ಸೋಮವಾರ, ನವೆಂಬರ್ 24, 2025

ಇದಕ್ಕೆ ಮಟ್ಟ ಹಾಕುವವರು ಯಾರು ??

ಇದೇ ನವೆಂಬರ್ ತಿಂಗಳಲ್ಲಿ ಎರಡು ಅತೀ ದೊಡ್ಡ ದೇಶ ದ್ರೋಹಿ ಘಟನೆ ನಮ್ಮ ದೇಶದಲ್ಲಿ ನಡೆಯಿತು. ಒಂದು ನಮ್ಮ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದರೇ ಇನ್ನೊಂದು ದೇಶದ ರಾಜಧಾನಿ ದೆಹಲಿಯಲ್ಲಿ ನಡೆದು ಹೋಯಿತು. ಆಗಾಗ ಬೆಳಕಿಗೆ ಬಂದು ಸದ್ದು ಮಾಡಿ ಸುದ್ದಿಯಾಗಿ ಸೈಡ್ ಗೆ ಸರಿಯುವ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿನರುವ ಖೈದಿಗಳಿಗೆ ರಾಜಾತಿಥ್ಯ! ಈ ಬಾರಿ ಇನ್ನು ಹೊಸತಾಗಿಯೇ ನವನವೀನ ರೀತಿಯಲ್ಲಿ ಪ್ರಸಾರಕ್ಕೆ ಬಂತು.ಕೈದಿಗಳ ಎಣ್ಣೆ ಪಾರ್ಟಿ ಡಾನ್ಸ್ ,ಪಾತಕಿಗಳ ಕೈಯಲ್ಲಿ ಸ್ಮಾರ್ಟ್‌ ಫೋನ್‌,ಟಿವಿ ,ಉಗ್ರ ಗ್ರಾಮಿ ಜುಹಾದ್ ಹಮೀದ್ ಶಕೀಲ್ ಮನ್ನಾ ,ವಿಕ್ರತ ಕಾಮಿ ಉಮೇಶ್ ರೆಡ್ಡಿಗಳ ರಾಜ ಭೋಗ ವೈಭವಗಳ ಚಿತ್ರಣ ವೈರಲ್ ಆದವು. ಇದು ಕ್ಯಾಮರಾದ ಕಣ್ಣಿಗೆ ಸಿಕ್ಕ ಕೆಲವು ಸ್ಯಾಂಪಲ್ ಉದಾಹರಣೆಗಳಾದರೇ, ಇನ್ನು ತೆರೆ ಮರೆಯಲ್ಲಿ ಅದೆಷ್ಟೋ ಆ ದೇವರೇ ಬಲ್ಲ !ಇವರುಗಳು ಕೈದಿಗಳೋ ಎಂಬುದೇ ಅರ್ಥವಾಗದ ಪ್ರಶ್ನೆ! ಜೈಲಿಗೆ ಬಂದು ಶಿಕ್ಷೆ ಅನುಭವಿಸ ಬೇಕಾದ ಆರೋಪಿಗಳು ಇಲ್ಲಿ ರಾಜಾಥಿತ್ಯವನ್ನು ಪಡೆಯುತ್ತಿದ್ದಾರೆ.ನಿಜಕ್ಕೂ ಈ ಪರಿಯ ಎಂಜೋಯ್ಮೆಂಟ್ ಅವರ ಮನೆಯಲ್ಲಿ ಅಥವಾ ಇನ್ಯಾವುದೋ ಪಾರ್ಟಿಯಲ್ಲಿ ಸಿಗಲಿಕ್ಕೆ ಇಲ್ಲವೇನೋ ಅಂತ ಮಜಾ,ಮೋಜು ,ಮಸ್ತಿ ಮನೋರಂಜನೆ ಜೈಲಿನಲ್ಲಿ ಸಿಗುತ್ತಿದೆ! ಇದನ್ನೆಲ್ಲಾ ಕಂಡೇ ಪ್ರಸ್ತುತ ಅಪರಾಧ ಜಗತ್ತು ಬೆಳೆಯುತ್ತಿರುವುದು, ಆರೋಪಿಗಳಿಗೆ ಶಿಕ್ಷೆ ನೀಡುವ ಬದಲು ಮಜಾ ಉಡಾಯಿಸುವ ಅಡ್ಡಗಳಾಗುತ್ತಿರುವ ಇಂತಹ ಉಚ್ಚ ಸ್ಥಿತಿಯ ಜೈಲ್ ಗಳ ಸ್ಥಿತಿ ಇಂತಿದ್ದರೇ ಇನ್ನುಳಿದವೋ ?? ಹೀಗಾಗಿಯೇ ಅಪರಾಧಗಳು ಹೆಚ್ಚುತ್ತಿವೆ ಪಾತಕಿಗಳು ಸಲೀಸ್ ಆಗಿ ಎಂಟ್ರಿ ಕೊಡುತ್ತಾರೆ.
ಇದಕ್ಕೆ ಹೊಣೆ ಯಾರು ? ನಮ್ಮ ವ್ಯವಸ್ಥೆ ಅಲ್ಲದೆ ಮತ್ತಿನ್ನೇನು ? ಈ ವ್ಯವಸ್ಥೆಗಳು ಲೀಲಾಜಾಲವಾಗಿ ಜರುಗುತ್ತಿದೆ ಅಂದ್ರೆ ಜೈಲ್ ಅಧಿಕಾರಿಗಳ ಪಾತ್ರವಲ್ಲದೆ ಮತ್ತಿನ್ನೇನು ?ಕೇವಲ ಹಣದ ದಾಹಕ್ಕೆ ಬಲಿಯಾಗೆ ಇಂತ ಕ್ರಿಮಿನಲ್ ಗಳಿಗೆ ಸಪೋರ್ಟ್ ಮಾಡುವ ಅಧಿಕಾರಿಗಳೇ ದೊಡ್ಡ ಕ್ರಿಮಿನಲ್ ಗಳು ಈ ಕ್ರಿಮಿಗಳನ್ನು ಕಿತ್ತು ಹೊಸಕಿ ಹಾಕುವವರು ಯಾರು ? ಗೊತ್ತಿಲ್ಲ !!ಗ್ರಹ ಮಂತ್ರಿಗಳದ್ದು ಅದೇ ಡೈಲಾಗ್ ವಿಚಾರಣೆ ಮಾಡುತ್ತೇವೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ,ಜನಾಕ್ರೋಶ ಹೆಚ್ಚಾದ ಕೂಡಲೇ ತಪ್ಪಿತಸ್ಥರನ್ನು ಒಂದಷ್ಟು ದಿನ ಸಸ್ಪೆಂಡ್ ಮಾಡಿ ಮತ್ತೆ ಬೇರೆ ಕಡೆ ಟ್ರಾನ್ಸ್ಫರ್ ಮಾಡಿ ಕೊಳ್ಳುದು ಬಿಟ್ಟರೇ ಬೇರೇನೂ ಇಲ್ಲ , ಅವರನ್ನು ಡಿಸ್ಮಿಸ್ ಮಾಡುವ ಯೋಗ್ಯತೆ ಅಥವಾ ಪವರ್ ನಮ್ಮಲ್ಲಿ ಇಲ್ಲವೇ ? ಅದಕ್ಕಾಗಿ ಈ ಪರಿಯಲ್ಲಿ ಈ ಘಟನೆಗಳು ಆಗಾಗ ಮರುಕಳಿಸುತ್ತಿರವುದು. ಜನರು ದಂಗೆ ಏಳಬೇಕಾಗಿದೆ ಅಷ್ಟೇ ಇದಕ್ಕಿರುವ ಉಪಾಯ . ಇದಕ್ಕೆ ಹೊಂದಿಕೆ ಯಾಗುವ ಇನ್ನೊಂದು ಘಟನೆ ನಡೆಯಿತು. ಅದು 10ನೇ ತಾರೀಕು ,ನವೆಂಬರ್ 2025, ಸರಿಸುಮಾರು ಸಂಜೆ 6:52ರ ಸಮಯ. ಸ್ಥಳ ದೆಹಲಿಯ ರೆಡ್ ಫೋರ್ಟ್ ಸಮೀಪ, Metro Gate No.1 ಬಳಿ ಹೈಂಡೈ i20 ಕಾರಿನಲ್ಲಿ ಸ್ಫೋಟ. ಅದು ಕಾರಿನಲ್ಲಿ ಆಕಸ್ಮಿಕವಾಗಿ ತಾಂತ್ರಿಕ ದೋಷದಿಂದ ಉಂಟಾದ ಸ್ಪೋಟವಲ್ಲ ಅದರ ಒಳಗಡೆ ತುಂಬಿತ್ತು ಬಾಂಬ್ !ಆತ್ಮಹತ್ಯೆ ದಾಳಿ. ಅದರ ಒಳಗಿದ್ದ ಚಾಲಕನಾಗಿ ಉಗ್ರ, ಡಾಕ್ಟರ್ ಪದವಿ ಪಡೆದ ಉಮರ್ ನಬಿ ಎಂಬ ದೇಶ ದ್ರೋಹಿ.ಸ್ಪೋಟದ ತೀವೃತೆ ಎಷ್ಟು ಇತ್ತೆಂದರೆ 8 ಮಂದಿ ಸಾವಿಗೀಡಾಗಿದ್ದರು ೨೦ ಕ್ಕೂ ಅಧಿಕ ಬಂದಿ ಗಂಭೀರ ಸ್ಥಿತಿಗೆ ತಲುಪಿದ್ದರು. ಸ್ಥಳದಲ್ಲಿದ್ದ ಇತರ ವಾಹನಗಳೂ ಸೇರಿದಂತೆ ಅಕ್ಕ ಪಕ್ಕದ ಹಲವಾರು ಸಂಪತ್ತುಗಳು ನಷ್ಟವಾದವು.ನಾಶ ಗೊಂಡವು.
ಇದು ಭಯೋತ್ಪಾದಕ ದಾಳಿ ಎಂಬುದನ್ನು ಒತ್ತಿ ಹೇಳಬೇಕಿಗಿಲ್ಲ.ಇದನ್ನು ಉಗ್ರರಲ್ಲದೇ ಬೇರೆ ಯಾರೂ ಮಾಡಲು ಸಾಧ್ಯವಿಲ್ಲ.ಇದು ದೇಶದ ಅನ್ನ ತಿಂದ ರಕ್ತ ಪಿಪಾಸುಗಳ ಸಂಚಿನ ಕ್ರತ್ಯ.ದೇಶದ ಹೊರಗಿನ ಉಗ್ರರನ್ನು ಹೇಗೋ ಸದೆಬಡಿಯಬಹುದು ಆದ್ರೆ ಇಲ್ಲಿನ ಅನ್ನ ತಿಂದು ಜಲ ನೆಲದ ಋಣವನ್ನು ಮರೆತ ಪಾತಾಕಿಗಳನ್ನು ಪತ್ತೆಹಚ್ಚುವುದು ಹರ ಸಾಹಸ.ಇದೇನೂ ಹೊಸತಲ್ಲ ಆಗಾಗ ಶತ್ರು ರಾಷ್ಟ್ರಗಳಿಗಿಂತ ನಮ್ಮವರೇ ನಮಗೆ ದ್ರೋಹ ಬಗೆಯವ ಕೆಲಸವನ್ನು ಕಂಡಿರುತ್ತೇವೆ . ದೇಶದಲ್ಲಿನ ಒಂದೊಳ್ಳೆ ಆಡಳಿತ ಚುಕ್ಕಾಣಿ ಬಂದ ಪರಿಣಾಮ ಸುಮಾರು ಸಮಯವೇ ಕಳೆದಿದೆ ಈ ತರಹದ ಅಹಿತಕರ ಘಟನೆ ನಡೆಯದೇ.ಅಂತೂ ಮೊನ್ನೆ ಮೊನ್ನೇ ಬಾಂಬ್ ಸ್ಫೋಟ ಗೊಂಡೇ ಬಿಟ್ಟಿತು.ಇದನ್ನು ಮಟ್ಟ ಹಾಕುವುದು ಹೇಗೆ ಮಿಲಿಯನ್ ಡಾಲರ್ ಪ್ರಶ್ನೆ !