ಸೋಮವಾರ, ಜೂನ್ 13, 2016
ವಿಪಕ್ಷಕ್ಕೆ ಗರಬಡಿದಿದ್ಯಾ? ಆಗಿದ್ದೇನು ? ಆಗುತ್ತಿರುವುದಾದರು ಏನು ? ದಿಟ್ಟ ಪೋಲಿಸ್ ಅಧಿಕಾರಿ ಅನುಪಮಾ ಶೆಣೈ ರಾಜೀನಾಮೆ ಸುತ್ತಾ !
ಡಿಕೆ ರವಿ ನಂತರ ಇಡೀ ಕರ್ನಾಟಕದ ಗಮನವನ್ನು ಸೆಳೆದಿರುವ ದಿಟ್ಟ ಪೊಲೀಸ್ ಅಧಿಕಾರಿ, ಕೂಡ್ಲಿಯಡಿ ವೈಎಸ್ಪಿ ಅನುಪಮಾ ಶೆಣೈ !
ರಾಜ್ಯ ಕಾರ್ಮಿಕ ಹಾಗೂ ಅಲ್ಲಿನ ಉಸ್ತುವಾರಿ ಸಚಿವ ಪರಮೇಶ್ವರ ನಾಯ್ಕರ ಫೋನ್ಕಾಲ್ ರಿಸಿವ್ ಮಾಡಿಲ್ಲ ಎಂಬೀ ಒಂದೇ ಒಂದು ಕಾರಣದಿಂದ ಕೊಡ್ಗಿ ಯಿಂದ ಬಿಜಾಪುರಕ್ಕೆ ಗ್ರಹ ಇಲಾಖೆಯ ಕ್ರಪೆಯಿಂದ ತನ್ನ ಪವರ್ ಬಳಿಸಿ ವರ್ಗಾವಣೆ ಮಾಡಲಾಗಿದೆ ಎಂದು ಹತಾಶೆಯಿಂದ ಮೂಲತಃ ಉಡುಪಿ ಜಿಲ್ಲೆಯ ಪಡುಬಿದ್ರೆ ಸಮೀಪದ ಫಣಿಯೂರಿನವರಾದ ಪ್ರಸ್ತುತ ಕೂಡ್ಲಿಯ ಡಿವೈಎಸ್ಪಿಯಾಗಿರುವ ಅನುಪಮಾ ಶೆಣೈ ರಾಜಿನಾಮೆ ನೀಡಿದ್ದಲ್ಲದೇ ಸೋಶಿಯಲ್ ನೆಟ್ವರ್ಕ್ ಮೂಲಕ ಸಚಿವರ ವಿರುದ್ಧ ರಣ ಕಹಾಳೆ ಮೊಳಗಿಸಿದ್ದರು. ಶೆಣೈಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಒಳ್ಳೆತನಕ್ಕೆ ಅವರಿಗೆ ನೈತಿಕ ಬೆಂಬಲ ವ್ಯಕ್ತವಾಗಿತ್ತು. ದಿಟ್ಟ ಪೋಲಿಸ್ ಅಧಿಕಾರಿ ಡಿವೈಎಸ್ ಪಿ ಅನುಪಮಾ ಶೆಣೈ ಅವರನ್ನು ಸರ್ಕಾರ ವಿಜಯಪುರದ ಇಂಡಿಗೆ ವರ್ಗಾವಣೆ ಮಾಡಿರುವುದು ಭಾರೀ ವಿವಾದಕ್ಕೆ ಈಡಾಗಿತ್ತು. ಸರ್ಕಾರದ ನಿರ್ಧಾರ ವಿರೋಧಿಸಿ ಕೂಡ್ಲಿ ಜನತೆ ಬಂದ್ ಕೂಡಾ ಆಚರಿಸಿದ್ದರು . ಸೋಷಿಯಲ್ ಮೀಡಿಯಾದಲ್ಲಿ ಅವರು ಪಡೆಯುತ್ತಿರುವ ಬೆಂಬಲ, ಜನಪ್ರಿಯತೆ ಬಿಟ್ಟರೆ ,ಹಾಲಿ ಸರ್ಕಾರ ದಿಂದ ಕಿಂಚಿತ್ ಬೆಂಬಲ ಬಿಡಿ .ವಿಚಾರವನ್ನು ತನಿಖೆಗೆ ಎತ್ತಿ ಕೊಳ್ಳುವ ಔದಾರ್ಯವನ್ನೂ ತೋರಲಿಲ್ಲ . ಇನ್ನೂ ವಿರೋಧ ಪಕ್ಷಗಳು ಸತ್ತು ಹೊಗಿವೆಯೋ ಎಂಬಂತೆ ವರ್ತಿಸಿವೆ .. ವಿರೋಧ ರಾಜಕೀಯ ಪಕ್ಷಗಳಲ್ಲೋ೦ದಾದ ಜೆಡಿಸ್ ನ ಕುಮಾರ ಸ್ವಾಮೀ ಎರಡು ದಿನ ಮೊಸಳೆ ಕಣ್ಣೀರು ಸುರಿಸಿದ್ದು ಬಿಟ್ಟರೆ , ಬ್ರಹತ್ ಕೇಂದ್ರ ರಾಜಕೀಯ ಪಕ್ಷ ಬಿಜೆಪಿ ಮಾತ್ರ ಅತ್ತ ತಲೆ ಹಾಕಿ ಮಲಗಿ ಕೊಳ್ಳಲು ಸಾಧ್ಯವಾಗದ೦ತಾಯಿತು .. ಕೇವಲ ಕುರ್ಚಿ ಆಸೆಗಾಗಿ ಹಗಲು ರಾತ್ರಿ ಹೋರಾಟ ನೆಡಸುವ ಇವುಗಳು ಒಂದು ಹೆಣ್ಣು ಅದರಲ್ಲೂ ದಕ್ಷ -ದಿಷ್ಟ -ನಿಷ್ಟಾವ೦ತ ಪೋಲಿಸ್ ಅಧಿಕಾರಿಯ ಬೆಂಬಲಕ್ಕೆ ನಿಲ್ಲದಿರುವುದು ನಾಚಿಕೆ ,ಹೇಸಿಗೆಯ ಪರಮಾವಧಿ .!!
ಇನ್ನು ಆಡಳಿತ ಪಕ್ಷ ಗ್ರಹ ಇಲಾಖೆಗೆ ಮರ್ಯಾದೆ ಇಲ್ಲವೇ ?? ಕೇವಲ ವರ್ಗಾವಣಯನ್ನೇ ಮುಂದಿಟ್ಟು ಕೊಂಡು ಶೆಣೈ ರಾಜಿನಾಮೆ ನೀಡಿದರೆ ಅಥವಾ ಬೇರೆ ಏನಾದರೂ ಕಾರಣವಿದ್ದಿರಬಹುದೇ ? ಸಚಿವರು ಕೆಲವೊಂದು ಅವ್ಯಾಹತ ಚುಟುವಟಿಕೆಯಲ್ಲಿ ಭಾಗಿಯಾಗಿದ್ದರು ಅದನ್ನು ಪತ್ತೆ ಹಚ್ಚಿದ್ದ ಶೆಣೈ ಅವರು ಇದರಿಂದ ಮೇಲಿಂದ ಮೇಲೆ ಕಿರುಕುಳಕ್ಕೆ ಒಳಗಾಗಿ ರಾಜಿನಾಮೆ ಸಲ್ಲಿಸಿದ್ದಾರೆ ಎಂಬ ವಿಚಾರವೂ ವಿದೆ ಒಟ್ಟಾರೆ ಏನಾಗಿದೆ ಎಂಬ ವಾಸ್ತವ ಸಂಗತಿಯನ್ನು ಪತ್ತೆ ಮಾಡಿ ಅಧಿಕಾರಿಗೆ ನ್ಯಾಯ ದೊರಕಿಸಿ ಕೊಡಬೇಕಿತ್ತು..ಈರ್ವರನ್ನು ವಿಚಾರಣೆಗೆ ಒಳಪಡಿಸುವ ಗೌಜಿಗೆ ಸರ್ಕಾರ ಯಾಕೆ ಮುಂದಾಗಿಲ್ಲ ? ಇಲ್ಲಿ ತಪ್ಪಿತಸ್ತರು ಯಾರು ? ಇಲ್ಲಿ ಆಗಿದ್ದು ,ಆಗುತ್ತಿರುವುದಾದರು ಏನು ? ಸಾಕಷ್ಟು ಅನುಮಾನಗಳು ಮನದ ಪುಟದಲ್ಲಿ ಹೋಗೆಯಾಡುತ್ತಿವೆ.ಪರಮೇಶ್ವರ ನಾಯ್ಕ ವಿರುದ್ಧ ಡಿವೈಎಸ್ಪಿ ಅನುಪಮಾ ಶೆಣೈಯವರು ,ಸೋಶಿಯಲ್ ನೆಟ್ ವರ್ಕ್ ಗಳ ಮೂಲಕ ಮಾಡಿರುವ ಆರೋಪ ಸತ್ಯವೇ ಆಗಿದ್ದಲ್ಲಿ ದಾಖಲೆ ಏಕೆ ಬಿಡುಗಡೆ ಮಾಡುತ್ತಿಲ್ಲ? ಫೇಸ್ ಬುಕ್ ನಲ್ಲಿ ಹರಿಯಬಿಡುತ್ತಿರುವ ಸ್ಟೇಟಸ್ಸುಗಳು ಯಾರದ್ದು ? ಯಾಕಾಗಿ ? ಸಚಿವರ ವಿರುದ್ದ ಸೋಶಿಯಲ್ ನೆಟ್ವರ್ಕ್ ಗಳ ಮೂಲಕ ಮಾಡುತ್ತಿರುವ ಟೀಕಾ ಪ್ರಹಾರಗಳನ್ನು ಗಮನಿಸುತ್ತಿದ್ದರೆ ಇಲ್ಲಿ ಏನೋ ಗಂಬೀರವಾದ ವಿಚಾರ ವಿದೆ ಎನ್ನಲು ಅಡ್ಡಿ ಇಲ್ಲ ?!
ತನ್ನನ್ನು ವರ್ಗಾವಣೆ ಮಾಡಿದ್ದ ದ್ವೇಷವನ್ನು ಮುಂದಿಟ್ಟುಕೊಂಡು ಅನುಪಮಾ ಅವರು ಹತಾಶೆಯ ನಿರ್ಧಾರ ತೆಗೆದುಕೊಂಡಿದ್ದಾರೆಯೇ?. ಅಥವಾ ಅವರ ರಾಜೀನಾಮೆ ಪ್ರಕರಣದ ಹಿಂದೆ ಬೇರೆ-ಬೇರೆ ರಾಜಕೀಯ ಶಕ್ತಿಗಳ ಕೈವಾಡವಿದೆಯೇ?. ಅವರು ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಸೇರುವ ಉದ್ದೇಶ ಹೊಂದಿದ್ದಾರೆಯೇ? ರಾಜೀನಾಮೆ ಬಿಸಾಕಿ ಭೂಗತ ವಾಗಿದ್ದ ಅಧಿಕಾರಿ ಒಮ್ಮೇಲೆ ಪ್ರತ್ಯಕ್ಷವಾಗಿ ಮಾಧ್ಯಮಗಳ ಪ್ರಶ್ನೆಗೆ “ಪೇಸ್ ಬುಕ್ ನಂಗೆ ಎ೦ದ್ರೆ ಏನು ಅಂತ ಗೊತ್ತಿಲ್ಲ ಇದು ನಂದಲ್ಲ “ ಎಂದು ಹೇಳಿರುವ ಇವರ ಪೇಸ್ ಬುಕ್ ನ್ನು ಯಾರು ಉಪಯೋಗಿಸುತ್ತಿದ್ದಾರೆ ? ಇನ್ನೋ೦ಡೆದೆ ಸಚಿವರೂ ಸಹಾ ಪ್ರಕರಣದ ಕುರಿತು ಯಾವ ಸ್ಪಷ್ಟೀಕರಣವನ್ನೂ ನೀಡದೇ ಉಡಾಫೆಯ ಹೇಳಿಕೆ ನೀಡುತ್ತಿದ್ದಾರೆ . ಮೊದಲು ರಾಜಿನಾಮೆಯನ್ನು ಪಡೆಯದ ಸರ್ಕಾರ ನಿನ್ನೆ ಒಮ್ಮೆಲೇ ರಾಜಿನಾಮೆ ಪತ್ರವನ್ನು ಅ೦ಗೀಕರಿಸಿದ್ದರ ಒಳ ಮರ್ಮವೇನು ? ಒಟ್ಟಾರೆ ಜನರ ಪ್ರಶ್ನೆಗೆ ಉತ್ತರ ಕೊಡುವವರು ಯಾರು? ಈ ಬಗ್ಗೆ ತನಿಖೆ ಮಾಡುವ ಅಧಿಕಾರ ಯಾರಿಗಿದೆ .. ಹಾಲಿ ಸರ್ಕಾರ ಮುಮ್ಮಲ ಮಲಗಿದೆ ..! ವಿಪಕ್ಷ ಇದ್ದೂ ಇಲ್ಲದ೦ತಿದೆ .. ಕೇವಲ ಬೆರಳಣಿಕೆ ಮ೦ದಿ ಮಾತ್ರ ಇದನ್ನು ಗಂಭೀರವಾಗಿ ತೆಗೆದು ಕೊಂಡು ಸತ್ಯಾಸತ್ಯತೆ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಅಷ್ಟೇ ..! ಏನೇ ಇರಲಿ ಒಳ್ಳೆಯವರಿಗೆ ಕಾಲವಿಲ್ಲ !
ಟಿಪ್ಪು –ತಪ್ಪು! ಏನೀದು ಟಿಪ್ಪು ಸುಲ್ತಾನ್ ಜಯಂತಿ.?
ಸ್ವಾಭಿಮಾನ, ಸಾಹಸ, ಶೌರ್ಯಕ್ಕೆ ಮತ್ತೊಂದು ಹೆಸರೇ ಟಿಪ್ಪು ಸುಲ್ತಾನ್ !ಸ್ವಾತಂತ್ರ ಹೋರಾಟಕ್ಕೆ ಮುನ್ನುಡಿ ಬರೆದ ಟಿಪ್ಪು ಸುಲ್ತಾನ್ ಬ್ರಿಟೀಷರಿಗೆ ಸಿಂಹ ಸ್ವಪ್ನವಾಗಿದ್ದ, ನರಿಯಂತೆ ನೂರು ವರ್ಷ ಬದುಕುವ ಬದಲು ಹುಲಿಯಂತೆ ಮೂರು ವರ್ಷ ಬದುಕುತ್ತೇನೆ ಎಂದು ಗರ್ಜಿಸಿದ ಸಾಹಸಿ ಮೈಸೂರು ಹುಲಿ !
ಟಿಪ್ಪು ಸುಲ್ತಾನ್ ಅವರ ಜನ್ಮ ವಾರ್ಷಿಕೋತ್ಸವವನ್ನು ನಾಡಿನೆಲ್ಲೆಡೆ ಆಚರಿಸಲು ಕರ್ನಾಟಕ ಸರ್ಕಾರ ಇತ್ತೀಚಿಗೆ ನಿರ್ಧರಿಸಿತ್ತು ಇದರಿಂದ ಉಂಟಾದ ಗೊಂದಲ, ಗಲಭೆ, ಸಾವು ಎಲ್ಲವೂ ತಮಗೆ ಗೊತ್ತಿರುವುದೇ .. ಟಿಪ್ಪು ಜಯಂತಿ ಆಚರಿಸಬೇಕು ಬೇಡ ಎ೦ಬ ಪರ –ವಿರೋಧ ದ ಅಲೆಗಳ ಮಧ್ಯೆ ಅಂತೂ ಕೆಲೆವೆಡೆ ನೆರವೆರಿದ್ದು ಬೇರೆ ವಿಚಾರ .
ಟಿಪ್ಪು ಜಯಂತಿ ಆಚರಣೆಯ ಬಗ್ಗೆ ಈ ವರ್ಷ ರಾಜ್ಯ ಸರ್ಕಾರ ತಕರಾರು ತೆಗೆದು ಬಹಳಷ್ಟು ಸಾವು ನೋವು ಗೊಂದಲಕ್ಕೆ ಕಾರಣವಾಯಿತು ,,ಕೋಮು ಸಾಮರಸ್ಯ ಕ್ಕ ಕೂಡಾ ಕಾರಣ ವಾಯಿತು .. ಟಿಪ್ಪು ಜನಿಸಿ ,ಮರಣ ಹೊಂದಿ ಅದೆಷ್ಟು ವರ್ಷಗಳು ಗತಿಸಿ ಹೋಗಿದೆ ಅದೆಷ್ಟೋ ಸರಕಾರ ಬಂದೂ ಹೋಗಿವೆ. ಆದರೆ ಈ ವರ್ಷ ಮಾತ್ರ ಸರಕಾರಕ್ಕೆ ಟಿಪ್ಪು ಸುಲ್ತಾನ್ ನೆನಪು ಆಗಿದ್ದೋ ಯಾಕೋ ?ಟಿಪ್ಪು ಜಯಂತಿ ಆಚರಣೆ ಒಳ್ಳೆದೇ ..ಮಾಡಬೇಕಾದ್ದು ನಮ್ಮ ಕರ್ತವ್ಯ ..ಎಲ್ಲದಕ್ಕೂ ,ಎಲ್ಲಾರಿಗೂ ಒನೊಂದು ದಿನ ಆಚರಣೆ ಇದೆ .. ಹಲವು ಧರ್ಮೀಯರ ನಾಡು ಭಾರತ ದೇಶ ಯಾವತ್ತೂ ಧರ್ಮ ಜನಾಂಗ ಎಂಬ ಬೇಧ ಭಾವನ್ನು ತೋರುವಂತಿಲ್ಲ ಸ೦ವಿಧಾನದ ನಿಯಮ .. ಆದರೆ ಇಷ್ಟು ದಿನ ಮಮ್ಮಲ ಮಲಗಿದ್ದ ಸರ್ಕಾರ ಈಗ ತಟ್ಟನೆ ನನೆಪಾಗಿದ್ದು ಯಾಕೆ ? ಇದು ಟಿಪ್ಪುಗೆ ಗೌರವ ಕ್ಕಿಂತ ಅಗೌರವ ಜಾಸ್ತಿ ಎನ್ನುವುದು ನನ್ನ ಕಲ್ಪನೆ . ಇನ್ನು ಟಿಪ್ಪು ಅಭಿಮಾನಿಗಳು ಟಿಪ್ಪು ಜಯಂತಿ ಆಚರಣೆ ಸರಿಯಾದದ್ದೆ ಎ೦ದು ಹೋರಾಟಕ್ಕೆ ಇಳಿದರೇ ವಿರೋಧಿಗಳು ಸಹಾ ಅಷ್ಟೇ ಹುಟ್ಟಿ ಕೊಂಡಿದ್ದ೦ತೂ ಸುಳ್ಳಲ್ಲ .. ಟಿಪ್ಪು ಮುಸಲ್ಮಾನನಾಗಿದ್ದು ಆತನ ಆಡಳಿತದಲ್ಲಿ ಸಾಕಷ್ಟು ನಡತೆ ಕೆಟ್ಟ ಕಾರ್ಯದಲ್ಲಿ ಪಾಲ್ಗೊಂಡಿದ್ದ ಮಹಿಳೆಯ ಶೀಲ ಹರಣ ಸೇರಿದಂತೆ , ಇಸ್ಲ್ಲಾಂ ಧರ್ಮಕ್ಕೆ ಆತ ಇತರ ಧರ್ಮೀಯರನ್ನು ಮತಾಂತರಗೊಳಿಸುತ್ತಿದ್ದ .. ಕ್ರೂರತನ ಸರ್ವಾದಳಿತ ಆತನಲಿತ್ತು ,ಟಿಪ್ಪು ಸುಲ್ತಾನ್ ಒಬ್ಬ ರಾಷ್ಟ್ರ ದ್ರೋಹಿ, ಒಬ್ಬ ಮತಾಂಧ ಹಾಗಾಗಿ ಆತನ ಜನ್ಮ ದಿನವನ್ನು ಆಚರಿಸುವುದು ತಪ್ಪು ಎಂದು ಕಿರಿಕಾರಿದ್ದವು .. ಒಟ್ಟಾರೆ ಕೆಲವೆಡೆ ಆತನ ಬಗೆಗೆ ಉತ್ತಮ ಪ್ರಶಂಸೆ ಬಂದರೆ ಹಲವೆಡೆ ಗೊಂದಲ ಹರತಾಳಗಳೂ ಉ೦ಟಾಗಿದ್ದವು .
ಏನೆ ಇರಲಿ ಟಿಪ್ಪು ಬಗ್ಗೆ ಒಂದ್ಚೂರು :ವ್ಯಾಪಾರಕ್ಕೆಂದು ಭಾರತಕ್ಕೆ ಬಂದು ಬಂದೂಕಿನ ಶಕ್ತಿಯಿಂದ ದೇಶವನ್ನೇ ತನ್ನ ವಶಕ್ಕೆ ತೆಗೆದುಕೊಂಡ ಬ್ರಿಟಿಷರ ವಿರುದ್ದ ಹೋರಾಡಿದವರಲ್ಲಿ ಪ್ರಮುಖ ಹೆಸರು ಟಿಪ್ಪು ಸುಲ್ತಾನ್. ತಮ್ಮ ನಿಜನಾಮಧೇಯ ಶೇರ್-ಎ-ಮೈಸೂರ್ !ಬ್ರಿಟಿಷರ ಬಂದೂಕಿಗೆ ಎದೆಯೊಡ್ಡಿ ನಿಂತು ಅವರ ಆಕ್ರಮಣವನ್ನು ಎದುರಿಸಿ ತಮ್ಮ ನೆಲ ಮತ್ತು ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಯತ್ನಿಸಿದ ಮಹಾನ್ ಪರಾಕ್ರಮಿಗಳಲ್ಲಿ ಟಿಪ್ಪು ಸುಲ್ತಾನ್ ಪ್ರಮುಖ ಸ್ಥಾನದಲ್ಲಿ ನಿಲ್ಲುತ್ತಾರೆ. ಅಷ್ಟೇ ಅಲ್ಲ, ತಮ್ಮ ಸುತ್ತಮುತ್ತಲ ರಾಜರ ಮತ್ತು ಸಾಮಂತರಲ್ಲಿ ಒಗಟ್ಟು ಮೂಡಿಸಿ ಇಡಿಯ ದಕ್ಷಿಣ ಭಾರತವನ್ನೇ ಬ್ರಿಟಿಷರ ತೆಕ್ಕೆಯಿಂದ ರಕ್ಷಿಸಿಕೊಂಡ ಕಾರಣಕ್ಕಾಗಿಯೇ ಅವರಿಗೆ ಶೇರ್-ಎ-ಹಿಂದ್ (ಭಾರತದ ಹುಲಿ) ಎಂದು ಕರೆಯಲಾಗುತ್ತದೆ .
1750ರಲ್ಲಿ ಬೆಂಗಳೂರು ದೇವನಹಳ್ಳಿಯಲ್ಲಿ ಹೈದರಾಲಿ ಮತ್ತು ಫಾತಿಮಾ ಫಖರುನ್ನೀಸಾ ದಂಪತಿಯ ಮಗನಾಗಿ ಹುಟ್ಟಿದರು. ಆ ದಿನಗಳಲ್ಲಿ ಹೈದರಾಲಿ ಮೈಸೂರು ಸಂಸ್ಥಾನದ ಸೇನೆಯಲ್ಲಿ ಅಧಿಕಾರಿಯಾಗಿದ್ದರು. ಹುಟ್ಟಿದಾಗ ಟಿಪ್ಪೂ ಸುಲ್ತಾನರಿಗೆ ಫತೇಹ್ ಅಲಿ ಎಂದು ನಾಮಕರಣವಾಗಿತ್ತು. ಬಳಿಕ ಹೈದರಾಲಿ ನಂಬುವ ಸಂತರಾದ ಸಂತ ಟಿಪ್ಪೂ ಮಸ್ತಾನ್ ಔಲಿಯಾರವರ ಗೌರವಾರ್ಥ ತಮ್ಮ ಮಗನನ್ನೂ ಟಿಪ್ಪೂ ಸುಲ್ತಾನ್ ಎಂದು ಕರೆಯತೊಡಗಿದರು. ವಾಸ್ತವವಾಗಿ ಟಿಪ್ಪೂ ಸುಲ್ತಾನ್ ಎಂಬುದು ಅವರನ್ನು ಕರೆಯುವ ಹೆಸರಾಗಿದೆ, ಅವರ ನಿಜನಾಮಧೇಯ ಸುಲ್ತಾನ್ ಫತೇಹ್ ಅಲಿ ಖಾನ್ ಶಹಾಬ್ ಎಂದಾಗಿದೆ.
ಟಿಪ್ಪು ಸುಲ್ತಾನನ ಜನನದ ಬಳಿಕ ಹೈದರಾಲಿಯ ವೃತ್ತಿಜೀವನದಲ್ಲಿ ಏಳ್ಗೆ ಕಾಣುತ್ತಾ ಹೋಗಿತ್ತು. ಮುಂದಿನ ಹನ್ನೊಂದು ವರ್ಷಗಳಲ್ಲಿ ಹಂತಹಂತವಾಗಿ ಮೇಲೇರಿದ ಅವರು 1761ರಲ್ಲಿ ಮೈಸೂರು ಸಂಸ್ಥಾನದ ಆಡಳಿತಗಾರರಾಗಿ ನೇಮಕಗೊಂಡರು. ಅಂದಿನ ದಿನಗಳಲ್ಲಿ ಹೈದರಾಲಿ ಫ್ರೆಂಚ್ ಸರ್ಕಾರದೊಂದಿಗೆ ಹೆಚ್ಚು ವ್ಯವಹಾರ ನಡೆಸುತ್ತಿದ್ದರು. ಇದೇ ಮೈತ್ರಿಯಿಂದ ಟಿಪ್ಪೂ ಸುಲ್ತಾನರಿಗೆ ಫ್ರೆಂಚ್ ವಿಶ್ವವಿದ್ಯಾಲಯದಲ್ಲಿ ರಾಜತಾಂತ್ರಿಕ ಮತ್ತು ರಾಜ್ಯಾಡಳಿತ ವಿಷಯಗಳಲ್ಲಿ ಉನ್ನತ ಶಿಕ್ಷಣ ದೊರಕಿತು.
ಮುಂದಿನ ನಾಲ್ಕು ವರ್ಷಗಳ ಕಾಲ ಅಂದಿನ ದಿನಗಳಲ್ಲಿ ಲಭ್ಯರಿದ್ದ ಅತ್ಯಂತ ದಕ್ಷರಾದ ಶಿಕ್ಷಕರಿಂದ ಅವರು ವಿವಿಧ ವಿಷಯಗಳಲ್ಲಿ ಶಿಕ್ಷಣ ಪಡೆದರು. ರಾಜತಾಂತ್ರಿಕ ವಿಷಯದ ಜೊತೆಗೇ ಕುದುರೆಸವಾರಿ, ಕತ್ತಿವರಸೆ, ಬಂದೂಕು ಚಲಾಯಿಸುವಿಕೆ ಮೊದಲಾದ ವಿದ್ಯೆಗಳಲ್ಲೂ ಪಾರಾಂಗತರಾದರು. 1765ರಲ್ಲಿ ಸ್ವದೇಶಕ್ಕೆ ಹಿಂದಿರುಗಿದ ಟಿಪ್ಪೂ ಸುಲ್ತಾನ್ ಮಾಡಿದ ಮೊದಲ ಕೆಲಸವೆಂದರೆ ಮಲಬಾರ್ ಪ್ರಾಂತದ ಸಾಮಂತರ ವಿರುದ್ಧ ಯುದ್ಧ ಮಾಡಿ ಸಾಮಂತ ಮತ್ತು ಅವರ ಕುಟುಂಬವನ್ನು ವಶಕ್ಕೆ ಪಡೆದುಕೊಂಡಿದ್ದು. ಆಗ ಅವರ ವಯಸ್ಸು ಕೇವಲ ಹದಿನೈದು ವರ್ಷ!ಅಪ್ಪಟ ಕನ್ನಡ ಭಾಷಾಭಿಮಾನಿ ಯಾದ, ಮಾತೃಭೂಮಿ ರಕ್ಷಣೆಗಾಗಿ ಸ್ವಂತ ಮಕ್ಕಳನ್ನು ಬ್ರಿಟೀಷರಲ್ಲಿ ಒತ್ತೆಯಿಟ್ಟಿ ಟಿಪ್ಪು ಸುಲ್ತಾನ್ ಈ ದೇಶ ಕಂಡ ಅಪ್ರತಿಮ ಸ್ವಾತಂತ್ರ ಹೋರಾಟಗಾರ ಎ೦ದು ಇತಿಹಾಸ ಕಾರರಲ್ಲಿ ಕೆರೆಯಿಸಿ ಕೊಂಡಿದ್ದಾನೆ ಬಹು ಸಂಸ್ಕೃತಿಯ ಆರಾಧಕ ಮತ್ತು ಪ್ರತಿನಿಧಿಯಾಗಿದ್ದ ಟಿಪ್ಪು ಸುಲ್ತಾನ್ ಜಾತಿ ಮತ್ತು ಧರ್ಮದಾಚೆಯ ನೆಲೆಯಲ್ಲಿ ನಿಂತು. ತನ್ನ ಸಾಮ್ರಾಜ್ಯದಲ್ಲಿದ್ದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ಸಮುದಾಯದವರಿಗೆ ಶಿಕ್ಷಣ ಕೊಡಿಸಿದ ಮಹಾನುಭಾವ ಎನ್ನಲಾಗುತ್ತಿದೆ .ಹದಿನೆಂಟನೆಯ ಶತಮಾನದ ಇತಿಹಾಸವನ್ನು ಪರಿಗಣಿಸಿದರೆ ಭಾರತದಾದ್ಯಂತ ರಾಜರ, ಸಾಮಂತರ ಆಳ್ವಿಕೆ ಜಾರಿಯಲ್ಲಿತ್ತು. ವೈರತ್ವ ಮತ್ತು ಮಿತೃತ್ವಗಳನ್ನು ನಿಭಾಯಿಸಲು ಯುದ್ಧಗಳು ನಡೆಯುವುದು ಸಾಮಾನ್ಯವಾಗಿತ್ತು. ಇಬ್ಬರು ಸ್ನೇಹಿತರ ನಡುವೆ ವೈರತ್ವ ಹುಟ್ಟುಹಾಕಿ ಇಬ್ಬರ ಜಗಳದಿಂದ ಲಾಭ ಪಡೆಯುವ 'ಒಡೆದು ಆಳುವ ನೀತಿ'ಯನ್ನು ಅನುಸರಿಸಿದ ಬ್ರಿಟಿಷರು ತಮ್ಮ ಯೋಜನೆಯಲ್ಲಿ ಬಹುತೇಕ ಯಶಸ್ವಿಯೂ ಆದರು. ಆದರೆ ಉತ್ತರ ಭಾರತವನ್ನು ಸುಲಭವಾಗಿ ಆಕ್ರಮಿಸಿದ ಬ್ರಿಟಿಷರು ದಕ್ಷಿಣ ಭಾರತದಲ್ಲಿ ಟಿಪ್ಪೂ ಸುಲ್ತಾನನ್ನು ಎದುರಿಸಲು ಬಹಳ ಕಷ್ಟಪಡಬೇಕಾಗಿ ಬಂದಿತ್ತು. ಟಿಪ್ಪು ಸಾಹೇಬ್ ಎಂದು ಬ್ರಿಟಿಷರಿಂದ ಕರೆಯಲ್ಪಡುತ್ತಿದ್ದ ಟಿಪ್ಪು ಸುಲ್ತಾನ್ ಅಂದಿನ ದಕ್ಷಿಣದ ಪ್ರಾಂತಗಳಾದ ಮದ್ರಾಸ್ ಮತ್ತು ಮಂಗಳೂರು ಪ್ರಾಂತಗಳನ್ನು ಮೊದಲ ಮತ್ತು ಎರಡು ಅಂಗ್ಲೋ ಮೈಸೂರ್ ವಾರ್ (ಅಥವಾ ಅಂಗ್ಲ-ಮೈಸೂರು ಯುದ್ದ) ಗಳಲ್ಲಿ ಬ್ರಿಟಿಷರ ವಿರುದ್ಧ ಸೆಣೆಸಿ ಉಳಿಸಿದ್ದರು.1782ರ ಡಿಸೆಂಬರ್ ಆರರಂದು ಹೈದರಾಲಿ ಚಿತ್ತೂರಿನಲ್ಲಿ ವಿಧಿವಶರಾದರು. ನಂತರ ತಂದೆಯ ಸ್ಥಾನವನ್ನು ಅಲಂಕರಿಸಿದ ಟಿಪ್ಪು ಮೈಸೂರಿನ ರಾಜರಾಗುವ ಮೊದಲೇ ಮೊದಲ ಮತ್ತು ಎರಡನೇ ಅಂಗ್ಲೋ ಮೈಸೂರು ಯುದ್ಧಗಳನ್ನು ಜಯಿಸಿದ ಅನುಭವ ಪಡೆದಿದ್ದರು. ಆದರೆ ಇಡಿಯ ಭಾರತವನ್ನೇ ಜಯಿಸುವ ಮಹತ್ವಾಕಾಂಕ್ಷೆಯಿಂದ ಆಗಮಿಸಿದ್ದ ಬ್ರಿಟಿಷರ ವಿರುದ್ದ ಹೋರಾಡುವುದು ಬಹಳ ಕಷ್ಟ ಎಂದು ಅವರು ಅರಿತಿದ್ದರು. ಹೈದರಾಲಿಯ ಸಮಯದಲ್ಲಿಯೇ ಈ ಕ್ಷಿಪಣಿಗಳನ್ನು ಉಪಯೋಗಿಸಲಾಗಿದ್ದರೂ ತಂತ್ರಜ್ಞಾನದಲ್ಲಿ ಮತ್ತು ಕ್ಷಮತೆಯಲ್ಲಿ ಹಿಂದಿದ್ದವು. ಟಿಪ್ಪುಸುಲ್ತಾನ ಅಭಿವೃದ್ಧಿ ಪಡಿಸಿದ ಈ ಕ್ಷಿಪಣಿಗಳು ತಮ್ಮೊಂದಿಗೆ ಚೂಪಾದ ಬಾಣಗಳಂತಿರುವ ಲೋಹದ ತುಂಡುಗಳನ್ನೂ ಕೊಂಡೊಯ್ದು ವೈರಿಗಳ ತಲೆ ಅಥವಾ ಶರೀರವನ್ನು ಸೀಳಿ ಬಿಡುತ್ತಿದ್ದವು.ಈ ಕ್ಷಿಪಣಿಗಳನ್ನು ಸೂಕ್ತವಾಗಿ ಬಳಸಲು ಇಡಿಯ ಮೈಸೂರು ಸಂಸ್ಥಾನದಲ್ಲಿ ಇಪ್ಪತ್ತನಾಲ್ಕು ಕುಶೂನ್ (cushoon) ಎಂಬ ಕ್ಷಿಪಣಿಪಡೆಗಳನ್ನು ರಚಿಸಿ ಪ್ರತಿ ಪಡೆಯಲ್ಲಿಯೂ ಈ ಕ್ಷಿಪಣಿಗಳನ್ನು ಸಮರ್ಥವಾಗಿ ನಿರ್ವಹಿಸಬಲ್ಲ ಇನ್ನೂರು ನುರಿತ ಮತ್ತು ತರಬೇತಿ ಪಡೆದ ನಂಬಿಗಸ್ತ ಸೈನಿಕರನ್ನು ನಿಯೋಜಿಸಿದ. ಅಲ್ಲದೇ ಈ ಕ್ಷಿಪಣಿಗಳನ್ನು ಹೇಗೆ ಬಳಸಬೇಕು, ಯಾವ ತಂತ್ರವನ್ನು ಹೂಡಬೇಕು ಎಂದು ವಿವರಿಸುವ ಯುದ್ಧತಂತ್ರದ ವಿವರಗಳನ್ನು 'ಫತಹುಲ್ ಮುಜಾಹಿದೀನ್' ಎಂಬ ಗ್ರಂಥದಲ್ಲಿ ಸ್ವತಃ ಬರೆದು ಪ್ರಕಟಿಸಿದ್ದರು. ಈ ಗ್ರಂಥದಲ್ಲಿ ವಿವರಿಸಿದ ಯುದ್ಧತಂತ್ರಗಳನ್ನು ಅನುಸರಿಸಿ ಬ್ರಿಟಿಷರ ವಿರುದ್ಧ ಹೋರಾಡಲು ಟಿಪ್ಪೂವಿನ ಸೈನ್ಯ ಸಮರ್ಥವಾಗಿತ್ತು. ಆದರೆ ದುರಾದ್ರಷ್ಟವಷತ್ ನಾಲ್ಕನೆಯ ಆಂಗ್ಲೋ ಮೈಸೂರು ಯುದ್ದದಲ್ಲಿ ಮೋಸ ದಿಂದ ಟಿಪ್ಪು ವೀರ ಮರಣ ವನ್ನು ಒಪ್ಪಬೇಕಾಯಿತು ಎಂದು ಇತಿಹಾಸ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ .
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)

