ವಾಹನ ಸವಾರರೇ ಎಚ್ಚರ ವಹಿಸಿ,ಆನೆ ಕಂಡ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ, ಭಯಬೇಡ ಎನ್ನುವ ಅನ್ವಾಂಸ್ಮೆಂಟ್..!! ಎಲ್ಲರಲ್ಲೂ ಆತಂಕ, ಕುತೂಹಲ ಊರಿಗೆ ಊರೇ ಭಯದ ವಾತಾವರಣದಲ್ಲಿತ್ತು. ಅಂತೂ ಮೂರು ದಿನಗಳ ಬಳಿಕ ಎಲ್ಲವೂ ಸಹಜ ಸ್ಥಿತಿ! ಸ್ಥಳೀಯರಲ್ಲಿ ಬೇಸರ, ಸಪ್ಪೆ ಮೊರೆ ! ಇದು ಕಾಡಿನ ಆನೆ ನಾಡಿಗೆ ಬಂದ ಕಥೆ ಹಾಸನ ಜಿಲ್ಲೆಯ ದಟ್ಟ ಅರಣ್ಯವೊಂದರಲ್ಲಿ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದ್ದರು. ಅದಕ್ಕೆ ಜಿಪಿಎಸ್ ನ್ನು ಅಳವಡಿಸಿ, 'ಹಡ್ಕ ಬಡ್ಕ' ಎಂಬ ನಾಮಧೆಯವನ್ನು ಮಾಡಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೀಸಲು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದರು. ಅದೇನೋ ಗೊತ್ತಿಲ್ಲ ಒಂದೆರಡು ದಿನ ಅಷ್ಟೇ ತನ್ನ ಕಾಡು, ಬಂಧು-ಬಳಗದವರ ನೆನಪು ಆಯಿತೋ ಏನೋ ಹಡ್ಕ ಬಡ್ಕ ಅಲ್ಲಿಂದ ತಪ್ಪಿಸಿಕೊಂಡು ಬಿಟ್ಟ.ತನ್ನ ಕಾಡನ್ನು ಅರಸುತ್ತಾ,ಅರಸುತ್ತಾ ಬಾಳೆಬರೆ ಘಾಟಿ ಇಳಿದ.ಘಾಟಿ ಇಳಿಯುತ್ತಿದ್ದ ಸಂದರ್ಭ ಒಂದಶ್ಟು ವಾಹನ ಸವಾರರು ಅದನ್ನು ನೋಡಿದ್ದರು. ವೀಡಿಯೋ ಫೋಟೋ ತೆಗೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟದ್ದರು. ಯಾರಿಗೂ ತೊಂದರೆ ಮಾಡದೇ ತನ್ನ ಪಾಡಿಗೆ ರಾಜ್ಯ ಹೆದ್ದಾರಿಯಲ್ಲೇ ತೆರಳುತ್ತಿದ್ದ ಹಡ್ಕ ಬಡ್ಕ, ಸಿದ್ದಾಪುರ ಸಮೀಪದ ಕೂಗಳತೆಯ ದೂರದಲ್ಲಿರುವ ಹೆನ್ನಾಬೈಲು ಅರಣ್ಯ ಸೇರಿ ಬಿಟ್ಟಿದ್ದ.ಇತ್ತ ಅರಣ್ಯ ಇಲಾಖೆಗೆ ಮಾಹಿತಿಯೂ ಹೋಗಿತ್ತು ಹಾಗೆ ಜಿಪಿಎಸ್ ತಂತ್ರಜ್ಞನ ಅಳವಡಿಸಿದ್ದರಿಂದ ಸ್ಥಳೀಯರ ನೆರವಿನಿಂದ ಆನೆಯನ್ನು ಅರಸುವಲ್ಲಿ ಹೆಚ್ಚಿನ ಸಮಯವೂ ಬೇಕಾಗಿಲ್ಲ.
ಒಂಟಿ ಸಲಗ ಬಹಳ ಅಪಾಯಕಾರಿ ಎನ್ನುವ ಮಾತನ್ನು ಸುಳ್ಳಾಗಿಸಿದ್ದ ಈ ಹಡ್ಕ ಬಡ್ಕ ಆನೆ ಸುಮಾರು 150 ಕಿಮೀ ದೂರ ಒಂದೇ ಸಮನೆ ನಡೆದು ಕೊಂಡು ಬಂದರೂ ಯಾರಿಗೂ,ಯಾವುದಕ್ಕೂ ಅನಾಹುತ ಮಾಡಿರಲಿಲ್ಲ. ಆತನ ಮೈಂಡ್ ನಲ್ಲಿ ಇದ್ದಿದ್ದು ತನ್ನ ಕಾಡು ಹಾಗೂ ಪರಿವಾರ ಮಾತ್ರ. ಎಲ್ಲೂ ಕೂಡಾ ವಿಶ್ರಾಂತಿ ಪಡೆಯದೇ ಹಸಿವು,ನಿದ್ರೆ ಬಾಯಾರಿಕೆಯನ್ನೂ ಬದಿಗೆ ಒತ್ತಿ ಆತ ಹಗಳು ಇರುಳು ಸಂಚಾರ ಮಾಡಿ ಸೇರಿದ್ದು ಹೆನ್ನಾ ಬೈಲು ಕಾಡನ್ನು ಅಲ್ಲಿ ಮಾತ್ರ ಆತ ಎರಡು ದಿನ ತಂಗಿದ್ದ ಬಟ್ ರೆಸ್ಟ್ ತೆಗೆದು ಕೊಳ್ಳಲು ನಮ್ಮವರು ಬಿಟ್ಟಿಲ್ಲ! ಆನೆ ಬಂತು ಆನೆ ಎಂಬ ಕೂಗು ರಾಜ್ಯಾಧ್ಯಂತ ಹರಡಿತ್ತು. ಭಯದ ವಾತಾವರಣ ಮಡುಗಟ್ಟಿತ್ತು.
ಆನೆಯನ್ನು ಮರಳಿ ಬಂಧಿಸುವ ಯೋಜನೆ ಸಿದ್ಧವಾಯಿತು.ಮಂಗಳೂರು ಚಿಕ್ಕಮಗಳೂರು ಶಿವಮೊಗ್ಗದ ಸೇರಿದಂತೆ ವಿವಿಧ ಸ್ಥಳಗಳಿಂದ ಸುಮಾರು 150 ಅರಣ್ಯ ಇಲಾಖೆ ಅಧಿಕಾರಿಗಳು,ಪಶು ವೈದ್ಯರು,15 ಜನ ಮಾವುತರು, ಏಕಲವ್ಯ,ಭೀಮ,ಮಹೇಂದ್ರ, ಸೊಮ್ಮಣ್ಣ ,ಬಾಬಣ್ಣ,ಬಹಾದ್ದೂರ್ ಎಂಬ 6 ಸಾಕು ಆನೆಗಳ ನೇತೃತ್ವದ ಕಾರ್ಯಾಚರಣೆ ಪ್ರಾರಂಭವಾಯಿತು.ಅಂತೂ ಹಡ್ಕ ಬಡ್ಕನಿಗೆ ಪಶು ವೈದ್ಯರು ಅರವಳಿಕೆ ಚುಚ್ಚುಮದ್ದು ಕೊಟ್ಟು ಪ್ರಜ್ಞೆ ತಪ್ಪಿಸಿದರು. ಕ್ರೇನ್ ಮೂಲಕ ದೊಡ್ಡ ಟ್ರಕ್ ಗೆ ಆನೆಯನ್ನು ಲೋಡ್ ಮಾಡಿ ಶಿವಮೊಗ್ಗ ಜಿಲ್ಲೆಯ ಸಕ್ರೀಬೈಲ್ ಆನೆ ಶಿಬಿರಕ್ಕೆ ಕೊಂಡುವಯ್ದ್ ಬಿಟ್ಟರು.ಮೊದ ಮೊದಲು ಆತಂಕ ,ಭಯದಲ್ಲಿದ್ದ ಅಲ್ಲಿನ ಸ್ಥಳೀಯರು ಆನೆಯನ್ನು ಲಾರಿಗೆ ಏರಿಸಿದ್ದು ಆನೆಯನ್ನು ಹಿಡಿದು ಇಂಜೆಕ್ಷನ್ ಕೊಟ್ಟುದ್ದನ್ನು ನೋಡಿ ಕೆಲವರ ದುಃಖ ಹೇಳ ತೀರದಾಗಿತ್ತು.ಗಳ ಗಳನೆ ಅತ್ತವರು ಕೂಡ ಇದ್ದಾರೆ.ಯಾರಿಗೂ ಯಾವುದಕ್ಕೂ ಏನೂ ಉಪದ್ರವ ತೊಂದರೆ ಕೊಡದ ಆನೆಯನ್ನು ಹೊತ್ತುವೊಯ್ದು ಮತ್ತೆ ಪಂಜರದಲ್ಲಿ ಕೂಡಿ ಹಾಕುತ್ತರಲ್ಲ ಆನೆಯ ತಪ್ಪಾದರೂ ಏನು ? ಹೆಚ್ಚಿನವರ ಸವಾಲ್ ಗೆ ಜವಾಬ್ ಇಲ್ಲದಾಗಿ ತ್ತು.ಆನೆಯ ಕಣ್ಣಿರು ಧಾರಾಕಾರವಾಗಿ ಇಳಿಯುತ್ತಿತ್ತು ಆನೆ ಮಾವುತ ಅದನ್ನು ಕರ್ಚಿಪ್ ನಿಂದ ಮುಚ್ಚಿಯೂ ಬಿಟ್ಟಿದ್ದ.!! -shiವು

ಸೋಮವಾರ, ಮಾರ್ಚ್ 10, 2025

ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ : ಕೀಪಿಂಗ್ ಗೂ ಸೈ.. ಫಿನಿಶಿಂಗ್ ಗೂ..... ನಮ್ಮ ಕೆ ಎಲ್ !

ಟೀಮ್ ಇಂಡಿಯಾ ಕ್ರಿಕೆಟ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಕಳೆದ ವರ್ಷ ಕೈಗೆ ಬಂದ ತುತ್ತು ಬಾಯಿಗೆ ಬಾರದೇ ಸ್ವತಃ ನೇತೃತ್ವ ವಹಿಸಿಕೊಂಡ ವಿಶ್ವಕಪ್ ಒಂಡೇ ಫೈನಲ್ ಪಂದ್ಯದಲ್ಲಿ ಅಹಮದ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಕಣ್ಣೇರಿಟ್ಟ ಭಾರತಡಾ ಕಿಲಾಡಿಗಳು ತನ್ನ ತಪ್ಪನ್ನೆಲ್ಲಾ ಮನವರಿಕೆ ಮಾಡಿಕೊಂಡು ನಂತರ ಎಲ್ಲಾ ಮ್ಯಾಚ್ ನಲ್ಲೂ ಗೆಲುವಿನ ನಗೆ ಬೀರುತ್ತಾ ಬಂದಿದ್ದಾರೆ ಐಸಿಸಿ ಆಯೋಜನೆಯಲ್ಲಿ ಕೆಲವು ತಿಂಗಳ ಮೊದಲು ನಡೆದ ವರ್ಲ್ಡ್ ಕಪ್ ಟೀ20ಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಮಣಿಸಿ ಕಪ್ಗೆ ಮುತ್ತಿಟ್ಟಿತ್ತು.ಅದೇ ಸತತ ಗೆಲುವಿನ ನಾಗಲೋಟ ಮುಂದುವರೆದು ವಿಶ್ವದಲ್ಲಿ ನಾವೇ ಬಲಶಾಲಿ ಎಂದು ಉಳಿದ ರಾಷ್ಟ್ರಗಳು ಒಪ್ಪಿಕೊಳ್ಳುವಂತೆ ಮಾಡಿತು. ಅಂತೂ ಇತ್ತೀಚಿಗೆ ಪ್ರಾರಭಗೊಂಡು ಐಸಿಸಿ ಆಯೋಜನೆಯ ಪಾಕಿಸ್ತಾನ ನೇತೃತ್ವದಲ್ಲಿ ಸುಮಾರು 12 ವರ್ಷಗಳ ಬಳಿಕ ನಡೆದ ಮಿನಿ ವಿಶ್ವಕಪ್ ಎಂದು ಕರೆಯಿಸಿ ಕೊಳ್ಳುವ ಚಾಂಪಿಯನ್ ಟ್ರೋಫಿಯನ್ನು ಇಂದು ನ್ಯೂಜಿಲ್ಯಾಂಡ್ ವಿರುದ್ದ ದುಬೈನಲ್ಲಿ ನಡೆದ ಜಿದ್ದಾ ಜಿದ್ದಿ ರೋಮಾಂಚನಕಾರಿ ಪಂದ್ಯಾಟದಲ್ಲಿ ಕಪ್ನ್ನ ಎತ್ತಿಕೊಂಡಿದೆ.
ಐದೂ ಮ್ಯಾಚ್ನಲ್ಲೂ ಸೋಲಿಲ್ಲಿದ ಸರದಾರರಂತೆ ಎದುರಾಳಿ ಬಾಂಗ್ಲಾದೇಶ ದಿಂದಲೇ ಮೊದಲ್ ಗೊಂಡು ಕಪ್ ಎತ್ತಿಕೊಳ್ಳುವವರೆಗೂ ಮುಂದುವರೆಯಿತು.ಬಾಲಿಂಗ್ ,ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಟೀಮ್ ಇಂಡಿಯಾದಲ್ಲಿ ಎಲ್ಲಾ ಆಟಗಾರರ ಪಾತ್ರವೂ ಪ್ರಮುಖ ವಾಗಿ ಕಾಣಿಸಿತು . ಒಂದೊಂದು ಮ್ಯಾಚ್ನಲ್ಲಿ ಒಬ್ಬೊಬ್ಬರು ಹೀರೊಗಳಾಗಿ ಕಂಡು ಬಂದರು. ಪಾಕಿಸ್ತಾನ ವಿರುದ್ಧ ಕಿಂಗ್ ಕೊಹ್ಲಿ ಗೆಲುವಿನ ರೂವಾರಿಯಾಗಿ ಸೆಂಚುರಿ ಸಿಡಿಸಿದರೇ ,ಅತಿಮೂಲ್ಯವಾದ ಇಂದಿನ ಪಂದ್ಯದಲ್ಲಿ ಒಂದಕ್ಕಿಗೆ ಸುತ್ತಿ ಹಿಂತುರಿಗಿದರು.ಯಾವುದೇ ಮ್ಯಾಚ್ ನಲ್ಲೂ ಅಷ್ಟೊಂದು ಕಾಣಿಕೆ ನೀಡದ ಕ್ಯಾಪ್ಟನ್ ರೋಹಿತ್ ಶರ್ಮಾ ಇಂದಿನ ಮ್ಯಾಚ್ ನಲ್ಲಿ ಹಿಟ್ ಮ್ಯಾನ್ ಆಗಿ ಅಕ್ಷರಸ ಕಂಡು ಬಂದರು,ಗೆಲುವಿಗೆ ಪ್ರಮುಖ ಕಾರಣರಾದರು.ಜೊತೆಗೆ ಮ್ಯಾನ್ ಆಪ್ ದಿ ಮಾಚ್ ಪ್ರಶಸ್ತಿಗೆ ಕೂಡ ಭಾಜನರಾದರು.ಇನ್ನು ಬಿಸಿಸಿಐ ಸೈಡ್ ಲೈನ್ ಮಾಡಿದ್ದ ಶ್ರೇಯಸ್ ಅಯ್ಯರ್ಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿ ಕೊಂಡರು ಪಂದ್ಯದ್ದುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಈತ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಸ್ಕೋರ್ ಲಿಸ್ಟ್ನಲ್ಲಿ ಟೀಮ್ ಇಂಡಿಯದ ಪರವಾಗಿ ಪ್ರಥಮ ಹಾಗೂ ಓವರ್ ಆಲ್ ಆಗಿ ಎರಡನೇ ಸ್ಥಾನನ್ನು ತಮ್ಮದಾಗಿಸಿಕೊಂಡರು.ಪ್ರಥಮ ಸ್ಥಾನ ನ್ಯೂಜಿಲ್ಯಾಂಡ್ ನ ರಚಿನ್ ರವೀಂದ್ರ 263 ರನ್ ಸಂಪಾದಿಸಿದ್ದರು ಹಾಗೂ 3 ವಿಕೆಟ್ ಪಡೆದು ಸರಾಸರಿ 4.6ನಲ್ಲಿ ಮ್ಯಾನ್ ಒಫ್ ದಿ ಸೀರಿಸ್ ಪಡೆದುಕೊಂಡರು.ನಮ್ಮ ಕನ್ನಡಿಗ ವರುಣ್ ಚಕ್ರವರ್ತಿ ವಿಕೆಟ್ ಪಡೆದ ಲಿಸ್ಟ್ ನಲ್ಲಿ ಎರಡನೇ ಸ್ಥಾನದಲ್ಲಿ ಕಂಡು ಬಂದರು.,ಮೊದಲ ಸ್ಥಾನ ನ್ಯೂಜಿಲ್ಯಾಂಡ್ ನ ಹೆನ್ರಿಯ ಪಾಲ್ ಆಗಿದ್ದರೇ ಎರಡನೇದು ನಮ್ಮ ಸ್ಪಿನ್ನಿಂಗ್ ಮಾಂತ್ರಿಕ ಚಕ್ರವರ್ತಿ. ಒಂದೇ ಮ್ಯಾಚ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 10 ಓವರ್ ಗೆ 42 ರನ್ ನೀಡಿ ಅಮೂಲ್ಯ ಐದು ವಿಕೆಟ್ ಕಬಳಿಸಿದ್ದರು ಇನ್ನು ಅದೇ ಮ್ಯಾಚ್ನಲ್ಲಿ ನ್ಯೂಜಿಲ್ಯಾಂಡ್ ನ ಫಾಸ್ಟ್ ಬೌಲರ್ ಹೆನ್ರಿ ಕೂಡ ಸೇಮ್ ಟು ಸೇಮ್ ದಾಖಲೆ ನಿರ್ಮಾಣ ಮಾಡಿದ್ದರು . ಇನ್ನು ಎಲ್ಲಕಿಂತ ಹೆಚ್ಚಾಗಿ ನನ್ನ ಒಡಲಧ್ವನಿಗೆ ಕಾಡಿದ್ದು, ಬೇಡಿದ್ದು ನಮ್ಮ ಕೆ ಎಲ್ ರಾಹುಲ್!ಈತ ಮಾತ್ರ ಅದ್ಬುತ ಪ್ರತಿಭೆ ಎಂಬುದರಲ್ಲಿ ಎರಡು ಮಾತಿಲ್ಲ ಪೊಲಿಟಿಕ್ಸ್ ಹಾಗೂ ಮತ್ತಿತ್ಯಾದಿ ಕಾರಣಗಳಿಗೆ ತನ್ನನ್ನು ತ್ಯಾಗ ಮಾಡುವ ಕೆಎಲ್ಲ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳದೇ ಇರಲಾರರು ಇದರ ಬಗ್ಗೆ ಹೆಚ್ಚು ಹೇಳುವ ಅಗತ್ಯ ಇಲ್ಲ.ಕ್ರಿಕೆಟ್ ನೋಡುಗರು ಕ್ರಿಕೆಟ್ ಪ್ರೇಮಿಗಳು ಖಂಡಿತವಾಗಿಯೂ ಅರಿತುಕೊಂಡಿರುತ್ತಾರೆ. ಟೀಮ್ ಇಂಡಿಯಾದ ಮೆನೇಜ್ಮೆಂಟ್ ಯಾವ ತರಹ ಅವರನ್ನು ಬಳಸಿ ಕೊಳ್ಳುತ್ತಿದ್ದಾರೆ ,ಬಲಿ ಕೊಡುತ್ತಿದ್ದಾರೆ ಎಂದು.! ಆದರೂ ಕಿಂಚಿತ್ ಅಸಮಾಧಾನ ತೋರದೇ ತನ್ನ ಪಾಡಿಗೆ ತಾನು ನ್ಯಾಯ ಒದಗಿಸುತ್ತಾ ಬರುತ್ತಿದ್ದಾರೆ.ನಿಜಕ್ಕೂ ಕ್ರಿಕೆಟ್ ಇತಿಹಾಸದಲ್ಲಿ ಈತನ ಸರಿ ಸಾಟಿ ಬೇರೆ ಯಾರು ಇರಲಿಕ್ಕಿಲ್ಲವೇನೋ ?ಓಪನಿಂಗ್ಗೂ ಸೈ . ಫಿನಿಶಿಂಗ್ಗೂ ಜೈ!! ಓಪನರ್ ಆಗಿ ಬ್ಯಾಟ್ ಬೀಸಬಲ್ಲರು ಐದನೇ,ಎಂಟನೇ ಕ್ರಮಾಂಕದಲ್ಲೂ ಕೂಡ ಬ್ಯಾಟ್ ಮಾಡಬಲ್ಲರು.ಎಲ್ಲಕಿಂತ ಹೆಚ್ಚಾಗಿ ಉತ್ತಮ ಕೀಪರ್ ! ಮೆನೇಜೆಮೆಂಟ್ ಅಪ್ಪಣೆಗನುಗುಣವಾಗಿ ಆಗಾಗ ಕೀಪರ್ , ಮ್ಯಾಚ್ ಫಿನಿಶರ್ ಆಗಿ ಕೂಡ ಕರ್ತವ್ಯ ನಿಭಾಯಿಸುವ ಕೆಲ್ ಉತ್ತಮ ಕ್ರಿಕೆಟಿಗ.ಸೆಮಿಫೈನಲ್ ಮತ್ತು ಫೈನಲ್ ಪಂದ್ಯದಲ್ಲಿ ಫಿನಿಶರ್ ಆಗಿ ತಮ್ಮ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಕೆಎಲ್ಲ್ ನಮ್ಮ ಹೆಮ್ಮೆ. ದಯಮಾಡಿ ಮೆನೇಜ್ಮೆಂಟ್ ಗಮನಹರಿಸಬೇಕು ಆತನ ಜೊತೆ ಬಿಟ್ಟ ಸ್ಥಳ ಭರ್ತಿ ಮಾಡಲು ಅಥವಾ ಕೆರೆಯರ್ ಹಾಳುಗೆಡುವ ರಾಜಕೀಯದಾಟ ಆಡದೇ ಆತನ ಸಾಮರ್ಥ್ಯವನ್ನು ಮನಗಾಣಿ. -shiವು

ಭಾನುವಾರ, ಜೂನ್ 9, 2024

ಮೋದಿ ಯುಗ ಮುಗಿತೇ ?ರಾಮನ ನಾಡಿನಲ್ಲಿ ಸಿಗಲಿಲ್ಲ ನಿರೀಕ್ಷಿತ ಬೆಂಬಲ !!

ಅಂತೂ, ಎಲ್ಲರ ಬಹು ನೀರಿಕ್ಷೆಯ ಲೋಕ ಸಭಾ ಎಲೆಕ್ಷನ್ ರಿಸಲ್ಟ್ ಬಂದಿದೆ .ಅಬ್ ಕಿ ಬಾರ್ 400 ಪಾರ್ ಎನ್ನುವ ಘೋಷಣೆಯೊಂದಿಗೆ ಅತ್ಯಂತ ಪ್ರಚಲಿತದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ ಮತ್ತು ಅದರ ಮಿತ್ರ ಪಕ್ಷಗಳಿಗೆ (ಎನ್ ಡಿ ಎ) ಘೋಷಣಾ ಸಂಖ್ಯೆ ಬದಿಗಿರಿಲಿ ಅಟ್ಲಿಸ್ಟ್ ಬಹುಮತವನ್ನೂ ಪಡೆಯುವಲ್ಲಿ ಸಫಲ ಕಾಣಲಿಲ್ಲ, ಇನ್ನೂ ಘಟಬಂಧನದ ಇಂಡಿಯಾ ಒಕ್ಕೂಟಕ್ಕೂ ಬಹುಮತ ಲಭಿಸಿಲ್ಲ ಅದು ದಕ್ಕಿಸಿ ಕೊಳ್ಳುವುದು ಅಷ್ಟೊಂದು ಸುಲಭದ ಮಾತು ಅಲ್ಲ.ನಾವು ಗೆದ್ದೇ ಬೀಗುತ್ತಿವೀ ಎನ್ನುವ ಬಿಜೆಪಿಯ ತತ್ವ ಸಿದ್ದಾಂತಗಳೆಲ್ಲಾ ಮತದಾರ ತಲೆ ಕೆಳಗಾಗಿಸಿದ್ದಾನೆ ಇನ್ನೂ ಚುನಾವಣಾ ಸಮೀಕ್ಷೆ(ಎಕ್ಸಿಟ್ ಪೋಲ್) ಎಲ್ಲವೂ ಸುಳ್ಳಾಗಿಸಿದೆ ಮತದಾರ ಬದಲಾವಣೆ ಬಯಸಿದ್ದಾನೋ ಅಥವಾ ಕೊನೆ ಕ್ಷಣದಲ್ಲಿ ಇಂಡಿಯಾದ ಮೈತ್ರಿಕೂಟದ ಗ್ಯಾರಂಟಿಗಳೆಲ್ಲಾ ಕೈ ಹಿಡಿಯಿತೋ ಗೊತ್ತಿಲ್ಲ.
ಬಿಜೆಪಿ 240 ಹಾಗೂ ಅದರ ಮೈತ್ರಿಕೂಟ 293ಕ್ಕೆ ತೃಪ್ತಿ ಪಡೆದು ಕೊಳ್ಳುವಂತಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಉಳಿಗಾಲ ಇಲ್ಲ ಎನ್ನುವ ಪರಿಸ್ಥಿತಿಯಲ್ಲಿ ಫಿನಿಕ್ಸ್ ನಂತೆ ಎದ್ದು ಬಂದಿದ್ದೆ ಸೋಜಿಗ ಅಚ್ಚರಿ ಪಡುವಂತಿದೆ ಕಳೆದ 2019 ರ ಚುನಾವಣೆಯಲ್ಲಿ52 ಸೀಟು ಬಾಚಿದ್ದ ಕೈ ಪಾರ್ಟಿ ಈ ಬಾರಿ 99 ಕ್ಕೆ ಬಂದು ನಿಂತಿತು. ಅದರ ಹೊಸ ನಾಮಧೇಯದ ಇಂಡಿಯಾ ಮೈತ್ರಿ ಕೂಟ ಒಟ್ಟು 234 ಕ್ಷೇತ್ರವನ್ನು ತನ್ನದಾಗಿಸಿ ಕೊಂಡಿತು.ಯಾವ ಪಾರ್ಟಿಗೂ ನಿಚ್ಚಳ ಬಹುಮತ ದೊರಕದೆ ಇದ್ದರೂ ಸಹಾ, ಸರ್ಕಾರ ರಚಿಸುವುದಕ್ಕೆ ಇಬ್ಬರಿಗೂ ಅಡ್ಡಿ ಇಲ್ಲ ಬಹುಪಾಲು ಭಾರತೀಯ ಜನತಾಪಾರ್ಟಿ ನೇತೃತ್ತ್ವದ ಏನ್ ಡಿ ಎಗೆ ಅವಕಾಶ ಇದ್ದರೂ, ಅದು ಅಷ್ಟು ಸುಲಭದ ಮಾತು ಅಲ್ಲ. ಅದರ ಎರಡು ಮಿತ್ರ ಪಕ್ಷಗಳಾದ ಬಿಹಾರದ ನಿತೀಶ್ ಕುಮಾರ್ ಸಾರಥ್ಯದ ಜೆಡಿಯು,ಹಾಗೂ ಆಂಧ್ರ ಪ್ರದೇಶದ ತೆಲುಗು ದೇಶಂ ಪಾರ್ಟಿಯ ಚಂದ್ರ ಬಾಬು ನಾಯ್ಡು 16 ಮತ್ತು 12 ಎಂಪಿ ಬಲವನ್ನು ಹೊಂದಿರುವ ಈರ್ವರು ಎನ್ ಡಿ ಯ ಕೇಂದ್ರ ಬಿಂದು.ಇಂಡಿಯಾ ಹಾಗೂ ಎನ್ ಡಿ ಯ ಕ್ಕೂ ಕೂಡಾ ಸರಕಾರ ರಚಿಸುವದಕ್ಕೆ ಈರ್ವರೇ ಕಿಂಗ್ ಮೇಕರ್ ಗಳು. ಈರ್ವರೂ ಕೂಡಾ ಬಹಳ ಡೇಂಜರ್ ಗಳೇ ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಹಾರುವ ಹಕ್ಕಿಗಳು.ಕುರ್ಚಿ,ಪದವಿಗಾಗಿ ಹಂಬಲಿಸುವ ಬಕ ಪಕ್ಷಿಗಳು ಎನ್ನಬಹುದು.ಪಲ್ಟಿ ರಾಮ್ ಎಂದೇ ಖ್ಯಾತಿ ಪಡೆದಿರುವ ನಿತೀಶ್ ಕುಮಾರ್ ಗಾಳಿ ಬಂದ ಕಡೆ ತೋರಿ ಕೊಳ್ಳುವ ಮಹಾನ್ ಅತಿರಥ. ಇತ್ತೀಚೆಗಷ್ಟೇ ಇಂಡಿಯಾ ಒಕ್ಕೂಟ ಸೇರಿ ಪುನಾ: ಎನ್ ಡಿ ಎ ಜೊತೆ ಸೇರಿದವರು. ಈತ ಸದಾ ಲಾಭದ ದಿಕ್ಕಿಗೆ ಸಂಚರಿಸುವ ವ್ಯಕ್ತಿ ಅದಕ್ಕಾಗಿ ಏನೋ ಪ್ರಧಾನಿ ನರೇಂದ್ರ ಮೋದಿಯವರೇ ಆತನಿಗೆ ಪಲ್ಟಿ ರಾಮ್ ಎಂದೇ ಅಡ್ಡ ಹೆಸರು ಇಟ್ಟಿದ್ದರು. ಇನ್ನು ಚಂದ್ರ ಬಾಬು ನಾಯ್ಡು ಕೂಡಾ ಇದಕ್ಕೆ ಹೊರತಾಗಿಲ್ಲ. ಈ ಇಬ್ಬರು ಯಾವುದೇ ಪಾರ್ಟಿ ಸೇರಿದರೇ ಮಾತ್ರ ಮ್ಯಾಜಿಕ್ ಸಂಖ್ಯೆ ಯೊಂದಿಗೆ ಸರ್ಕಾರ ರಚಿಸಲು ಸಹಕಾರಿ ಯಾಗಬಹುದು ಇಬ್ಬರ ಅಂಗಳದಲ್ಲಿ ಚೆಂಡು ಇದೆ .ಇಬ್ಬರನ್ನು ದೆಹಲಿಗೆ ಕರೆಯಿಸಿ ಬಿಜೆಪಿ ಪ್ರಮುಖರು ಮೀಟಿಂಗ್ ಮಾಡಿದ್ದು ಆಯಿತು, ಈರ್ವರ ಮನ ಒಲಿಸಿದ್ದು ಸದ್ಯಕ್ಕಿರುವ ವಿಚಾರವಾದರೂ ಮುಂದೇನೋ ಪ್ರಶ್ನಾರ್ಥ ಚಿಹ್ನೆ. ದೊಡ್ಡ ದೊಡ್ಡ ಬೇಡಿಕೆ ಇಟ್ಟು ಕಾಂಗ್ರೆಸ್ ಕೂಡಾ ಮನಸೆಳೆಯುತ್ತಿದೆ ಎಂಬ ವಿಚಾರವಿದ್ದರೂ, ಎರಡು ಬದಿಯಲ್ಲೂ ಸರಕಾರ ರಚಿಸಲು ಇವರೇಗಳೇ ಪ್ರಮುಖ ಧಾರಿಗಳು ಹಾಗಾಗಿ ಅಪ್ಪಿಕೊಳ್ಳಲು ಹಾಗೂ ಅವರ ಬೇಡಿಕೆಯನ್ನು ಒಪ್ಪಿಕೊಂಡು ಸರ್ಕಾರ ಸ್ಥಾಪಿಸಲು ಸರಳವಾಗಿ 400 ಸ್ಥಾನ ದಾಟಲಿದೆ ಎಂಬಂತೆ ಬಿಂಬಿತವಾಗಿದ್ದರೂ ಬಿಜೆಪಿ ಎಡವಿದ್ದು ಎಲ್ಲಿ ? ಅಯೋಧ್ಯಯಲ್ಲಿ ರಾಮ ಮಂದಿರವನ್ನು ಪುನರ್ ನಿರ್ಮಾಣ ಮಾಡಿ ಹಿಂದೂಧರ್ಮಗಳ ಮತ ಬಾಚಿ ಕೊಳ್ಳುತ್ತದೆ ಎಂದೇ ಭವಿಷ್ಯ ಹೇಳುತ್ತಿದ್ದರೂ ,ಎಲ್ಲವೂ ಉಲ್ಟಾ ಪಲ್ಟಾ ಆಗಿ ಹೋಗಿದ್ದು ಅಚ್ಚರಿಸಿ ಪಡುವಂತಿದೆ. ದೇಶದಲ್ಲಿ ಉತ್ತರ ಪ್ರದೇಶವು ಅತ್ಯಧಿಕ ಸೀಟು ಗೆಲ್ಲುತ್ತದೆ ಎಂದೇ ಭಾವಿಸಲಾಗಿತ್ತು ಮತ್ತೂ ಅದನ್ನು ಪಡೆದದೇ ತೀರಬೇಕಿತ್ತು 80 ಸೀಟಿನಲ್ಲಿ ಕಳೆದ 2019 ರಲ್ಲಿ 62 ಸೀಟು ಪಡೆದಿತ್ತು.ಈ ಬಾರಿ ಅದಕ್ಕಿಂತಲೂ ಲೆಕ್ಕಚಾರದಲ್ಲಿ ಹೆಚ್ಚೇ ಗೆಲ್ಲಬೇಕಿತ್ತು 80 ಕ್ಕೆ 80 ಕ್ಕೂ ಬಾಚಿ ಕೊಳ್ಳುವ ಅವಕಾಶವನ್ನು ಹೊಂದಿತ್ತು 500ವರ್ಷಗಳಿಂದಲೂ ಬಹಳಷ್ಟು ಚರ್ಚೆಯ ವಿಷಯವಾಗಿದ್ದ ಅಯೋಧ್ಯಾ ರಾಮಂದಿರದ ನಿರ್ಮಾಣ ಮತ್ತು ಉದ್ಘಾಟನೆ ವಿಶ್ವದಾದ್ಯಂತ ಪ್ರಚಲಿತಕ್ಕೆ ಬಂದಿತ್ತು ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಅಲ್ಲಿನ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಮತಗಟ್ಟೆಯನ್ನು ಈ ಬಾರಿ ಖಂಡಿತ ಕೊಳ್ಳೆ ಹೊಡೆದೆ ಹೊಡೆಯುತ್ತಾರೆ ಎಂದು ಬೀಗಿದ್ದು ಸತ್ಯ. ಇನ್ನು ಉತ್ತರ ಪ್ರದೇಶದಲ್ಲಿ ಬಹಳಷ್ಟು ಅಭಿರುವುದ್ಧಿ ಕೆಲಸ ಕಾರ್ಯಗಳೂ ನಡೆದಿತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ,ಜೊತೆಗೆ ಇನ್ಫೋಟ್ರಕ್ಸ್ಚಾರ್ ಕೆಲಸಗಳು ಅದ್ಭುತವಾಗಿ ನಡೆದಿದ್ದವು .ಇಷ್ಟೆಲ್ಲಾ ಇಂಪ್ರುಮೆಂಟ್ ಆಗಿದ್ದ ಯುಪಿಯಲ್ಲಿ ಜನತಾ ಜನಾರ್ಧನ ವೋಟು ಕೊಡಲೇ ಇಲ್ಲೇ ಕಳೆದ ಚುನಾವಣಾ ಯಲ್ಲಿ62 ಸಿಕ್ಕಿದ್ದ ಸೀಟು ಈ ಬಾರಿ ಕೇವಲ ಅದರ ಅರ್ಧದಷ್ಟು ಕಡಿಮೆಗೊಂಡಿತ್ತು ಕೇವಲ 32 ಸೀಟಿಗೆ ತೃಪ್ತಿ ಪಡೆದುಕೊಳ್ಳಬೇಕಾದ ಅನಿವಾರ್ಯತೆ ಉದ್ಭವಿತು.ಜೊತೆಗೆ ಮಾಹಾರಾಷ್ಟ,ರಾಜಸ್ಥಾನ, ಮಧ್ಯ ಪ್ರದೇಶಗಳೂ ಕೂಡ ಮೋಸ ಮಾಡಿ ಬಿಟ್ಟವು. ನರೇಂದ್ರ ಮೋದಿ ವರ್ಚಸ್ಸು ಕುಠಿತ ಗೊಂಡಿತೇ ? ಬಿಜೆಪಿ ಸರ್ಕಾರದ ಆಡಳಿತ ಹಳಸಿತೇ ,ಸಾಕು ಅನ್ನಿಸಿತೇ ಗೊತ್ತಿಲ್ಲ.ನರೇಂದ್ರ ಮೋದಿಯ ಅಲೆ, ವರ್ಚಸ್ಸಿನಿಂದ ಸತತ ಎರಡೆರಡು ,ಮೂರ್ಮೂರು ಬಾರಿ ಎಲ್ಲಾ ಹೆಚ್ಚಿನ ಅಭ್ಯರ್ಥಿಗಳು ಗೆದ್ದು ಬಂದಿದ್ದು ವಾಸ್ತವ ಈ ಬಾರಿ ಇಷ್ಟೆಕ್ಕೆ ತಂದು ನಿಲ್ಲಿಸಿದ ಮತದಾರ, ಮುಂದೆ ಬಿಜೆಪಿಯ ಭವಿಷ್ಯ ಏನು ಎತ್ತ ಎಂಬುದು ಯಕ್ಷ ಪ್ರಶ್ನೆ. ಈ ಬಾರಿ ಮೋದಿಯೂ ಸಹಾ ತಮ್ಮ ಎಂದಿನ ಕ್ಷೇತ್ರವಾದ ವಾರಾಣಾಸಿಯಲ್ಲೂ ಸಹಾ ಪ್ರಾಸದಾಯಿಕ ಗೆಲುವನ್ನು ಕಂಡಿದ್ದು ಎಲ್ಲೂ ಮೋದಿ ಯುಗ ಮುಗಿಯುತ್ತೀದೆಯೇ ಎಂಬಂತೆ ಭಾಸವಾಗಿತ್ತು.ಒಟ್ಟಾರೆ ಈ ಬಾರಿ ಬಿಜೆಪಿಗೆ ನಿರೀಕ್ಷಿಸಿದಷ್ಟು ಸೀಟು ಬಾರದೇಹೋಗಿರುವುದು ವಿಪರ್ಯಾಸ. ಏನೇ ಇರಲಿ ಬಿಜೆಪಿ ನೇತೃತ್ವದ ಏನ್ ಡಿ ಎ ಸರ್ಕಾರ ಆಳ್ವಿಕೆ ನಡೆಸುವುದು 99 ಪ್ರತಿಶತವೇ ಆದರೂ, ಈ ಸರ್ಕಾರ ಎಷ್ಟು ದಿನ ಇರತ್ತೋ ಗೊತ್ತಿಲ್ಲ. ಸಂಸದೀಯ ಮೀಟಿಂಗ್ ನಲ್ಲಿ ಎನ್ ಡಿ ಎ ಮಿತ್ರ ಪಕ್ಷಗಳು ಸಪೋರ್ಟ್ ಅಂತೂ ಕೊಟ್ಟಿದ್ದಾವೆಯಾದರೂ ,ಯಾವ ಕ್ಷಣದಲ್ಲೂ ಬೇಕಾದರೂ ತಮ್ಮ ನಡವಳಿಕೆಯನ್ನು ಬದಲಾವಣೆ ಮಾಡು ಬಹುದು ಎಂಬುದು ಕೂಡಾ ಅಷ್ಟೇ ಸತ್ಯ. ಉತ್ತಮ,ದೊಡ್ಡ ಮಟ್ಟದ ಸ್ಥಾನ ಮಾನದ ಆಕಾಂಕ್ಷಿಗಳೆಲ್ಲವನ್ನೂ ಹೊಂದಿಸಿಕೊಂಡು ಆಡಳಿತ ನೆಡೆಸುವುದು ಕೊಡ ಅಷ್ಟು ಸುಲಭದ ಮಾತು ಅಲ್ಲವೇ ಅಲ್ಲಾ ಸ್ವತಂತ್ರವಾಗಿ ನಿರ್ಣಾಯ ತೆಗೆದುಕೊಳ್ಳಲು ಸಾಧ್ಯವಿಲ್ಲ ಇನ್ನು ಕಾಂಗ್ರೆಸ್ ಪಕ್ಷವೂ ಇಂಡಿಯಾ ಮೈತ್ರಿ ಕೂಟದಲ್ಲಿ ಸಾಕಷ್ಟು ಪಾರ್ಟಿಗಳಿದ್ದೂ ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ರಚಿಸುವುದು ಜೊತೆಗೆ ಐದು ವರ್ಷಗಳ ಕಾಲ ನಿರ್ವಹಿಸುವುದು ಅಸಾಧ್ಯವೇ ಸರಿ.! ಏನೇ ಇರಲಿ ಸಧ್ಯದ ಮಾಹಿತಿ ಪ್ರಕಾರ ನರೇಂದ್ರ ಮೋದಿ ಮೂರನೇ ಬಾರಿಗೆ ಇದೆ ಭಾನುವಾರ ಜೂನ್ 9ರ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂಬ ಮಾಹಿತಿ ಇದ್ದರೂ ಅದೆಷ್ಟು ಸತ್ಯವೊ ಕಾದು ನೋಡಬೇಕಾಗಿದೆ.