ಶನಿವಾರ, ಜೂನ್ 13, 2020

ಕಾಲ ಮಿತಿಗೆ ಇಳಿದ ಯಕ್ಷಗಾನ ಮೇಳಗಳು


ಹೌದು !ಕಾಲಕ್ಕೆ ತಕ್ಕಂತೆ ಕೋಲ ಎಂಬ ಆಡು ನುಡಿ ನಮ್ಮಲಿದೆ . ಎಲ್ಲವೂ ಕಾಲದ ಮಹಿಮೆ .ಕಾಲಾಯ ತಸಂಹೀ ನಮಃ ಎಂದು ಅದಕ್ಕೆ ಹೇಳುದೇನೋ ?ಗಂಡು ಕಲೆ ಯಕ್ಷಗಾನ ಕರಾವಳಿ ಕರ್ನಾಟಕದ ಜನಪ್ರೀಯ ಜಾನಪದದ ರಂಗ ಭೂಮಿ ರೂಪ ,ಧಾರ್ಮಿಕ ಕಲೆ ,ನವ ರಸವನ್ನು ಒಂದೇ ವೇದಿಕೆಯಡಿಯಲ್ಲಿ ತಂದು ಜನಮನವನ್ನು ಯಥೇಚ್ಛವಾಗಿ ತಣಿಸುವ ಅಭೂತ ಪೂರ್ವ ಕಲಾಪ್ರಕಾರ, ಭಕ್ತಿ ,ಭಾವವನ್ನು ಮೆರೆಯುವ ದೇವತಾರಾಧನೆ ಕಲೆ. ಚೆಂದದ ವೇದಿಕೆ,ನೃತ್ಯ, ಮಾತುಗಾರಿಗೆ ,ಹಾಡುಗಾರಿಕೆ ,ವೇಷ -ಭೂಷಣ, ಚಂಡೆ -ಮದ್ದಳೆ ಶ್ರುತಿಯ ನಿನಾದ ಇವೆಲ್ಲವನ್ನೂ ಒಂದೇ ಸೂರಿನಡಿ ಕಟ್ -ಕಾಪಿ -ಪೇಸ್ಟ್ ಇಲ್ಲದೇ ನೇರವಾಗಿ ಕಾಣಸಿಗುವ ಏಕೈಕ ಕಲೆ ಅದು ಯಕ್ಷಗಾನ .ಇದರಲ್ಲಿ ತೆಂಕು ಮತ್ತು ಬಡಗು ತಿಟ್ಟು ಎಂಬ ಎರಡು ವಿಧಗಳಿವೆ. ಬಡ ಬೆಡಗು ಎಂದು ಇನ್ನೊಂದು ವಿಧ ವಿದ್ದರೂ ,ಅದು ಬಡಗು ತಿಟ್ಟು ಮಾದರಿ.ಯಕ್ಷಗಾನದ ಪದ್ಧತಿ ಒಂದೇಯಾದರೂ , ತುಸು ಪರಿ ಮಾತ್ರ ಬೇರೆ. ಇತ್ತೀಚಿಗೆ ಜನಪ್ರೀಯತೆ ಗೊಳ್ಳುತ್ತಿರುವ ತಾಳ ಮದ್ದಳೆ ಕೂಡಾ ಯಕ್ಷಗಾನದ ಇನ್ನೊಂದು ಭಾಗ ,ಮಗ್ಗುಲು .ಇನ್ನು ಯಕ್ಷಗಾನದ ಮೇಳಗಳಲ್ಲಿ ಎರಡು ವಿಧವಿದೆ.ಬಯಲಾಟ ಮೇಳ ,ಮತ್ತು ಡೇರೆ (ಟೆಂಟ್)ಮೇಳ . ಬಯಲಾಟ ಎಂದರೆ ದೇವಸ್ಥಾನದ ವತಿಯಿಂದ ನಡೆಯಲ್ಪಡುವ ಸೇವಾದರ ಹರಕೆಗನುಗುಣವಾಗಿ ನಡೆಯುವ ಯಕ್ಷಗಾನ ಮೇಳವಾದರೇ, ಅಲ್ಲಲ್ಲಿ ಡೇರೆ ಇಟ್ಟು ನಿರ್ದಿಷ್ಟ ಟಿಕೆಟ್ ನೊಂದಿಗೆ ಆಡುವ ಆಟಕ್ಕೆ ಡೇರೆ ಮೇಳ ಎಂದು ಕರೆಯಲಾಗುತ್ತದೆ .ಹೆಚ್ಚಾಗಿ ಹರಕೆ ಆಟಗಳೇ ಅಧಿಕ ಪ್ರಾಮಾಣದಲ್ಲಿರುವುದರಿಂದ ಬಯಲಾಟಗಳೇ ಹೆಚ್ಚು ಕಾಣಸಿಗುತ್ತದೆ. ಆಧುನಿಕ ವೈಜ್ಞಾನಿಕ ತಂತ್ರಜ್ಞಾನಗಳ ನಡುವೆ ಇಂದಿಗೂ ಸಹಾ ಯಕ್ಷಗಾನ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ ಎಂದರೆ ಅದಕ್ಕೆ ಯಕ್ಷಗಾನ ಪ್ರೀಯರ ಪ್ರೋತ್ಸಾಹ ,ಧಾರ್ಮಿಕತೆಯಲ್ಲಿನ ನಂಬಿಕೆಯೇ ಪ್ರಧಾನ ಅಂಶವೆನ್ನಲು ಅಡ್ಡಿಯಿಲ್ಲ .ಇದಕ್ಕೆ ಒಳ್ಳೆಯ ಉದಾಹರಣೆ ಎಂದರೆ ದಿನದಿಂದ ದಿನಕ್ಕೆ ಒಂದೊಂದು ಕ್ಷೇತ್ರ ದಿಂದ ಹುಟ್ಟಿಕೊಳ್ಳುತ್ತಿರುವ ಯಕ್ಷಗಾನ ಮೇಳಗಳೇ ಸಾಕ್ಷಿ.
ಏನೇ ಇರಲಿ, ಆದರೆ ಬೇಸರದ ವಿಚಾರವೆಂದರೆ ಹೆಚ್ಚಿನ ಯಕ್ಷಗಾನ ಮೇಳಗಳು ಕಾಲ ಮಿತಿಗೆ ಸೀಮಿತವಾಗಿರುವುದು. ಸಂಜೆ 7 ಗಂಟೆಯಿಂದ ರಾತ್ರಿ 12ರ ಒಳಗೆ ಕಥಾಪ್ರಸಂಗವನ್ನು ಪೂರ್ಣಗೊಳಿಸಿ ಪೆಟ್ಟಿಗೆಯನ್ನು ಕಟ್ಟುವ ಪದ್ಧತಿ ಜಾರಿಯಲ್ಲಿದೆ.ಆರಂಭದಲ್ಲಿ ಒಂದೆರಡು ಮೇಳಗಳಿದ್ದೂ ,ತದನಂತರ ಅದರ ಅಂಕೆ ಸಂಖ್ಯೆ ವ್ರದ್ದಿಸುತ್ತಾ ಹೋಗುತ್ತಿದೆ.ಇದು ಹಲವರಿಗೆ ಅರಗಿಸಿಕೊಳ್ಳಲಾರದ ವಿಚಾರವೆಂದರೂ, ಅತಿಶೋಯೋಕ್ತಿಯಾಗಲಾರದು. ಬೆಳಿಗ್ಗೆ ತನಕ ನಿದ್ರೆ ಬಿಟ್ಟು ನೋಡುವವರ ಸಂಖ್ಯೆ ಕುಂಠಿತಗೊಂಡಿದೆ .,ಈಗೇನಿದ್ದರೂ ಜನರು ಪಾಸ್ಟ್ ಬದುಕಿಗೆ ಹೊಂದಿಕೊಂಡಿದ್ದಾರೆ.ಎಲ್ಲವೂ ಬೇಗ ಬೇಕು.,ವೇಗದ ಜಿಂದಗಿಯಲ್ಲಿ ಮನೋರಂಜನಾತ್ಮಕವಾಗಿಯೂ ,ಸಹಾ ಜನತೆ ಅದನ್ನೇ ಬಯಸುವುದರಿಂದ ವೀಕ್ಷಕರ ಕೊರತೆ ನಿವಾರಣೆಗೆ ಕಾಲ ಮಿತಿ ಮಾಡದ ವಿಧಿಯಿಲ್ಲ.,ಆಟ ಆಡಿಸುವ ಮನೆಯ ನಾಲ್ಕು ಮಂದಿ ಮತ್ತು ಕಲಾವಿದರುಗಳೇ ಬಿಟ್ಟರೇ ,ಪ್ರೇಕ್ಷಕರ ಸಂಖ್ಯೆ ಬೆರಳಣಿಕೆಷ್ಟು ಎಂಬುದು ಸತ್ಯಕ್ಕೆ ಅರ್ಹವಾದರೂ ,ಸುಮಾರು 5-6 ಶತಮಾನಗಳ ಇತಿಹಾಸ ಇರುವ ಯಕ್ಷಗಾನ ಕಲೆಗೆ ಭಂಗ ತರುವುದು , ಹೀಗೆ ತುಂಡರಿಸುವುದು ಎಷ್ಟು ಸಮಂಜಸ ? ಕಥೆಗಳಲ್ಲಿ ಕಟ್ ,ಕೆಲವು ಪಾತ್ರಗಳ ಪ್ರವೇಶವೂ ಇಲ್ಲ.ಸ್ವಷ್ಟ ,ಸ್ವಚ್ಛ ,ಶುದ್ಧ ಸಂಭಾಷಣೆ, ಚಂಡೆ-ಮದ್ದಳೆಯೊಂದಿಗಿನ ನಿನಾದದ ನೃತ್ಯ ,ಭಾಗವತಿಕೆ ಪದಗಳೇ ಪೂರ್ಣ ಯಕ್ಷಗಾನದ ಜೀವಾಳ., ಅದೇ ಇಲ್ಲ ಅಂದ ಮೇಲೆ ಯಕ್ಷಗಾನ ನೋಡುವುದಾದರೇ, ಅದು ಯಕ್ಷಗಾನ ಅಲ್ಲವೇ ಅಲ್ಲ ಅನ್ನುವ ಕಟು ಭಾವನೆ ಮನಸ್ಸಿನಲ್ಲಿ ಪುಟಿದೇಳುತ್ತದೆ. ಎಲ್ಲಾ ವಿಚಾರದಲ್ಲೂ ,ಕಾಲಕ್ಕೆ ಹೊಂದಿಕೊಂಡು ಬಾಳುವುದು ಸರಿಯಲ್ಲ .ಯಕ್ಷಗಾನವೆಂದರೆ ಪರಂಪರೆಯ ಕಲೆ .ಇದೀಗ ಕಾಲ ಮಿತಿಯಲ್ಲಿರುವ ಯಕ್ಷಗಾನ ಕಾಲ ಕ್ರಮೇಣ ಕಾಲವಾದರೂ ಅಚ್ಚರಿ ಇಲ್ಲ.ಅದಕ್ಕಾಗಿ ಯಕ್ಷಗಾನದ ಪೋಷಕರು , ಪ್ರೋತ್ಸಾಹಕರು ಸಹರಿಸಬೇಕು . ಯಕ್ಷಗಾನ ಉಳಿಯಬೇಕು .ಬೆಳೆಯಬೇಕು . ಕಲೆಯು ಉಳಿವು ಮತ್ತು ಬೆಳವಣಿಗೆ ಯಕ್ಷಗಾನ ಪ್ರೀಯರು ಯೋಚಿಸಬೇಕಾಗಿದೆ.ಸಂತೋಷದ ವಿಚಾರವೆಂದರೇ ಡೇರೆ ಮೇಳಗಳೂ,ಸೇರಿದಂತೆ ಕೆಲವು ಬಯಲಾಟ ಮೇಳಗಳು ಇಂದಿಗೂ ಸಹಾ ಮುಂಜಾನೆ ತನಕ ಆಟ ಆಡಿಸುತ್ತಿವೆ ಇದು ಕೊಂಚ ತೃಪ್ತಿದಾಯಕ ಬೆಳವಣಿಗೆಯಾದರೂ , ಇವುಗಳು ಭವಿಷ್ಯತ್ ನಲ್ಲಿ ಕಾಲಮಿತಿಗೆ ಜಾರದಿರಲಿ ಎಂಬ ವಿಶ್ವಾಸ ,ಆಶಯ ನನ್ನದು.ರಾತ್ರಿ 9:30 ಕ್ಕೆ ಪ್ರಾರಂಭವಾಗಿ ಮುಂಜಾನೆ 6:00 ಗಂಟೆ ತನಕ ಮಂಗಳ ಪದ್ಯ ಆಲಿಸಿ, ಮನೆಕಡೆ ಹೆಜ್ಜೆ ಹಾಕುವ ಪೂರ್ತಿ ಪ್ರಮಾಣದ ಪಾತ್ರವರ್ಗವನ್ನು ಕಣ್ತುಂಬಿಸಿಕೊಳ್ಳುವ 3-4 ಭಾಗವತರುಗಳಿಂದ ಸಂಪೂರ್ಣ ಪದ್ಯದ ರಸಗವಳವನ್ನು ಆಸ್ಪಾದಿಸುವ ,ಆಲಿಸುವ ,ಕಡ್ಲೇಕಾಯಿ ,ವಡೆ ,ಅಡಿಗಡಿಗೆ ಚಾ ಹೀರುವ, ಕಣ್ಣು ಕೂರುವ, ಕೋಳಿ ನಿದ್ರೆ ಮಾಡುವ ಮಜಾನೇ ಬೇರೆ ಅಲ್ಲವೇ ?!