ಶುಕ್ರವಾರ, ಏಪ್ರಿಲ್ 24, 2020
ದೆಹಲಿ ಅತ್ಯಾಚಾರ ಪ್ರಕರಣ :ಕೊನೆಗೂ ಸುಖಾಂತ್ಯ !,ಆದರೆ ಇನ್ನೊಬ್ಬನನ್ನು ಹೊರಕೆ ಇಟ್ಟಿದ್ದು ಸರಿಯಲ್ಲ
2020ರ ಮಾರ್ಚ್ 21ನೇ ತಾರೀಕು ಭಾರತದ ಸಂವಿಧಾನದಡಿಯಲ್ಲಿ ಕಾನೂನಾತ್ಮಕವಾಗಿ ನ್ಯಾಯಾಲಯದ ವ್ಯವಸ್ಥೆಯಲ್ಲಿ ಹೊಸ ಭಾಷೆ ಬರೆದ ದಿನ ! ಇತಿಹಾಸದ ಪುಟದಲ್ಲಿ ದಾಖಲಾದ ಕ್ಷಣ !! ಒಂಟಿ ಹೆಣ್ಣೊಬ್ಬಳು ಮಧ್ಯರಾತ್ರಿಯಲ್ಲಿ ರಸ್ತೆಮೇಲೆ ತಿರುಗಾಡಿದರೆ ಅಂದೇ ಭಾರತ ಸ್ವತಂತ್ರವಾಗುತ್ತದೆ ಎಂದು ರಾಷ್ಟ್ರಪಿತ ಗಾಂಧೀಜಿ ಹೇಳಿದ್ದರು. ಅದು ಅಸಾಧ್ಯದ ಮಾತೇ ಬಿಡಿ ...! ಅಂದು ಮಧ್ಯರಾತ್ರಿ ಹೆಣ್ಣೊಬ್ಬಳು ಬಸ್ಸಿಗಾಗಿ ಕಾದಿದ್ದಳು ಬಸ್ಸು ಬಂತು ಬಸ್ಸು ಏರಿದ್ದಳು ಆರು ಜನರಿದ್ದರು ಅವರೆಲ್ಲಾ ರಾಕ್ಷಸ ತ್ರಯರು ಅಂತ ಆ ಮುಗ್ದೆಗೆ ಗೊತ್ತೇ ಇರಲಿಲ್ಲ ಬಸ್ಸಿನಲ್ಲಿದ್ದ ಆ ಕಾಮಾಂಧರು ಪೈಶಾಚಿಕವಾಗಿ ಅತ್ಯಾಚಾರ ಮಾಡಿದ್ದಲ್ಲದೆ, ಹಿಂಸಾತ್ಮಕವಾಗಿ ಅವಳನ್ನು ಮುಗಿಸಿಬಿಟ್ಟಿದ್ದರು. ಇದು ಸುಮಾರು ಏಳು ವರ್ಷಗಳ ಹಿಂದಿನ ಮಾತು ದೇಶಾದ್ಯಂತ ದೊಡ್ಡ ಸದ್ದು ಮಾಡಿದ ಸುದ್ದಿ ! ಡಿಸೆಂಬರ್ 16, 2012ರಂದು ಭಾರತದ ರಾಜಧಾನಿ ದೆಹಲಿಯಲ್ಲಿ 23ವರ್ಷದ ವೈದ್ಯ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಕರುಣಾಜನಕ ಕಥೆ ಕೇವಲ ಅತ್ಯಾಚಾರ ಮಾತ್ರ ಮಾಡದ ಕಾಮ ಪಿಶಾಚಿಗಳು ಅಮಾನವೀಯವಾಗಿ ರಾಡ್ ನಿಂದ ಹಲ್ಲೆ ಮಾಡಿ ಚಲಿಸುವ ಬಸ್ಸಿಂದ ಕೆಳಕ್ಕೆ ಎಸೆದರು ತೀವ್ರವಾಗಿ ಹೊಟ್ಟೆ, ಕರುಳು, ಮರ್ಮಾಂಗ ಜರ್ಜರಿತ ಗೊಂಡು ಐಸಿಯು ನಲ್ಲಿ ಒಂದು ದಿನ ಸಾವು ಬದುಕಿನ ನಡುವೆ ಹೋರಾಡಿ ಕೊನೆ ಉಸಿರು ಎಳೆದಿದ್ದಳು . ಪ್ರಕರಣದ ಬೆನ್ನಿಗೆ ಆರೋಪಿಗಳನ್ನು ಬಂಧಿಸಲಾಯಿತು.6 ಜನ ಕಾಮುಕರು ಸಿಕ್ಕಿಬಿದ್ದಿದ್ದರು .ಇವರಿಗೆ ಸಾರ್ವಜನಿಕವಾಗಿ ಗುಂಡಿಕ್ಕುವಂತೆ ಜನಾಕ್ರೋಶವೂ ಭುಗಿಲೆದ್ದಿತ್ತೂ ಆದರೂ, ಕಳೆದ 7 ವರ್ಷ 3 ತಿಂಗಳಿಂದ ಸತತ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಇವರಿಗೆ ಗಲ್ಲುಶಿಕ್ಷೆ ವಿಧಿಸಿತ್ತು.ಆರು ಜನರ ಪೈಕಿ ಜನ ಆರೋಪಿಗಳಾದ ಮುಖೇಶ್ ಸಿಂಗ್, ಪವನ್ ಗುಪ್ತಾ, ಅಕ್ಷಯ್ ಠಾಕೂರ್ ಹಾಗೂ ವಿನಯ್ ಶರ್ಮಾರನ್ನು 2020 ರ ಮಾರ್ಚ್ 21ನೇ ತಾರೀಕಿನಂದು ಬೆಳಗ್ಗಿನ ಜಾವ 5.30ಕ್ಕೆ ಗಲ್ಲಿಗೇರಿಸಲಾಯಿತು. ಇನ್ನೆಷ್ಟೋ ಕಾಮುಕರಿಗೆ ಇದು ಪಾಠವಾಯಿತು ಏನು ಖುಷಿ !ದೇಶ ಸಂತೋಷದಲ್ಲಿ ತೇಲಾಡಿತು., ಆದರೆ ಅದರಲ್ಲಿ ನಾಲ್ಕು ಜನರಿಗೆ ಮಾತ್ರ ಶಿಕ್ಷೆಯಾಗಿತ್ತು . ಒಬ್ಬತಾ ಬಸ್ಚಾಲಕನಾಗಿದ್ದ ರಾಮ್ ಸಿಂಗ್ ತಾನೇ ಆತ್ಮಹತ್ಯೆ ಮಾಡಿಕೊಂಡು ತನ್ನ ತಪ್ಪಿಗೆ ಸರಿಯಾದ ಶಿಕ್ಷೆಯನ್ನು ಪಡೆದುಕೊಂಡನು.ಇನ್ನೊಬ್ಬ ರಾಜು ಎಂಬಾತ ವಯಸ್ಸಿನ ಮಿತಿಯಲ್ಲಿ ಒಂದಷ್ಟು ಸಡಿಲಿಕೆ ಕಂಡು ಸಣ್ಣಪುಟ್ಟ ಶಿಕ್ಷೆಗೆ ಒಳಪಡಿಸುವ ಮೂಲಕ ಮನೆಗೆ ಕಳಿಸಿಕೊಡಲಾಗಿತ್ತು ಪ್ರಶ್ನೆ ಹುಟ್ಟಿರುವುದು ಮತ್ತು ಆಕ್ರೋಶಕ್ಕೆ ಕಾರಣವಾಗಿರುವುದು ಇದು, ದೊಡ್ಡ ತಪ್ಪು ಮಾಡಿದ ಈತನಿಗೆ ಮರಣದಂಡನೆ ವಿಧಿಸಬೇಕು ಅಂತೆಯೇ ಈ ಪೈಶಾಚಿಕ ಕೃತ್ಯದಲ್ಲಿ ಈತನೇ ಮುಂಚೂಣಿಯಲ್ಲಿದ್ದನಂತೆ ಹಿಂಸಾತ್ಮಕ ಪ್ರವೃತ್ತಿಯನ್ನು ತೋರ್ಪಡಿಸಿದ್ದದ್ದು ಈತನೇ ಅಂತೆ ಈತನನ್ನು ಸಹಾ ಗಲ್ಲಿಗೆ ಏರಿಸಬೇಕಿತ್ತು ಅಪ್ರಾಪ್ತ ಎಂದು ಹೊರಗೆ ಇಟ್ಟಿದ್ದು ಸರಿಯಲ್ಲ ಇಂಥವರಿಂದ ಇನ್ನಷ್ಟು ಜೀವಗಳು ನೋವು ಅನುಭವಿಸಬೇಕೋ ಗೊತ್ತಿಲ್ಲ ಹಾಗೆ ಅಂಡರ್ ಏಜ್ ಎಂಬ ಹಣೆಪಟ್ಟಿಯಲ್ಲಿ ಇಂತವರು ಇಂತಹ ಕಾರ್ಯಕ್ಕೆ ಮುಂದಾಗುದರಲ್ಲಿ ಯಾವುದೇ ಸಂಶಯವಿಲ್ಲ ಅತ್ಯಾಚಾರ ಮಾಡಿ ಹಿಂಸಾತ್ಮಕವಾಗಿ ಸಾಯಿಸುವ ಕೆಲವು ವಿಕೃತ ಕಾಮಿಗಳಿಗೆ ಮರಣದಂಡನೆ ಸರಿಯಾದ ಶಿಕ್ಷೆ ಆದರೆ ಅದಾಗುತ್ತಿಲ್ಲ ನಮ್ಮ ನ್ಯಾಯಾಂಗ ವ್ಯವಸ್ಥೆಯಲ್ಲಿ ಅದಿಲ್ಲ ಎಂಬುದೇ ಬಹಳ ಬೇಸರ . ಏನೇ ಆಗಲಿ ಅದೆಷ್ಟೋ ವರ್ಷಗಳ ನಂತರ ಕಷ್ಟಪಟ್ಟು ಪಟ್ಟು ಬಿಡದೆ ನೇಣಿಗೇರಿಸಿದ ರಲ್ಲಿ ಶಕ್ತರಾದ ವಕೀಲರಿಗೆ ಹಾಗೂ ಪ್ರತಿಭಟನೆ ಹಾಗೂ ಇವರ ಬೆಂಬಲಕ್ಕೆ ನಿಂತ ಒಳ್ಳೆಯ ಮನಸ್ಸಿಗರ ಶ್ರಮ ದಿಂದ ಉತ್ತಮ ತೀರ್ಪು ಸಿಕ್ಕಿದೆ . ದಿಲ್ಲಿಯಲ್ಲಿನ ಈ ಘಟನೆ ಬೆಳಕಿಗೆ ಬಂದಿದ್ದೂ ಕೊನೆಗೂ ಸುಖಾಂತ್ಯ ಕಂಡಿದೆ . ಇಂತಹ ಅದೆಷ್ಟೋ ಘಟನೆಗಳು ನಮ್ಮ ಸುತ್ತಮುತ್ತ ನಡೆಯುತ್ತಲೇ ಇರುತ್ತದೆ. ಕೆಲವರು ಮಾನ ಮರ್ಯಾದೆ ಗೆ ಅಂಜಿ ಹಾಗೂ ರಾಜಕೀಯ ಒತ್ತಡ, ಬ್ಲಾಕ್ಮೇಲ್ ,ಇನ್ನಿತ್ತರ ಚಟುವಟಿಕೆ ಇಂದ ಬೆಳಕಿಗೆ ಬಾರದೆ ಘಟನೆಗಳು ಅಲ್ಲೇ ಮುದುಡಿ ಹೋಗುತ್ತದೆ . ಒಂದು ಪಕ್ಷದಲ್ಲಿ ಮುಖ್ಯ ವಾಹಿನಿಗೂ ಬಂದರೂ ನ್ಯಾಯ ಮಾತ್ರ ನಮ್ಮ ದೇಶ ದಲ್ಲಿ ಮರೀಚಿಕೆ.! ಅದಕ್ಕಾಗಿ ಅದೆಷ್ಟೋ ಕಥೆಗಳು ವ್ಯಥೇಗಳಾಗಿ ಅಂತ್ಯ ಗೊಳ್ಳುತ್ತಿದೆ. ವಿದೇಶ ಗಲ್ಲಿರುವಂತ ಕಾನೂನು ನಮ್ಮಲ್ಲಿ ಜಾರಿ ಆದರೇ ಇಂಥ ಘಟನೆ ಕಡಿವಾಣ ಬೀಳಬಹುದೇನೋ ? ಪೊಲೀಸರೂ ಸಹಾ ಏನೂ ಮಾಡಲೂ ಸಾಧ್ಯ ವಿಲ್ಲಾ ಅವರ ಕೈ ಕಟ್ಟಿ ಹಾಕುವ ವ್ಯವಸ್ಥೆ ನಮ್ಮಲ್ಲಿದೆ .. ಏನೇ ಇರಲಿ ಇತ್ತೀಚಿಗೆ ನಡೆದ ಹೈದ್ರಾಬಾದ್ ನ ಘಟನೆಯನ್ನು ಮೆಲುಕು ಹಾಕುತ್ತಾ ಒಡಲಧ್ವನಿಗೆ ಫುಲ್ ಸ್ಟಾಪ್ ಇಡುತ್ತಿದ್ದೇನೆ ಆ ಪೊಲೀಸರಿಗೆ ಸೆಲ್ಯೂಟ್ ಹೊಡೆಯಲೇ ಬೇಕು ಚಾಕ ಚಕ್ಯತೆಯಿಂದ ಅವರುಗಳೇ ಆ ಕಾಮಾಂಧರುಗಳಿಗೆ ನೇರವಾಗಿ ತಕ್ಕ ಶಿಕ್ಷೆ ನೀಡಿದ್ದಾರೆ. ಅದಾಗಬೇಕು .
ಗುರುವಾರ, ಏಪ್ರಿಲ್ 2, 2020
ಸ್ವಾಮೀಜಿಗಳೇ ನಿಮ್ಮದು ಇದೆಂತಾ ಭಂಡತನ ?
ಮೊನ್ನೆ ಒಂದು ಘಟನೆ ಘಟಿಸಿತು. ಮುಖ್ಯಮಂತ್ರಿ ಯಡಿಯೂರಪ್ಪ ಕೋಪೋದ್ರಿಕ್ತರಾಗಿ ವೇದಿಕೆಯಿಂದ ಕೆಳಗಿಳಿದರು ಎಂದು ಮಾಧ್ಯಮಗಳು ನಾನ್ ಸ್ಟಾಪ್ ಸುದ್ದಿಯನ್ನು ಹರಿಯಬಿಟ್ಟಿದ್ದವು . ಎಲ್ಲರೂ ಯಡಿಯೂರಪ್ಪನವರದು ತಪ್ಪು ಎಂದು ಹೇಳುತ್ತಿದ್ದರೆ ವಿನಹ ,ಘಟನೆ ಬಗ್ಗೆ ಕಿಂಚಿತ್ ಆಲೋಚನೆ ಅವರಲ್ಲಿ ಇರಲಿಲ್ಲ ಅಷ್ಟಕ್ಕೂ ಅದು ಅಂತ ದೊಡ್ಡ ಘಟನೆಏನೂ ಆಗಿರಲಿಲ್ಲ .ಅದು ದಾವಣಗೆರೆಯ ಹರಿಹರದಲ್ಲಿ ನಡೆಯುತ್ತಿದ್ದ ಹರ ಜಾತ್ರೆಯ ಕಾರ್ಯಕ್ರಮ ಯಾವುದೋ ಒಂದು ಸಮಾವೇಶ . ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರು ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡಿದ್ದರು . ಸ್ವಾಮೀಜಿ ಸ್ವಾಮಿ ಕಾರ್ಯ ಮಾಡುದನ್ನು ಬಿಟ್ಟು ಸ್ವ- ಕಾರ್ಯಕ್ಕೆ ಮುಂದಾಗಿದ್ದರು ! ಹೌದಪ್ಪ ಎಂತೆಂತಹ ಸ್ವಾಮೀಜಿಗಳನ್ನು ನಾವು ಪ್ರಸ್ತುತ ಪ್ರಪಂಚದಲ್ಲಿ ಕಾಣುತ್ತಿದ್ದೇವೆ ಅಂದರೆ ಅದಕ್ಕೆಲೆಕ್ಕಪತ್ರವಿಲ್ಲ., ವರ್ಣಿಸಲಾಗದಂತ ಆಟಿಟ್ಯೂಡ್ ಅನ್ನು ಹೊಂದಿರುವ ಸ್ವಾಮೀಜಿಗಳು ನಮ್ಮ ಕಣ್ಣಮುಂದೆ ಬೇಡವೆಂದರೂ ಕಾಣಿಸಿಕೊಳ್ಳುತ್ತಾರೆ ಅದೇನೇ ಇರಲಿ , ಈ ಸ್ವಾಮೀಜಿ ಏನು ಮಾಡಿದ್ರು ಅಂದರೆ ತಮ್ಮ ಭಾಷಣದ ಸರದಿ ಬಂದಾಗ ಮೈಕ್ ಎತ್ತಿಕೊಂಡು , ಏರ್ಪಡಿಸಲಾದ ಸಮಾವೇಶದ ಬಗ್ಗೆ ಉಸುರುದನ್ನು ಬಿಟ್ಟು , ಏಕ್ದಂ ಮುಖ್ಯಮಂತ್ರಿ ಬಗ್ಗೆ ಮಾತಾಡ್ಲಿಕ್ಕೆ ಶುರುವಿಟ್ಟು ಕೊಂಡರು ,ಆ ಸ್ವಾಮೀಜಿಯ ಪ್ರಕಾರ ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸೀಟು ಉಳಿಸಿಕೊಂಡಿದ್ದರೆ ಅಂದರೆ ಅವರ ಜನಾಂಗದ ಶಾಸಕರಿಂದ ಅಂತೆ , ಅದಕ್ಕೆ ಅವರ ಸಮುದಾಯದವರನ್ನು ಮಂತ್ರಿ ಮಾಡಬೇಕಂತೆ , ಅದಿಲ್ಲದಿದ್ದರೆ ತುಂಬಾ ಕಷ್ಟ ಅನುಭವಿಸುತ್ತಾರೆ ನಿಮ್ಮ ಸೀಟು ಉಳಿಯುವುದಿಲ್ಲ ಅದು-ಇದು ಎಂದು ಬೊಗಳೆ ಬಿಟ್ಟಿದ್ದು ,ಬಿಟ್ಟಿದ್ದು .! ಅಸಲಿಗೆ ಸ್ವಾಮೀಜಿಗೆ ಇದು ಅಗತ್ಯವಿತ್ತೆ ? ಸ್ವಾಮೀಜಿಗೆ ರಾಜಕೀಯ ಯಾಕೆ ? ಎಲ್ಲವನ್ನೂ ತ್ಯಜಿಸಿದ ಸ್ವಾಮಿಗೆ ರಾಜಕೀಯ ದಲ್ಲಿ ಮೂಗು ತೋರಿಸುವ ಅಧಿಕಾರ ವಿದೆಯೇ ? ಅವರ ಇತಿಮಿತಿ ಏನು ಎಂಥ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಕಾಡದೇ ಇರದು . ಒಂದು ಪಕ್ಷದಲ್ಲಿ ಸ್ವಾಮಿಗೆ ಅಗತ್ಯ ಕಂಡು ಬಂದಿದ್ದರೆ , ಮುಖ್ಯಮಂತ್ರಿಯಲ್ಲಿ ತಮ್ಮ ಈ ವೈಚಾರಿಕತೆಯನ್ನು ಮಂಡಿಸಬಹುದಿತ್ತು ,ಇರಿಸಬಹುದಾಗಿತ್ತು ಅದನ್ನು ಬಿಟ್ಟು ಸ್ವಾಮೀಜಿ, ಬಹಿರಂಗ ಸಭೆಯಲ್ಲಿ ಬಾಯಿಗೆ ಬಂದ ಹಾಗೆ ಮಾತನಾಡುವುದು ಎಷ್ಟು ಸಮಂಜಸ ವಾದದ್ದು ?ಇದರಿಂದ ತುಸು ಬೇಸರದಿಂದ ಸೀಟಿನಿಂದ ಮುಖ್ಯ ಮಂತ್ರಿ ಯಡಿಯೂರಪ್ಪ ಮೇಲೆದಿದ್ದು ತಪ್ಪೇನಿಲ್ಲ . ಸೀಟಿನಿಂದ ಎದ್ದು ಹೊರಗೆ ನಡೆಯಲಿಲ್ಲ ಎದ್ದು ಅವರಲ್ಲಿ ಸೌಜನ್ಯವಾಗಿ ವಿನಂತಿಸಿದ್ದರು "ಸ್ವಾಮೀಜಿಗೆ ನಿಮ್ಮಿಂದ ಈ ಮಾತು ಬರಬಾರದು "ಎಂದು ಅಲವತ್ತುಕೊಂಡ ಕಾಲುಮುಟ್ಟಿ ಬೇಡಿಕೊಂಡಿದ್ದರು ಆದರೆ ವೇದಿಕೆ ಬಿಟ್ಟು ಕೆಳಗೆ ಇಳಿಯಲಿಲ್ಲ ಇದು ಸ್ವಾಮೀಜಿಯ ದುರಾಂಕಾರವೋ ಅಥವಾ ಮುಖ್ಯಮಂತ್ರಿಗಳದ್ದೋ ? ಮಾಧ್ಯಮಗಲ್ಲಿ ಪ್ರಸಾರ ಕಂಡ ವಿಡಿಯೋ ಕ್ಲಿಪ್ ನೋಡಿ ತಾವೇ ತೀರ್ಮಾನಿಸಿ . ಅಲ್ಲಿ ಮುಖ್ಯಮಂತ್ರಿಗಳೇ ಇರಲಿ ಅಥವಾ ಇನ್ನು ಯಾರೇ ಇದ್ದರೂ ಕೂಡ ಸ್ವಾಮೀಜಿ ಮಾಡಿದ್ದು ಮಹಾನ್ ತಪ್ಪು ಅಲ್ಲವೇ ?!ಸ್ವಾಮೀಜಿಗಳಲ್ಲಿ ದೇವರನ್ನು ಕಾಣುತ್ತೇವೆ ,ನಂಬುತ್ತೇವೆ ದೇವರಿಗೆ ಹತ್ತಿರವಾದವರು ,ಅನೂ ದಿನ ಅನೂ ಕ್ಷಣವೋ ಧ್ಯಾನ ಪೂಜೆ ಯಲ್ಲಿ ಮಗ್ನರಾಗಿರುತ್ತಾರೆ ಎಂದು ಅವರಲ್ಲಿ ಆತ್ಮೀಯತೆ,ಪೂಜನೀಯ ಭಾವನೆಯನ್ನು ಬೆಳೆಸುತ್ತೇವೆ ಆದರೆ ಇಂಥ ಚಟುವಟಿಕೆಗಳಿಂದ ಒಳ್ಳೆ ಸ್ವಾಮೀಜಿ ಗಳ ಮೇಲೂ ಸಹ ನಮ್ಮ ನಂಬಿಕೆ ಕುಸಿಯುತ್ತದೆ ಹಾಗೂ ಇತರ ಧರ್ಮದವರ ನಗೆಪಾಟಲಿಗೆ ನಾವು ಈಡಾಗುತ್ತಿದೆ. ಪೇಜಾವರ ಶ್ರೀಗಳು ಹಾಗೂ ಸಿದ್ದಲಿಂಗ ಮಠದ ಸ್ವಾಮೀಜಿಗಳಂತೆ ಯಾವ ಸ್ವಾಮೀಜಿ ಇನ್ನು ಜನ್ಮ ತಾಳಲಾರರಾರು ಅವರ ಪಾದದ ಧೂಳಿಗೆ ಕೂಡ ಸಮವಲ್ಲ ಇಂಥ ಕಪಟ ಭಂಡತನದ ಸ್ವಾಮೀಜಿಗಳಿಂದ ದೂರವಿರುವುದೇ ಲೇಸು ಏನಂತೀರಿ ?
ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ (ಕ್ರಪೆ:- #youtub #ಒನ್ ಇಂಡಿಯಾ)
https://www.youtube.com/watch?v=iubma_HjSqU
ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ (ಕ್ರಪೆ:- #youtub #ಒನ್ ಇಂಡಿಯಾ)
https://www.youtube.com/watch?v=iubma_HjSqU
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)

