ಮೊನ್ನೆ ಒಂದು ಘಟನೆ ಘಟಿಸಿತು. ಮುಖ್ಯಮಂತ್ರಿ ಯಡಿಯೂರಪ್ಪ ಕೋಪೋದ್ರಿಕ್ತರಾಗಿ ವೇದಿಕೆಯಿಂದ ಕೆಳಗಿಳಿದರು ಎಂದು ಮಾಧ್ಯಮಗಳು ನಾನ್ ಸ್ಟಾಪ್ ಸುದ್ದಿಯನ್ನು ಹರಿಯಬಿಟ್ಟಿದ್ದವು . ಎಲ್ಲರೂ ಯಡಿಯೂರಪ್ಪನವರದು ತಪ್ಪು ಎಂದು ಹೇಳುತ್ತಿದ್ದರೆ ವಿನಹ ,ಘಟನೆ ಬಗ್ಗೆ ಕಿಂಚಿತ್ ಆಲೋಚನೆ ಅವರಲ್ಲಿ ಇರಲಿಲ್ಲ ಅಷ್ಟಕ್ಕೂ ಅದು ಅಂತ ದೊಡ್ಡ ಘಟನೆಏನೂ ಆಗಿರಲಿಲ್ಲ .ಅದು ದಾವಣಗೆರೆಯ ಹರಿಹರದಲ್ಲಿ ನಡೆಯುತ್ತಿದ್ದ ಹರ ಜಾತ್ರೆಯ ಕಾರ್ಯಕ್ರಮ ಯಾವುದೋ ಒಂದು ಸಮಾವೇಶ . ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರು ಯಡಿಯೂರಪ್ಪ ಜೊತೆ ವೇದಿಕೆ ಹಂಚಿಕೊಂಡಿದ್ದರು . ಸ್ವಾಮೀಜಿ ಸ್ವಾಮಿ ಕಾರ್ಯ ಮಾಡುದನ್ನು ಬಿಟ್ಟು ಸ್ವ- ಕಾರ್ಯಕ್ಕೆ ಮುಂದಾಗಿದ್ದರು ! ಹೌದಪ್ಪ ಎಂತೆಂತಹ ಸ್ವಾಮೀಜಿಗಳನ್ನು ನಾವು ಪ್ರಸ್ತುತ ಪ್ರಪಂಚದಲ್ಲಿ ಕಾಣುತ್ತಿದ್ದೇವೆ ಅಂದರೆ ಅದಕ್ಕೆಲೆಕ್ಕಪತ್ರವಿಲ್ಲ., ವರ್ಣಿಸಲಾಗದಂತ ಆಟಿಟ್ಯೂಡ್ ಅನ್ನು ಹೊಂದಿರುವ ಸ್ವಾಮೀಜಿಗಳು ನಮ್ಮ ಕಣ್ಣಮುಂದೆ ಬೇಡವೆಂದರೂ ಕಾಣಿಸಿಕೊಳ್ಳುತ್ತಾರೆ ಅದೇನೇ ಇರಲಿ , ಈ ಸ್ವಾಮೀಜಿ ಏನು ಮಾಡಿದ್ರು ಅಂದರೆ ತಮ್ಮ ಭಾಷಣದ ಸರದಿ ಬಂದಾಗ ಮೈಕ್ ಎತ್ತಿಕೊಂಡು , ಏರ್ಪಡಿಸಲಾದ ಸಮಾವೇಶದ ಬಗ್ಗೆ ಉಸುರುದನ್ನು ಬಿಟ್ಟು , ಏಕ್ದಂ ಮುಖ್ಯಮಂತ್ರಿ ಬಗ್ಗೆ ಮಾತಾಡ್ಲಿಕ್ಕೆ ಶುರುವಿಟ್ಟು ಕೊಂಡರು ,ಆ ಸ್ವಾಮೀಜಿಯ ಪ್ರಕಾರ ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸೀಟು ಉಳಿಸಿಕೊಂಡಿದ್ದರೆ ಅಂದರೆ ಅವರ ಜನಾಂಗದ ಶಾಸಕರಿಂದ ಅಂತೆ , ಅದಕ್ಕೆ ಅವರ ಸಮುದಾಯದವರನ್ನು ಮಂತ್ರಿ ಮಾಡಬೇಕಂತೆ , ಅದಿಲ್ಲದಿದ್ದರೆ ತುಂಬಾ ಕಷ್ಟ ಅನುಭವಿಸುತ್ತಾರೆ ನಿಮ್ಮ ಸೀಟು ಉಳಿಯುವುದಿಲ್ಲ ಅದು-ಇದು ಎಂದು ಬೊಗಳೆ ಬಿಟ್ಟಿದ್ದು ,ಬಿಟ್ಟಿದ್ದು .! ಅಸಲಿಗೆ ಸ್ವಾಮೀಜಿಗೆ ಇದು ಅಗತ್ಯವಿತ್ತೆ ? ಸ್ವಾಮೀಜಿಗೆ ರಾಜಕೀಯ ಯಾಕೆ ? ಎಲ್ಲವನ್ನೂ ತ್ಯಜಿಸಿದ ಸ್ವಾಮಿಗೆ ರಾಜಕೀಯ ದಲ್ಲಿ ಮೂಗು ತೋರಿಸುವ ಅಧಿಕಾರ ವಿದೆಯೇ ? ಅವರ ಇತಿಮಿತಿ ಏನು ಎಂಥ ಎಂಬ ಪ್ರಶ್ನೆ ಪ್ರಜ್ಞಾವಂತರಲ್ಲಿ ಕಾಡದೇ ಇರದು . ಒಂದು ಪಕ್ಷದಲ್ಲಿ ಸ್ವಾಮಿಗೆ ಅಗತ್ಯ ಕಂಡು ಬಂದಿದ್ದರೆ , ಮುಖ್ಯಮಂತ್ರಿಯಲ್ಲಿ ತಮ್ಮ ಈ ವೈಚಾರಿಕತೆಯನ್ನು ಮಂಡಿಸಬಹುದಿತ್ತು ,ಇರಿಸಬಹುದಾಗಿತ್ತು ಅದನ್ನು ಬಿಟ್ಟು ಸ್ವಾಮೀಜಿ, ಬಹಿರಂಗ ಸಭೆಯಲ್ಲಿ ಬಾಯಿಗೆ ಬಂದ ಹಾಗೆ ಮಾತನಾಡುವುದು ಎಷ್ಟು ಸಮಂಜಸ ವಾದದ್ದು ?ಇದರಿಂದ ತುಸು ಬೇಸರದಿಂದ ಸೀಟಿನಿಂದ ಮುಖ್ಯ ಮಂತ್ರಿ ಯಡಿಯೂರಪ್ಪ ಮೇಲೆದಿದ್ದು ತಪ್ಪೇನಿಲ್ಲ . ಸೀಟಿನಿಂದ ಎದ್ದು ಹೊರಗೆ ನಡೆಯಲಿಲ್ಲ ಎದ್ದು ಅವರಲ್ಲಿ ಸೌಜನ್ಯವಾಗಿ ವಿನಂತಿಸಿದ್ದರು "ಸ್ವಾಮೀಜಿಗೆ ನಿಮ್ಮಿಂದ ಈ ಮಾತು ಬರಬಾರದು "ಎಂದು ಅಲವತ್ತುಕೊಂಡ ಕಾಲುಮುಟ್ಟಿ ಬೇಡಿಕೊಂಡಿದ್ದರು ಆದರೆ ವೇದಿಕೆ ಬಿಟ್ಟು ಕೆಳಗೆ ಇಳಿಯಲಿಲ್ಲ ಇದು ಸ್ವಾಮೀಜಿಯ ದುರಾಂಕಾರವೋ ಅಥವಾ ಮುಖ್ಯಮಂತ್ರಿಗಳದ್ದೋ ? ಮಾಧ್ಯಮಗಲ್ಲಿ ಪ್ರಸಾರ ಕಂಡ ವಿಡಿಯೋ ಕ್ಲಿಪ್ ನೋಡಿ ತಾವೇ ತೀರ್ಮಾನಿಸಿ . ಅಲ್ಲಿ ಮುಖ್ಯಮಂತ್ರಿಗಳೇ ಇರಲಿ ಅಥವಾ ಇನ್ನು ಯಾರೇ ಇದ್ದರೂ ಕೂಡ ಸ್ವಾಮೀಜಿ ಮಾಡಿದ್ದು ಮಹಾನ್ ತಪ್ಪು ಅಲ್ಲವೇ ?!ಸ್ವಾಮೀಜಿಗಳಲ್ಲಿ ದೇವರನ್ನು ಕಾಣುತ್ತೇವೆ ,ನಂಬುತ್ತೇವೆ ದೇವರಿಗೆ ಹತ್ತಿರವಾದವರು ,ಅನೂ ದಿನ ಅನೂ ಕ್ಷಣವೋ ಧ್ಯಾನ ಪೂಜೆ ಯಲ್ಲಿ ಮಗ್ನರಾಗಿರುತ್ತಾರೆ ಎಂದು ಅವರಲ್ಲಿ ಆತ್ಮೀಯತೆ,ಪೂಜನೀಯ ಭಾವನೆಯನ್ನು ಬೆಳೆಸುತ್ತೇವೆ ಆದರೆ ಇಂಥ ಚಟುವಟಿಕೆಗಳಿಂದ ಒಳ್ಳೆ ಸ್ವಾಮೀಜಿ ಗಳ ಮೇಲೂ ಸಹ ನಮ್ಮ ನಂಬಿಕೆ ಕುಸಿಯುತ್ತದೆ ಹಾಗೂ ಇತರ ಧರ್ಮದವರ ನಗೆಪಾಟಲಿಗೆ ನಾವು ಈಡಾಗುತ್ತಿದೆ. ಪೇಜಾವರ ಶ್ರೀಗಳು ಹಾಗೂ ಸಿದ್ದಲಿಂಗ ಮಠದ ಸ್ವಾಮೀಜಿಗಳಂತೆ ಯಾವ ಸ್ವಾಮೀಜಿ ಇನ್ನು ಜನ್ಮ ತಾಳಲಾರರಾರು ಅವರ ಪಾದದ ಧೂಳಿಗೆ ಕೂಡ ಸಮವಲ್ಲ ಇಂಥ ಕಪಟ ಭಂಡತನದ ಸ್ವಾಮೀಜಿಗಳಿಂದ ದೂರವಿರುವುದೇ ಲೇಸು ಏನಂತೀರಿ ?
ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ (ಕ್ರಪೆ:- #youtub #ಒನ್ ಇಂಡಿಯಾ)
https://www.youtube.com/watch?v=iubma_HjSqU
