ಮಂಗಳವಾರ, ನವೆಂಬರ್ 4, 2025

ದರ್ಶನ್ ನ ಬೆಂಬಿಡದ ಕಾನೂನು ಕುಣಿಕೆ !

ರೇಣುಕಾ ಸ್ವಾಮಿಯ ಭೀಕರ ಕೊಲೆಗೆ ಸಂಬಂಧ ಪಟ್ಟಂತೆ ಸುಮಾರು ಒಂದೂವರೆ ವರ್ಷ ಕಳೆಯುತ್ತಾ ಬಂತು ಚಾಲೇಂಗಿಂಗ್ ಸ್ಟಾರ್ ಡಿ ಬಾಸ್ ಖ್ಯಾತಿಯ ದರ್ಶನ್ ತೂಗುದೀಪ್ ಸೆರೆ ಮನೆ ಸೇರಿ .ಇನ್ನೂ ಬಿಡುಗಡೆ ಭಾಗ್ಯ ಕೂಡಿ ಬಂದಿಲ್ಲ ಅಷ್ಟಕ್ಕೂ ಹಾಗೆ ಬಿಡುಗಡೆ ಹೊಂದಲಿಕ್ಕೆ ದರ್ಶನ್ ಅಂಡ್ ಗ್ಯಾಂಗ್ ಮಾಡಿದ ಕ್ರತ್ಯ ಸಣ್ಣದಲ್ಲ. ಕಾನೂನಿನ ಮೇಲೆ ಗೌರವ ಇಮ್ಮಡಿಯಾಗುತ್ತಿದೆ ! ಉಳ್ಳವರ ಕಪಿ ಮುಷ್ಠಿಯಲ್ಲಿ ಕಾನೂನು ಬಂಧಿಯಾಗಿರುತ್ತದೆ ಎನ್ನುವುದನ್ನು ತಳ್ಳಿ ಹಾಕಿದ್ದು ಈ ದರ್ಶನ್ ಕೇಸ್ ! ಕಾನೂನು ಎಲ್ಲರಿಗೂ ಒಂದೇ ಕಾನೂನು ಕಾಯ್ದೆಯನ್ನು ಕೈ ತೆಗೆದು ಕೊಳ್ಳುವ ,ಅದನ್ನು ತಮಗೆ ಇಷ್ಟ ಪಟ್ಟಂತೆ ಬಳಿಸಿ ಕೊಳ್ಳುವವರ ನೈಜ ಉದಾರಹಣೆಗಳ ಮಧ್ಯೆ ಇದೊಂದು ದಿಫ್ಫ್ರೆಂಟ್ ಆಗಿ ಕಾಣ ಸಿಕ್ಕಿದ್ದು ಸುಳ್ಳಲ್ಲ. ಅಪರೂಪದ ಘಟನೆ ! ಸಿನಿಮಾ ಹೀರೊ ಆಗಿ ಮೆಜೆಸ್ಟಕ್ ಸಿನಿಮಾದ ಮೂಲಕ ತೆರೆಯ ಮೇಲೆ ಪರಿಚಯಗೊಂಡ ದರ್ಶನ್ ತೂಗುದೀಪ್ ಸಾಕಷ್ಟು ಫಿಲಂಗಳು ಹಿಟ್ ಮೇಲೆ ಹಿಟ್ ಕೊಟ್ಟು ಸ್ಯಾಂಡಲ್ವೋಡ್ ಸಿನಿ ಅಂಗಳದ ಬೆಳ್ಳಿತೆರೆಯ ರೀಲ್ ನಲ್ಲಿ ಉತ್ತಮ ನಾಯಕ ನಟನಾಗಿ ಕಾಣಿಸಿಕೊಂಡು, ರಿಯಲ್ ನಲ್ಲಿ ಅಕ್ಷರಸಃ ಖಳ ನಾಯಕನೇ .! ಅದನ್ನು ಒತ್ತಿ ಹೇಳುವ ಅಗತ್ಯವಿಲ್ಲಾ ನಾಡಿನ ಪ್ರಜ್ಞಾವಂತ ಜನೆತೆಗೆ ಗೊತ್ತಿರುವಂತದ್ದೇ. ಸುಮಾರು ಘಟನೆಗಳು ಅಚ್ಚರಿಸಿ ಮೂಡಿಸಿವೆ . ಕೆಲವೊಂದು ಬೆಳಕಿಗೆ ಬಂದರೇ ಹಲವೊಂದು ಅಲ್ಲಿಯೇ ಮುದುಡಿ ಹೋಗಿದೆ. ಸ್ವತಃ ಕಟ್ಟಿಕೊಂಡವಳಿಗೆ ಈತ ಕೊಟ್ಟ ಕಾಟ ಅಂತಿಂತ್ತದ್ದಲ್ಲ ಆ ವಿಚಾರದಲ್ಲಿ ಕಂಬಿ ಎಣಿಸಿಯೂ ಬಂದಿದ್ದ. ತನ್ನ ದೀರ್ಘಕಾಲದ ಸಂಗಾತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾರೆಂದು ಕಾರಣದಿಂದ ದರ್ಶನ್ ಜೊತೆ ಆತನ ಸ್ನೇಹಿತರೊಂದಿಗೆ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿಯನ್ನು ಅಪಹರಿಸಿ ಶೆಡ್ ನಲ್ಲಿ ಚಿತ್ರ ಹಿಂಸೆ ನೀಡಿ ಭಯಾನಕ, ಭೀಕರ, ಭೀಬತ್ಸವಾಗಿ ಕೊಲೆಗೈದು ಅದನ್ನು ತನ್ನ ಸ್ನೇಹಿತರಿಗೆ ತಾವೇ ಮಾಡಿದ್ದೂ ಎಂದು ಪೊಲೀಸರ ಮುಂದೆ ಶರಣಾಗುವಂತೆ ಮಾಡಿ ,ಒಳಸಂಚು, ಸಾಕ್ಷ್ಯನಾಶ ಎಂಬ ವಿಚಾರವನ್ನು ಇಟ್ಟುಕೊಂಡು 2024ರ ಜೂನ್ 11ರಂದು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಎಷ್ಟೋ ಹರ ಸಾಹಸ ಪಟ್ಟರೂ ಬೇಲ್ ಮರೀಚಿಕೆ ಯಾದಾಗ ಒಂದಷ್ಟು ದಿನ ನಾಟಕ ಅದೂ ಇದೂ ಮಾಡಿ ಆ ಜೈಲ್ ನಿಂದ ಇಲ್ಲಿಗೆ ಈ ಜೈಲ್ ನಿಂದ ಅಲ್ಲಿಗೆ ಶಿಫ್ಟ್ ಆಗಿ ಅಂತೂ ಒಂದಷ್ಟು ಸಮಯ, ಅನಾರೋಗ್ಯದ ಕಾರಣ ಒಡ್ಡಿ ಹೊರಗಡೆ ಬಂದಿದ್ದ ದರ್ಶನ್ ,ಮತ್ತೆ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇತ್ತ ಜಾಮೀನಿಗೆ ಅದೆಷ್ಟು ಅರ್ಜಿ ಗುಜರಾಯಿಸಿದರೂ ದರ್ಶನ್ ಗೆ ಬೆಲ್ ಸಿಗುತ್ತಿಲ್ಲ ಕಾನೂನು ನಿಜಕ್ಕೂ ಕಠಿಣವಾಗಿದ್ದು ಖಂಡಿತ ಸತ್ಯ. ಇದು ಎಲ್ಲರಿಗೂ ಮಾದರಿಯಬೇಕು. ಹಲವರ ಅಭಿಪ್ರಾಯದಂತೆ ರೇಣುಕಾ ಸ್ವಾಮಿಯ ಈ ಪ್ರಕರಣವೂ ಸಹಾ ಎಲ್ಲೊ ಹಳ್ಳ ತಪ್ಪಿ ಹೋಗುತ್ತಿತ್ತು ಒಂದೊಳ್ಳೆ ನಾಣ್ಣುಡಿಯಂತೆ ಹತ್ತು ಸರಿ ಕದ್ದ ಕಳ್ಳ ಒಂದು ಸಾರಿ ಸಿಕ್ಕಿ ಹಾಕಿಕೊಳ್ಳೆಲೇ ಬೇಕು ಎನ್ನುವ ಹಾಗೆ ! ಹಾಗಂತ ಆತ ತುಂಬಾನೇ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಅಂಶವನ್ನು ನಾನು ಪ್ರಸ್ತಾಪ ಮಾಡುತ್ತಿಲ್ಲ, ಯಾವುದಾರಲ್ಲೂ ಸಿಕ್ಕಿ ಹಾಕಿ ಕೊಳ್ಳುತ್ತಿರಲಿಲ್ಲ ಎಂದೂ ನಾನು ಹೇಳುತ್ತಿಲ್ಲ ಹಲವರ ಬಾಯಿಯಲ್ಲಿ ಉದುರಿದ ಮಾತು ಅಷ್ಟೇ . ಅದಕ್ಕೆ ಪುಷ್ಟಿ ನೀಡುವಂತ ಘಟನೆಗಳು ನಡೆದಿವೆ ಬಿಡಿ ಅದು ಇಲ್ಲಿ ಅಪ್ರಸ್ತುತ .
ಸೊ ಇದೂ ಕೂಡಾ ಹಾಗೆ ಆಗುತ್ತಿತ್ತೇನೋ ಹೇಗೋ ಪೊಲೀಸರು ಪತ್ತೆ ಹಚ್ಚವಲ್ಲಿ ಯಶಸ್ವಿಯಾದರು. ಒಂದೊಳ್ಳೆ ಕಾಪ್ ಆ ತಂಡದಲ್ಲಿ ಇದ್ದುದ್ದರಿಂದ ಇದೀಗ ದರ್ಶನ ಮುದ್ದೆ ಮುರಿಯ ಬೇಕಾಗಿ ಬಂತು . ರೇಣುಕಾ ಸ್ವಾಮೀ ಮಾಡಿದ್ದು ತಪ್ಪು ಅಲ್ವೇ ? ತಪ್ಪು ಮಹಾ ತಪ್ಪೇ! ಆದರೆ ಅದಕ್ಕೆ ಶಿಕ್ಷೆ ನೀಡುವ ವ್ಯವಸ್ಥೆ ನಮ್ಮಲ್ಲಿ ಇಲ್ಲವೇ? ಅದನ್ನು ಬಿಟ್ಟು ತಾವೇ ಕಾನೂನು ಕೈಗೆತ್ತಿ ಕೊಂಡರೇ ಪ್ರತಿಫಲ ಇಷ್ಟೇ. ! ಮಾಡಿದ್ದುಣ್ಣೋ ಮಹರಾಯ !! ಹಣ,ಜನ ಬಲ ರಾಜಕೀಯ ಬೆಂಬಲ ,ಇದೆ ಎಂಬ ಕಾರಣಕ್ಕೆ ಇಲ್ಲ ಸಲ್ಲದ ವಿಚಾರಕ್ಕೆ ಕೈ ಹಾಕುವ ಮುಂಚೆ ಆಲೋಚನೆ ಮುಖ್ಯ.ಸೆಲೆಬ್ರೆಟಿಯಾಗಿ ಸಮಾಜದಲ್ಲಿ ಮುನ್ನೋಟದಲ್ಲಿರುವವರು ಈ ತರಹದ ಕ್ರತ್ಯದಲ್ಲಿ ಭಾಗಿಯಾದರೇ ಯುವ ಪೀಳಿಗೆಗಳು ಯಾರನ್ನು ಮಾದರಿಯಾಗಿ ತೆಗದು ಕೊಳ್ಳಬೇಕು? ದರ್ಶನ್ ಉತ್ತಮ ವ್ಯಕ್ತಿ ಸಮಾಜದ ಹಿತಚಿಂತಕ ಸಾಕಷ್ಟು ಸಹಾಯ ಹಸ್ತವನ್ನು ಚಾಚಿದವರು ಎಂಬ ವಿಚಾರವಿದ್ದರೂ ಈ ಒಂದು ತಪ್ಪಿನಿಂದ ಅದ್ಯಾವುದು ಲೆಕ್ಕಕ್ಕೆ ಬರುವುದು ಇಲ್ಲ.ಮೊದಲಾಗಿ ಸಹವಾಸ ದಿಂದ ದೂರ ಇರುವುದೇ ಇದಕ್ಕಿರುವ ದೊಡ್ಡ ಮದ್ದು ಎನ್ನಬಹುದೇನೋ ? ಮಾಡಿದಕ್ಕೆ ಶಿಕ್ಷೆ ಅನುಭವಿಸಲಿ ಆದಷ್ಟು ಬೇಗ ಹೊರಬಂದು ತನ್ನ ತಪ್ಪಿನ ಅರಿವಾಗಿ ಮುಂದೆ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲಿ ಎಂಬ ಆಶಯದೊಂದಿಗೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ