ಸೋಮವಾರ, ಮಾರ್ಚ್ 10, 2025

ಟೀಮ್ ಇಂಡಿಯಾ ವಿಶ್ವ ಚಾಂಪಿಯನ್ : ಕೀಪಿಂಗ್ ಗೂ ಸೈ.. ಫಿನಿಶಿಂಗ್ ಗೂ..... ನಮ್ಮ ಕೆ ಎಲ್ !

ಟೀಮ್ ಇಂಡಿಯಾ ಕ್ರಿಕೆಟ್ನಲ್ಲಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಕಳೆದ ವರ್ಷ ಕೈಗೆ ಬಂದ ತುತ್ತು ಬಾಯಿಗೆ ಬಾರದೇ ಸ್ವತಃ ನೇತೃತ್ವ ವಹಿಸಿಕೊಂಡ ವಿಶ್ವಕಪ್ ಒಂಡೇ ಫೈನಲ್ ಪಂದ್ಯದಲ್ಲಿ ಅಹಮದ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತು ಕಣ್ಣೇರಿಟ್ಟ ಭಾರತಡಾ ಕಿಲಾಡಿಗಳು ತನ್ನ ತಪ್ಪನ್ನೆಲ್ಲಾ ಮನವರಿಕೆ ಮಾಡಿಕೊಂಡು ನಂತರ ಎಲ್ಲಾ ಮ್ಯಾಚ್ ನಲ್ಲೂ ಗೆಲುವಿನ ನಗೆ ಬೀರುತ್ತಾ ಬಂದಿದ್ದಾರೆ ಐಸಿಸಿ ಆಯೋಜನೆಯಲ್ಲಿ ಕೆಲವು ತಿಂಗಳ ಮೊದಲು ನಡೆದ ವರ್ಲ್ಡ್ ಕಪ್ ಟೀ20ಯ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾವನ್ನು ಮಣಿಸಿ ಕಪ್ಗೆ ಮುತ್ತಿಟ್ಟಿತ್ತು.ಅದೇ ಸತತ ಗೆಲುವಿನ ನಾಗಲೋಟ ಮುಂದುವರೆದು ವಿಶ್ವದಲ್ಲಿ ನಾವೇ ಬಲಶಾಲಿ ಎಂದು ಉಳಿದ ರಾಷ್ಟ್ರಗಳು ಒಪ್ಪಿಕೊಳ್ಳುವಂತೆ ಮಾಡಿತು. ಅಂತೂ ಇತ್ತೀಚಿಗೆ ಪ್ರಾರಭಗೊಂಡು ಐಸಿಸಿ ಆಯೋಜನೆಯ ಪಾಕಿಸ್ತಾನ ನೇತೃತ್ವದಲ್ಲಿ ಸುಮಾರು 12 ವರ್ಷಗಳ ಬಳಿಕ ನಡೆದ ಮಿನಿ ವಿಶ್ವಕಪ್ ಎಂದು ಕರೆಯಿಸಿ ಕೊಳ್ಳುವ ಚಾಂಪಿಯನ್ ಟ್ರೋಫಿಯನ್ನು ಇಂದು ನ್ಯೂಜಿಲ್ಯಾಂಡ್ ವಿರುದ್ದ ದುಬೈನಲ್ಲಿ ನಡೆದ ಜಿದ್ದಾ ಜಿದ್ದಿ ರೋಮಾಂಚನಕಾರಿ ಪಂದ್ಯಾಟದಲ್ಲಿ ಕಪ್ನ್ನ ಎತ್ತಿಕೊಂಡಿದೆ.
ಐದೂ ಮ್ಯಾಚ್ನಲ್ಲೂ ಸೋಲಿಲ್ಲಿದ ಸರದಾರರಂತೆ ಎದುರಾಳಿ ಬಾಂಗ್ಲಾದೇಶ ದಿಂದಲೇ ಮೊದಲ್ ಗೊಂಡು ಕಪ್ ಎತ್ತಿಕೊಳ್ಳುವವರೆಗೂ ಮುಂದುವರೆಯಿತು.ಬಾಲಿಂಗ್ ,ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಟೀಮ್ ಇಂಡಿಯಾದಲ್ಲಿ ಎಲ್ಲಾ ಆಟಗಾರರ ಪಾತ್ರವೂ ಪ್ರಮುಖ ವಾಗಿ ಕಾಣಿಸಿತು . ಒಂದೊಂದು ಮ್ಯಾಚ್ನಲ್ಲಿ ಒಬ್ಬೊಬ್ಬರು ಹೀರೊಗಳಾಗಿ ಕಂಡು ಬಂದರು. ಪಾಕಿಸ್ತಾನ ವಿರುದ್ಧ ಕಿಂಗ್ ಕೊಹ್ಲಿ ಗೆಲುವಿನ ರೂವಾರಿಯಾಗಿ ಸೆಂಚುರಿ ಸಿಡಿಸಿದರೇ ,ಅತಿಮೂಲ್ಯವಾದ ಇಂದಿನ ಪಂದ್ಯದಲ್ಲಿ ಒಂದಕ್ಕಿಗೆ ಸುತ್ತಿ ಹಿಂತುರಿಗಿದರು.ಯಾವುದೇ ಮ್ಯಾಚ್ ನಲ್ಲೂ ಅಷ್ಟೊಂದು ಕಾಣಿಕೆ ನೀಡದ ಕ್ಯಾಪ್ಟನ್ ರೋಹಿತ್ ಶರ್ಮಾ ಇಂದಿನ ಮ್ಯಾಚ್ ನಲ್ಲಿ ಹಿಟ್ ಮ್ಯಾನ್ ಆಗಿ ಅಕ್ಷರಸ ಕಂಡು ಬಂದರು,ಗೆಲುವಿಗೆ ಪ್ರಮುಖ ಕಾರಣರಾದರು.ಜೊತೆಗೆ ಮ್ಯಾನ್ ಆಪ್ ದಿ ಮಾಚ್ ಪ್ರಶಸ್ತಿಗೆ ಕೂಡ ಭಾಜನರಾದರು.ಇನ್ನು ಬಿಸಿಸಿಐ ಸೈಡ್ ಲೈನ್ ಮಾಡಿದ್ದ ಶ್ರೇಯಸ್ ಅಯ್ಯರ್ಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿ ಕೊಂಡರು ಪಂದ್ಯದ್ದುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಈತ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಸ್ಕೋರ್ ಲಿಸ್ಟ್ನಲ್ಲಿ ಟೀಮ್ ಇಂಡಿಯದ ಪರವಾಗಿ ಪ್ರಥಮ ಹಾಗೂ ಓವರ್ ಆಲ್ ಆಗಿ ಎರಡನೇ ಸ್ಥಾನನ್ನು ತಮ್ಮದಾಗಿಸಿಕೊಂಡರು.ಪ್ರಥಮ ಸ್ಥಾನ ನ್ಯೂಜಿಲ್ಯಾಂಡ್ ನ ರಚಿನ್ ರವೀಂದ್ರ 263 ರನ್ ಸಂಪಾದಿಸಿದ್ದರು ಹಾಗೂ 3 ವಿಕೆಟ್ ಪಡೆದು ಸರಾಸರಿ 4.6ನಲ್ಲಿ ಮ್ಯಾನ್ ಒಫ್ ದಿ ಸೀರಿಸ್ ಪಡೆದುಕೊಂಡರು.ನಮ್ಮ ಕನ್ನಡಿಗ ವರುಣ್ ಚಕ್ರವರ್ತಿ ವಿಕೆಟ್ ಪಡೆದ ಲಿಸ್ಟ್ ನಲ್ಲಿ ಎರಡನೇ ಸ್ಥಾನದಲ್ಲಿ ಕಂಡು ಬಂದರು.,ಮೊದಲ ಸ್ಥಾನ ನ್ಯೂಜಿಲ್ಯಾಂಡ್ ನ ಹೆನ್ರಿಯ ಪಾಲ್ ಆಗಿದ್ದರೇ ಎರಡನೇದು ನಮ್ಮ ಸ್ಪಿನ್ನಿಂಗ್ ಮಾಂತ್ರಿಕ ಚಕ್ರವರ್ತಿ. ಒಂದೇ ಮ್ಯಾಚ್ ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ 10 ಓವರ್ ಗೆ 42 ರನ್ ನೀಡಿ ಅಮೂಲ್ಯ ಐದು ವಿಕೆಟ್ ಕಬಳಿಸಿದ್ದರು ಇನ್ನು ಅದೇ ಮ್ಯಾಚ್ನಲ್ಲಿ ನ್ಯೂಜಿಲ್ಯಾಂಡ್ ನ ಫಾಸ್ಟ್ ಬೌಲರ್ ಹೆನ್ರಿ ಕೂಡ ಸೇಮ್ ಟು ಸೇಮ್ ದಾಖಲೆ ನಿರ್ಮಾಣ ಮಾಡಿದ್ದರು . ಇನ್ನು ಎಲ್ಲಕಿಂತ ಹೆಚ್ಚಾಗಿ ನನ್ನ ಒಡಲಧ್ವನಿಗೆ ಕಾಡಿದ್ದು, ಬೇಡಿದ್ದು ನಮ್ಮ ಕೆ ಎಲ್ ರಾಹುಲ್!ಈತ ಮಾತ್ರ ಅದ್ಬುತ ಪ್ರತಿಭೆ ಎಂಬುದರಲ್ಲಿ ಎರಡು ಮಾತಿಲ್ಲ ಪೊಲಿಟಿಕ್ಸ್ ಹಾಗೂ ಮತ್ತಿತ್ಯಾದಿ ಕಾರಣಗಳಿಗೆ ತನ್ನನ್ನು ತ್ಯಾಗ ಮಾಡುವ ಕೆಎಲ್ಲ್ ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳದೇ ಇರಲಾರರು ಇದರ ಬಗ್ಗೆ ಹೆಚ್ಚು ಹೇಳುವ ಅಗತ್ಯ ಇಲ್ಲ.ಕ್ರಿಕೆಟ್ ನೋಡುಗರು ಕ್ರಿಕೆಟ್ ಪ್ರೇಮಿಗಳು ಖಂಡಿತವಾಗಿಯೂ ಅರಿತುಕೊಂಡಿರುತ್ತಾರೆ. ಟೀಮ್ ಇಂಡಿಯಾದ ಮೆನೇಜ್ಮೆಂಟ್ ಯಾವ ತರಹ ಅವರನ್ನು ಬಳಸಿ ಕೊಳ್ಳುತ್ತಿದ್ದಾರೆ ,ಬಲಿ ಕೊಡುತ್ತಿದ್ದಾರೆ ಎಂದು.! ಆದರೂ ಕಿಂಚಿತ್ ಅಸಮಾಧಾನ ತೋರದೇ ತನ್ನ ಪಾಡಿಗೆ ತಾನು ನ್ಯಾಯ ಒದಗಿಸುತ್ತಾ ಬರುತ್ತಿದ್ದಾರೆ.ನಿಜಕ್ಕೂ ಕ್ರಿಕೆಟ್ ಇತಿಹಾಸದಲ್ಲಿ ಈತನ ಸರಿ ಸಾಟಿ ಬೇರೆ ಯಾರು ಇರಲಿಕ್ಕಿಲ್ಲವೇನೋ ?ಓಪನಿಂಗ್ಗೂ ಸೈ . ಫಿನಿಶಿಂಗ್ಗೂ ಜೈ!! ಓಪನರ್ ಆಗಿ ಬ್ಯಾಟ್ ಬೀಸಬಲ್ಲರು ಐದನೇ,ಎಂಟನೇ ಕ್ರಮಾಂಕದಲ್ಲೂ ಕೂಡ ಬ್ಯಾಟ್ ಮಾಡಬಲ್ಲರು.ಎಲ್ಲಕಿಂತ ಹೆಚ್ಚಾಗಿ ಉತ್ತಮ ಕೀಪರ್ ! ಮೆನೇಜೆಮೆಂಟ್ ಅಪ್ಪಣೆಗನುಗುಣವಾಗಿ ಆಗಾಗ ಕೀಪರ್ , ಮ್ಯಾಚ್ ಫಿನಿಶರ್ ಆಗಿ ಕೂಡ ಕರ್ತವ್ಯ ನಿಭಾಯಿಸುವ ಕೆಲ್ ಉತ್ತಮ ಕ್ರಿಕೆಟಿಗ.ಸೆಮಿಫೈನಲ್ ಮತ್ತು ಫೈನಲ್ ಪಂದ್ಯದಲ್ಲಿ ಫಿನಿಶರ್ ಆಗಿ ತಮ್ಮ ಜವಾಬ್ದಾರಿಯುತ ಆಟ ಪ್ರದರ್ಶಿಸಿದ ಕೆಎಲ್ಲ್ ನಮ್ಮ ಹೆಮ್ಮೆ. ದಯಮಾಡಿ ಮೆನೇಜ್ಮೆಂಟ್ ಗಮನಹರಿಸಬೇಕು ಆತನ ಜೊತೆ ಬಿಟ್ಟ ಸ್ಥಳ ಭರ್ತಿ ಮಾಡಲು ಅಥವಾ ಕೆರೆಯರ್ ಹಾಳುಗೆಡುವ ರಾಜಕೀಯದಾಟ ಆಡದೇ ಆತನ ಸಾಮರ್ಥ್ಯವನ್ನು ಮನಗಾಣಿ. -shiವು